Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೆ.10 – 11 ರಂದು ಮನೋವೈದ್ಯಕೀಯ ಸಂಘದ 32ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನ
    ಊರ್ಮನೆ ಸಮಾಚಾರ

    ಸೆ.10 – 11 ರಂದು ಮನೋವೈದ್ಯಕೀಯ ಸಂಘದ 32ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನ

    Updated:08/09/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆಯ 32ನೆಯ ವಾರ್ಷಿಕ ವೈಜ್ಞಾನಿಕ ಸಮ್ಮೇಳನವು ಇದೇ ಸೆ.10ರ ಶನಿವಾರ ಮತ್ತು 11 ರ ಭಾನುವಾರ ಕೋಟೇಶ್ವರದ ಯುವ ಮೆರಿಡಿಯನ್ ಬೇ ರೆಸಾರ್ಟ್’ನಲ್ಲಿ ನಡೆಯಲಿದೆ.

    Click Here

    Call us

    Click Here

    ಯುವ ಮೆರಿಡಿಯನ್ ಹೋಟೆಲ್ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನಾಧ್ಯಕ್ಷ, ಮನೋವೈದ್ಯ ಡಾ. ಪ್ರಕಾಶ್ ತೋಳಾರ್ ಈ ಬಗ್ಗೆ ವಿವರಗಳನ್ನು ನೀಡಿದರು.

    ಉಡುಪಿ ಮತ್ತು ಮಂಗಳೂರಿನ ಮನೋವೈದ್ಯಕೀಯ ಸಂಘಗಳು ಜಂಟಿಯಾಗಿ ಆಯೋಜಿಸಿರುವ ಈ ಸಮ್ಮೇಳನವು ಸೆ.10 ರ ಶನಿವಾರ ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಸಚಿವ ಡಾ. ಅಶ್ವಥ್ ನಾರಾಯಣ್ ಸಿ. ಎನ್., ಹಿಂದುಳಿದ ವರ್ಗಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ನಾಡೋಜ ಡಾ. ಜಿ. ಶಂಕರ್ ಮೊದಲಾದ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಭಾರತೀಯ ಮನೋವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಕಿರಣ್ ಕುಮಾರ್ ಪಿ. ಕೆ. ವಹಿಸುವರು.

    ಸಮ್ಮೇಳನದ ಪೂರ್ವಭಾವಿಯಾಗಿ ಸೆ.9ರ ಶುಕ್ರವಾರ ಎರಡು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿದೆ. ಮೊದಲನೆಯ ಕಾರ್ಯಾಗಾರವು ಉಡುಪಿ ಜಿಲ್ಲೆಯ ವೃತ್ತಿಪರ ಪತ್ರಕರ್ತರಿಗಾಗಿದ್ದು, “ಆತ್ಮಹತ್ಯೆಯನ್ನು ಅರ್ಥೈಸಿಕೊಳ್ಳುವುದು”ಎಂಬ ವಿಷಯವಾಗಿರುತ್ತದೆ. ಈ ಕಾರ್ಯಾಗಾರವು ಉಡುಪಿ ಜಿಲ್ಲೆಯ ಐಎಂಎ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 9ರಿಂದ ಮಧ್ಯಾನ್ಹ 1 ರವರೆಗೆ ನಡೆಯುವುದು.

    ಎರಡನೆಯ ಕಾರ್ಯಾಗಾರವು ಕೋಟೇಶ್ವರದ ಯುವ ಮೆರಿಡಿಯನ್ ರೆಸಾರ್ಟ್ ನಲ್ಲಿ ಮಧ್ಯಾನ್ಹ 2 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಇದು ಉಡುಪಿ ಜಿಲ್ಲೆಯ ಸರ್ಕಾರಿ ವೈದ್ಯರಿಗೆ ಮತ್ತು ಐಎಂಎ ಕುಂದಾಪುರದ ವೈದ್ಯರುಗಳಿಗಾಗಿದೆ. ಇದರಲ್ಲಿ ಮಾನಸಿಕ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸುವುದು ಎಂಬ ವಿಷಯವಾಗಿ ಪರಿಣತರು ಮಾಹಿತಿ ನೀಡುವರು. ಈ ಕಾರ್ಯಾಗಾರಕ್ಕೆ ಈಗಾಗಲೇ ನೂರಕ್ಕೂ ಹೆಚ್ಚು ವೈದ್ಯರುಗಳು ನೋಂದಾವಣೆ ಮಾಡಿಕೊಂಡಿದ್ದಾರೆ.

    Click here

    Click here

    Click here

    Click Here

    Call us

    Call us

    ಸೆ 10 ಮತ್ತು 11 ರಂದು ನಡೆಯಲಿರುವ ಮುಖ್ಯ ಸಮ್ಮೇಳನವನ್ನು “ಸಮುದಾಯಕ್ಕೆ ಮಾನಸಿಕ ಆರೋಗ್ಯ ಮಾಹಿತಿ ಲಭ್ಯತೆಯ ಕುಂದು ಕೊರತೆಗಳು”ಎಂಬ ವಿಷಯದ ಕೇಂದ್ರಿತವಾಗಿರುತ್ತದೆ. ಈ ಬಗ್ಗೆ ಸಮುದಾಯಕ್ಕೆ ದೊರಕುತ್ತಿರುವ ಮತ್ತು ದೊರಕದಿರುವ ಸೇವೆಗಳ ಬಗ್ಗೆ ಚರ್ಚಿಸಲಾಗುವುದು. ಇದಕ್ಕೆ ಸಂಬಂಧಿತ ಕಾನೂನು ಅಂಶಗಳು ಇತ್ಯಾದಿ ಮಾಹಿತಿಗಳನ್ನು ಪರಿಣತ ತಜ್ಞರು ನೀಡುವರು ಎಂಬ ವಿವರಗಳನ್ನು ಸಮ್ಮೇಳನಾಧ್ಯಕ್ಷ ಡಾ. ಪ್ರಕಾಶ್ ತೋಳಾರ್ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ನಗರದ ಖ್ಯಾತ ಮನೋವೈದ್ಯ ಡಾ. ಕೆ. ಎಸ್. ಕಾರಂತ, ಇಂದು ಆತ್ಮಹತ್ಯೆ ಎಂಬುದು ಒಂದು ಸಾಮಾಜಿಕ ಪಿಡುಗಾಗಿದೆ. ಸಾಮಾನ್ಯವಾಗಿ ಮನೋರೋಗಿಗಳು ಮತ್ತು ಮನೋವೈದ್ಯರನ್ನು ಅಸ್ಪೃಷ್ಯರಂತೆ ಸಮಾಜ ಕಾಣುತ್ತಿದೆ. ಮನೋವೈದ್ಯರ ಸೇವಾ ಪ್ರತಿಫಲಗಳಿಗೆ ಪ್ರಚಾರದ ಕೊರತೆಯೇ ಇದಕ್ಕೆ ಕಾರಣ. ಆಧುನಿಕ ಜೀವನ ಶೈಲಿಯೇ ಆತ್ಮಹತ್ಯಾ ಪ್ರಕರಣಗಳಿಗೆ ಕಾರಣ. ಈ ಎಲ್ಲ ಅಂಶಗಳ ಬಗ್ಗೆ ಸಮ್ಮೇಳನದಲ್ಲಿ ಸಂವಾದ ನಡೆಯಲಿದೆ ಎಂದರು.

    ಖ್ಯಾತ ಮನೋವೈದ್ಯೆ ಡಾ. ಮಹಿಮಾ ಆಚಾರ್ಯ ಮಾತನಾಡಿ, ಸಾಮಾನ್ಯವಾಗಿ ಸ್ಕಿಜೋಫ್ರಿನಿಯಾದಂತಹ ದೊಡ್ಡ ಮಾನಸಿಕ ಕಾಯಿಲೆಗಳ ಬಗ್ಗೆಯೇ ಹೆಚ್ಚು ಚರ್ಚೆಗಳಾಗುತ್ತಿವೆ. ಇದರಿಂದಾಗಿ ಅಲ್ಪ ಪ್ರಮಾಣದ ಮನೋ ವಿಕಲ್ಪ ಹೊಂದಿದ್ದವರು ಭಯದಿಂದಲೇ ವೈದ್ಯರಲ್ಲಿಗೆ ಬರುವುದಿಲ್ಲ. ಮನೋರೋಗಿಗಳು ಆಸ್ಪತ್ರೆಗಳಿಗೇ ಬರಬೇಕೆಂದಿಲ್ಲ. ಮನೋವೈದ್ಯರೇ ಸಮುದಾಯದತ್ತ ತೆರಳಿ ಸೂಕ್ತ ಮಾಹಿತಿ, ಚಿಕಿತ್ಸೆ ಒದಗಿಸುವ ಸಾಧ್ಯತೆಗಳ ಬಗ್ಗೆ ಸಮ್ಮೇಳನದಲ್ಲಿ ವಿಶ್ಲೇಷಿಸಲಾಗುವುದು. ಸಾಮಾನ್ಯ ಮನೋ ವಿಕಲ್ಪಗಳ ಬಗ್ಗೆ ಆಪ್ತಸಮಾಲೋಚನೆಯಿಂದ ಔಷಧಿ ಇಲ್ಲದೆಯೇ ಗುಣಪಡಿಸಬಹುದು ಎಂಬುದನ್ನು ಸಾಮಾನ್ಯರಿಗೂ ಮನದಟ್ಟು ಮಾಡುವುದು, ಮನೋ ವಿಕಲ್ಪಗಳ ಲಕ್ಷಣಗಳ ಗುರುತಿಸುವಿಕೆ, ಅಂತವರ ನಿರ್ವಹಣೆಗಳ ಅರಿವು ನೀಡುವುದೇ ಈ ಸಮ್ಮೇಳನದಲ್ಲಿ ಮುಖ್ಯ ವಿಷಯವಾಗಿದೆ ಎಂಬ ಮಾಹಿತಿಗಳನ್ನು ನೀಡಿದರು.

    ಸಮ್ಮೇಳನ ಸಮಿತಿ ಕಾರ್ಯದರ್ಶಿ, ಮಣಿಪಾಲ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಸಹಪ್ರಾಧ್ಯಾಪಕ ಡಾ. ರವೀಂದ್ರ ಮುನೋಳಿ ಮಾಹಿತಿ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    twelve + ten =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.