Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇನಾಮ್ದಾರ್ ಸಿನೆಮಾ ಚಿತ್ರೀಕರಣ ಪೂರ್ಣ. ಕೆಲ ದಿನಗಳಲ್ಲಿ ತೆರೆಗೆ
    ಊರ್ಮನೆ ಸಮಾಚಾರ

    ಇನಾಮ್ದಾರ್ ಸಿನೆಮಾ ಚಿತ್ರೀಕರಣ ಪೂರ್ಣ. ಕೆಲ ದಿನಗಳಲ್ಲಿ ತೆರೆಗೆ

    Updated:13/09/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಬಹುನಿರೀಕ್ಷಿತ ಸಿನೆಮಾ ‘ಇನಾಮ್ದಾರ್’ ಚಿತ್ರೀಕರಣ ಮುಗಿದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ತೆರೆಯ ಮೇಲೆ ಬರಲಿದೆ. ಕರಾವಳಿಯ ಕನಸು ಕಂಗಳ ನಟ, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಸಿದ್ದಪಡಿಸಿದ ಕಥೆಯನ್ನು ತೆರೆಯ ಮೇಲೆ ತರುವ ನಿಟ್ಟಿನಲ್ಲಿ ಐದು ತಿಂಗಳುಗಳ ಕಾಲ ಬಯಲು ಸೀಮೆಯಿಂದ ಹಿಡಿದು ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ತನಕ ಚಿತ್ರೀಕರಣದಲ್ಲಿ ತೊಡಗಿ ಸಾಕಷ್ಟು ಶ್ರಮವಹಿಸಿದ್ದಾರೆ.

    Click Here

    Call us

    Click Here

    ನಿರ್ದೇಶಕರ ಆಸೆಗೆ ಮತ್ತು ಶ್ರಮಕ್ಕೆ ಪೂರಕವಾಗಿ ನಿರ್ಮಾಪಕ ನಿರಂಜನ್ ಶೆಟ್ಟಿ ತಲ್ಲೂರು. ಸಾಥ್ ನೀಡುವುದರ ಜೊತೆಗೆ 24/7 ನಿರ್ದೇಶಕರ ಬೆನ್ನೆಲುಬಾಗಿ ನಿಂತಿರುವುದು ಚಿತ್ರತಂಡದ ಸಂತಸ ಕ್ಕೆ ಕಾರಣವಾಗಿದೆ. ಮೂಲತಃ ಯೋಗ ಪಟುವಾಗಿರುವ ನಿರಂಜನ್ ಶೆಟ್ಟಿ ತಲ್ಲೂರು ಈಗಾಗಲೆ ತಮ್ಮ ಅದ್ಬುತ ಯೋಗ ಭಂಗಿಗಳ ಮೂಲಕ ವಿಶ್ವ ದಾಖಲೆ ಮಾಡಿದ್ದು, ಹೊಸ ಯುವ ಪ್ರತಿಭೆಗಳಿಗೆ ಅವಕಾಶ ನೀಡುತ್ತಾ, ಹೊಸತನಕ್ಕೆ ಹಾರೈಸುವ ಅದ್ಭುತ ವ್ಯಕ್ತಿ ಎನ್ನುವುದು ಚಿತ್ರ ತಂಡದ ಹೇಳಿಕೆಯಾಗಿದೆ.

    ಇನ್ನು ಇನಾಮ್ದಾರ್ ಕಥೆಗೆ ಪೂರಕವಾದ ಫ್ರೇಮ್ ಮೂಲಕ ಕಣ್ಣಿಗೆ ಕಟ್ಟಿಕೊಡುವ ರೀತಿಯ ಚಿತ್ರಣ ಸೆರೆ ಹಿಡಿದಿರುವ ಕ್ಯಾಮೆರಾಮ್ಯಾನ್ ಮುರುಧರ ಅವರು ಚಿತ್ರದ ಇನ್ನೊಂದು ಪಿಲ್ಲರ್ ಎಂದರೆ ತಪ್ಪಾಗಲಾರದು. ಬಯಲುಸೀಮೆಯ ಗಟ್ಟಿ ನೆಲೆದಿಂದ ಹಿಡಿದು ಪಶ್ವಿಮ ಘಟ್ಟದ ತಪ್ಪಲಿನ ಕಾಡಿನಲ್ಲಿಯೂ ವಯಸ್ಸಿಗೆ ಮೀರಿದ ಉತ್ಸಾಹ ತೋರುತ್ತಾ, ಚಿತ್ರತಂಡವನ್ನು ಹುರಿದುಂಬಿಸಿ ಚಿತ್ರೀಕರಣ ಮಾಡಿಸ ಶ್ರೇಯ ಮುರುಳಿ ಅವರಿಗೆ ಸಲ್ಲುತ್ತದೆ. ಬೆಳಗಾವಿಯ ಗಟ್ಟಿಮಣ್ಣಿನ ಖಡಕ್ ಸ್ಟಾರ್ ರಂಜನ್ ಛತ್ರಪತಿ ಇನಾಮ್ದಾರ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ, ಕಥೆಗೆ ಬೇಕಾದಂತೆ ತಮ್ಮ ಪ್ರತಿಭೆಯನ್ನು ಓರೆ ಹಚ್ಚಿದ್ದಾರೆ. ಕಪ್ಪು ಸುಂದರಿಯಾಗಿ ಅಭಿನಯಿಸಬೇಕಾಗಿದ್ದ ಭೂಮಿ ಶೆಟ್ಟಿ ಬದಲು ಕುಡ್ಲದ ಬೆಡಗಿ ನಗುಮುಖದ ಸುಂದರಿ ಶಿರಶ್ರೀ ಅಂಚನ್ ಇನಾಮ್ದಾರ್ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಈಗಾಗಲೇ ಕನ್ನಡ, ತುಳು, ತಮಿಳು ಸಿನೆಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದು, ಸದ್ಯ ಇನಾಮ್ದಾರ್ ಸಿನೆಮಾದ ನಾಯಕಿಯಾಗಿ ಕುಡ್ಲದ ಕಂಪು ಹರಿಸಿದ್ದಾರೆ.

    ಚಿತ್ರದ ಮುಖ್ಯಭೂಮಿಕೆಯಲ್ಲಿ ಪ್ರಮೋದ್ ಶೆಟ್ಟಿ, ಶರತ್ ಲೋಹಿತಾಶ್ವ, ಅವಿನಾಶ್, ಥ್ರಿಲ್ಲರ್ ಮಂಜು ಎಸ್ತಾರ್ ನೆರೋನಾ , ಎಂಕೆಮಠ ಅವರಂತ ಹಿರಿಯ ನಟರಿದ್ದು, ರಘುಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ,ನಾಗರಾಜ್ ರಾವ್, ಹಾಲಂಬಿ ಅವರಂತ ಕರಾವಳಿಯ ಪ್ರತಿಭೆಗಳ ಸಮಾಗಮ ಚಿತ್ರದಲ್ಲಿ ನೋಡಬಹುದಾಗಿದೆ. ಚಿತ್ರಕ್ಕೆ ಲಕ್ಕಿ ನಾಗೇಶ್ ಹೇರಾಂಜಾಲು, ಆರ್. ಕೆ. ಮಂಗಳೂರು ಸಹಕಾರ ನೀಡಿದ್ದು, ಸಹ ನಿರ್ದೇಶನದಲ್ಲಿ ರಾಜ್ ಕೃಷ್ಣ ಮತ್ತು ಮಿಥುನ್ ತೀರ್ಥಹಳ್ಳಿ ಶ್ರೀಧರ್ ಶ್ರೀ, ನವೀನ್ ಸಾಥ್ ನೀಡಿದ್ದಾರೆ. ಚಿತ್ರತಂಡದಲ್ಲಿ ವಿನಯ್ ಉಳ್ಳೂರು, ಸನತ್ ಉಪ್ಪುಂದ, ಅನೀಶ್ ಡಿಸೋಜಾ, ಮತ್ತಿತರರು ಸಹಕಾರ ನೀಡಿದ್ದಾರೆ.

    ಬಯಲುಸೀಮೆಯ ಒಂದು ಜನಾಂಗ ಮತ್ತು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಇನ್ನೊಂದು ಜನಾಂಗ ನಡುವೆ ನಡೆಯುವ ವರ್ಣ ಭೇದದ ಕಥೆಯ ಜೀವಾಳ. ಚಿತ್ರದುದ್ದಕ್ಕೂ ಪಶ್ಚಿಮ ಘಟ್ಟದ ತಪ್ಪಲಿನ ಸೌಂದರ್ಯ ಕಾಣಬಹುದಾಗಿದ್ದು, ಬಯಲು ಸೀಮೆಯ ಸೊಬಗು ಚಿತ್ರ ರಸಿಕರಿಗೆ ಮೆಚ್ಚಿಗೆಯಾಗಲಿದೆ. ಸದ್ಯ ಇನಾಮ್ದಾರ್ ಚಿತ್ರ ಚಿತ್ರೀಕರಣ ಸಂಪೂರ್ಣ ಮುಗಿದಿದ್ದು, ಇನ್ನು ಕೆಲವು ತಿಂಗಳುಗಳಲ್ಲಿ ಕರಾವಳಿ ಪ್ರತಿಭೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಎರಡನೇಯ ಚಿತ್ರ ತೆರೆಯ ಮೇಲೆ ಮೂಡಿಬರಲಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.