Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ರೈ.ಸೇ.ಸ. ಸಂಘದ ಮಹಾಸಭೆ: ರೂ.4.69 ಕೋಟಿ ಲಾಭ, ಸದಸ್ಯರಿಗೆ 15% ಡಿವಿಡೆಂಟ್
    ಊರ್ಮನೆ ಸಮಾಚಾರ

    ಖಂಬದಕೋಣೆ ರೈ.ಸೇ.ಸ. ಸಂಘದ ಮಹಾಸಭೆ: ರೂ.4.69 ಕೋಟಿ ಲಾಭ, ಸದಸ್ಯರಿಗೆ 15% ಡಿವಿಡೆಂಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 45ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು.

    Click Here

    Call us

    Click Here

    ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 45 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.853 ಕೋಟಿ ವ್ಯವಹಾರ ನಡೆಸಿ, ರೂ 4.69 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ. ಸತತ 18 ವರ್ಷಗಳಿಂದ ‘ಎ’ ವರ್ಗದ ಆಡಿಟ್ ವರ್ಗೀಕರಣದಲ್ಲಿದೆ ಎಂದು ಹೇಳಿದರು.

    ಸಂಘವು ವರ್ಷದಲ್ಲಿ ರೂ. 193.47 ಕೋಟಿ ಠೇವಣಿ ಸಂಗ್ರಹಿಸಿ, ರೂ. 161.46 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 82.08 ಕೋಟಿ ಹೂಡಿಕೆ ಮಾಡಿದೆ. ರೂ.27.02 ಕೋಟಿ ನಿಧಿಗಳು, ರೂ.2.26 ಕೋಟಿ ಪಾಲು ಬಂಡವಾಳ ಹೊಂದಿದೆ. ರೂ.16.88 ಕೋಟಿ ಕೃಷಿ ಸಾಲ, 7.96 ಕೋಟಿ ರೈತ ಸಿರಿ ಸ್ವ-ಸಹಾಯ ಗುಂಪುಗಳ ಸಾಲ ನೀಡಲಾಗಿದೆ ಎಂದರು.

    ತಾಲೂಕು ವ್ಯಾಪ್ತಿಗೆ ಸಾಲ ಸೌಲಭ್ಯ ಸಹಿತ ಸಂಘದ ಸೇವೆಯನ್ನು ವಿಸ್ತರಣೆ ಮಾಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಉದ್ದೇಶಿತ ರೈತಸಿರಿ ಅಗ್ರಿಮಾಲ್ ಯೋಜನೆಗೆ ಪ್ರಾಥಮಿಕ ಹಂತದ ಫೈಲ್ ಫೌಂಡೇಶನ್ ಕಾಮಗಾರಿ ನಡೆಸಿದ್ದು, ಉಚ್ಛ ನ್ಯಾಯಲಯದ ಆದೇಶ ಹಾಗೂ ಸಹಕಾರ ಇಲಾಖೆಯ ನಿಬಂಧನೆಗಳಿಗೆ ಒಳಪಟ್ಟು ಮುಂದಿನ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದೇವೆ ಎಂದರು.

    ಸಂಘದಲ್ಲಿ 7200ಕ್ಕೂ ಮಿಕ್ಕಿ ಸದಸ್ಯರನ್ನೊಳಗೊಂಡ ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲಾಗಿದ್ದು, ಅವಶ್ಯಕತೆಗನುಗುಣವಾಗಿ ಸಾಲ ಸೌಲಭ್ಯ, ಗಂಪುಗಳ ಅಭಿವೃದ್ಧಿ ಪ್ರಗತಿಗಾಗಿ ಸದಸ್ಯರಿಗೆ ಉದ್ಯೋಗ ಮಾಹಿತಿ, ಗುತ್ತಿಗೆ ಆಧಾರದಲ್ಲಿ 10 ಮಂದಿ ರೈತಸಿರಿ ಪ್ರತಿನಿಧಿಗಳನ್ನು ನೇಮಿಸಿಕೊಳ್ಳಲಾಗಿದೆ. 820ಕ್ಕೂ ಮಿಕ್ಕಿ ಸದಸ್ಯರನ್ನೊಳಗೊಂಡ ರೈತ ಕೂಟವನ್ನು ರಚಿಸಲಾಗಿದ್ದು, ಪ್ರತಿ ತಿಂಗಳ ಕೊನೆಯ ಶನಿವಾರ ಮಾಸಿಕ ಸಭೆ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ ಎಂದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಸಂಘದ ಸದಸ್ಯರಾದ ನವೀನಚಂದ್ರ ಉಪ್ಪುಂದ, ರವಿಚಂದ್ರ ಉಪ್ಪುಂದ, ಮಧುಸೂದನ ಹೆಬ್ಬಾರ್, ಮೋಹನಚಂದ್ರ, ಐ ನಾರಾಯಣ ಮೊದಲಾದವರು ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭ ಸಂಘದ 24 ಮಂದಿ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.

    ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್, ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಬಿ. ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ್, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು.

    ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಪ್ರಬಂಧಕ ಚಂದಯ್ಯ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    two × 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.