Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜಕ್ಕೆ ಒಳ್ಳೆಯದ್ದನ್ನೇ ಮಾಡುವುದು ಭಗವಂತನಿಗೆ ನಾವು ಸಲ್ಲಿಸುವ ತೆರಿಗೆ: ಕೆರಾಡಿ ಚಂದ್ರಶೇಖರ ಶೆಟ್ಟಿ
    ಊರ್ಮನೆ ಸಮಾಚಾರ

    ಸಮಾಜಕ್ಕೆ ಒಳ್ಳೆಯದ್ದನ್ನೇ ಮಾಡುವುದು ಭಗವಂತನಿಗೆ ನಾವು ಸಲ್ಲಿಸುವ ತೆರಿಗೆ: ಕೆರಾಡಿ ಚಂದ್ರಶೇಖರ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಸುಂದರ ಸಮಾಜ ನಿರ್ಮಾಣದ ಮೂಲಕ ದೇಶವನ್ನು ಕಟ್ಟುವ ಕೆಲಸ ಮಡಬೇಕು. ಎಲ್ಲವನ್ನೂ ಕೊಟ್ಟ ಸಮಾಜದ ಋಣವನ್ನು ತೀರಿಸುವ ನೆಲೆಯಲ್ಲಿ ಜಿಸಿಐನಂತಹ ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಗಳು ನಡೆಯುವಂತಾಗಬೇಕು. ಉತ್ತಮ ಜನರ ಸಹವಾಸ ಗೆಳೆತನ ಬೆಳೆಸಿಕೊಂಡರೆ ಮಾತ್ರ ಜೀವನ ಉತ್ತಮವಾಗಲು ಸಾಧ್ಯ ಎಂದು ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು.

    Click Here

    Call us

    Click Here

    ಉಪ್ಪುಂದ ಮಾತೃಸ್ರೀ ಸಭಾಭವನದಲ್ಲಿ ಒಂದು ವಾರಗಳ ಕಾಲ ನಡೆದ ಜೇಸಿಐ ಸಪ್ತಾಹ ಸಮ್ಮಿಲನದ ಸಮಾರೋಪದಲ್ಲಿ ಮಾತನಾಡಿದರು. ವಿದ್ಯಾರ್ಥಿವೇತನಕ್ಕಿಂತ ಮಾಹಿತಿ ತರಬೇತಿ ಶಿಬಿರಗಳಿಂದ ಹೆಚ್ಚಿನ ಲಾಭ ವಿದ್ಯಾರ್ಥಿಗಳಿಗೆ ದೊರೆಯುತ್ತದೆ. ಜ್ಞಾನವನ್ನು ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಅವಶ್ಯವಿರುವ ಮಾಹಿತಿ ತರಬೇತಿ ಪಡೆದುಕೊಳ್ಳಲು ಜೆಸಿಐ ವತಿಯಿಂದ ಕಾರ್ಯಗಾರಗಳನ್ನು ಆಯೋಜಿಸಬೇಕು. ಹುಟ್ಟುವಾಗ ಏನನ್ನೂ ತರದ ನಾವುಗಳು ಸಾಯುವಾಗಲೂ ಬರಿಕೈಯಲ್ಲಿ ಹೋಗುತ್ತೇವೆ. ಹುಟ್ಟು ಸಾವಿನ ನಡುವಿನ ನಮ್ಮ ಬದುಕಿನಲ್ಲಿ ಸಮಾಜಕ್ಕೆ ಒಳ್ಳೆಯದ್ದನ್ನೇ ಮಾಡಬೇಕಿದೆ. ಇದು ಭಗವಂತನಿಗೆ ನಾವು ಸಲ್ಲಿಸುತ್ತಿರುವ ತೆರಿಗೆಯಾಗಿದೆ ಎಂದರು.

    ಉಪ್ಪುಂದ ಜೆಸಿಐ ಘಟಕದ ಅಧ್ಯಕ್ಷ ನಾಗರಾಜ್ ಪೂಜಾರಿ ಉಬ್ಜೇರಿ ಅಧ್ಯಕ್ಷತೆವಹಿಸಿದ್ದರು. ಉದ್ಯಮಿ ಗುರುದತ್ ಶೇಟ್ ಇವರಿಗೆ ಉದ್ಯಮರತ್ನ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಲನಚಿತ್ರ, ಕಿರುತೆರೆ ನಿರ್ದೇಶಕ, ಛಾಯಾಗ್ರಾಹಕ ನಾಗರಾಜ್ ಉಪ್ಪುಂದ ಇವರನ್ನು ಸನ್ಮಾನಿಸಲಾಯಿತು. ಪೂವಾಧ್ಯಕ್ಷ ಪುರುಷೋತ್ತಮದಾಸ್ ಇವರಿಗೆ ಕಮಲಪತ್ರ ಪ್ರಶಸ್ತಿ ಪ್ರದಾನಿಸಲಾಯಿತು.

    ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ ಶೆಟ್ಟಿ ಕುದ್ರುಕೋಡು, ಉದ್ಯಮಿಗಳಾದ ಬಿ. ಎಸ್. ಸುರೇಶ ಶೆಟ್ಟಿ, ಜನಾರ್ದನ ದೇವಾಡಿಗ, ಯು. ಎ. ಮಂಜು ದೇವಾಡಿಗ, ಜೆಸಿಐ ಬೈಂದೂರು ಸಿಟಿ ಅಧ್ಯಕ್ಷೆ ಸವಿತಾ ದಿನೇಶ್, ಪೂರ್ವಾಧ್ಯಕ್ಷ ಪ್ರಿಯದರ್ಶಿನಿ ಬೆಸ್ಕೂರು, ಗ್ರಾಪಂ ಸದಸ್ಯ ವೀರೇಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಪೂರ್ವಾಧ್ಯಕ್ಷ ದೇವರಾಯ ದೇವಾಡಿಗ ಸ್ವಾಗತಿಸಿದರು. ಕಾರ್ಯದರ್ಶಿ ಜಗದೀಶ್ ದೇವಾಡಿಗ ವಂದಿಸಿದರು. ಸುಬ್ರಹ್ಮಣ್ಯ ಜಿ. ನಿರೂಪಿಸಿದರು. ನಂತರ ರಿದಂ ಬೈಂದೂರು ತಂಡದವರಿಂದ ನೃತ್ಯವೈವಿದ್ಯ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    fifteen − 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.