Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡದ ಕಾಯಕಯೋಗಿ ವೀರಣ್ಣ ಕುರವತ್ತಿಗೌಡರ್
    ಸಂದರ್ಶನ

    ಕನ್ನಡದ ಕಾಯಕಯೋಗಿ ವೀರಣ್ಣ ಕುರವತ್ತಿಗೌಡರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಹಸಿರು ಬಣ್ಣದ ಧಿರಿಸು ಧರಿಸಿ, ಹಸಿರು ಶಾಲಿನ ಜೊತೆಯಲ್ಲೊಂದು ಕನ್ನಡದ ಶಾಲು ಹೊದ್ದು, ಬಗಲಿಗೊಂದು ಬ್ಯಾಗು ಸಿಕ್ಕಿಸಿಕೊಂಡು ಅವರು ಹೊರಟರೆಂದರೇ ಎಲ್ಲಿಯೋ ಕನ್ನಡದ ಕಾರ್ಯಕ್ರಮವಿದೇ ಎಂದೇ ಅರ್ಥ. ಅಷ್ಟರ ಮಟ್ಟಿಗೆ ಈ ವ್ಯಕ್ತಿಗೂ ಕನ್ನಡ ಕಾರ್ಯಕ್ರಮಗಳಿಗೂ ಬಿಡಿಸಲಾರದ ನಂಟು ಬೆಳೆದಿದೆ.

    Click Here

    Call us

    Click Here

    ಹೌದು ವೀರಣ್ಣ ನಾಗಪ್ಪ ಕುರವತ್ತಿಗೌಡರ ಎಂಬ ಈ ಕಾಯಕಯೋಗಿ, ಬರಿಯ ತನ್ನ ದುಡಿಮೆಗಷ್ಟೇ ಸೀಮಿತವಾಗಿ ಉಳಿಯದೇ ಕನ್ನಡ ರಚನಾತ್ಮಕ ಕಾಯಕದಲ್ಲಿ ದಶಕಗಳಿಂದ ತೊಡಗಿಸಿಕೊಂಡಿದ್ದಾರೆ. ಸಾಹಿತ್ಯ ಸಮ್ಮೇಳನಗಳೆಂದರೇ ಯಾರೂ ಬರುವುದಿಲ್ಲ. ಅದು ಒಂದಿಷ್ಟು ಸೀಮಿತ ವರ್ಗಕ್ಕಷ್ಟೇ ಸಂಬಂಧಿಸಿದ್ದು ಎಂಬ ಆರೋಪಗಳಿಗೆ ಅಪವಾದವೆಂಬಂತಿರುವ ವೀರಣ್ಣ ಈವರೆಗೆ 25 ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ, 45ಕ್ಕೂಹೆಚ್ಚು ವಿವಿಧ ಜಿಲ್ಲಾ ತಾಲೂಕು ಸಮ್ಮೇಳನಗಳಲ್ಲಿ, ನೂರಾರು ಕನ್ನಡಪರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತನ್ನ ಕನ್ನಡ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಸಮ್ಮೇಳನಗಳಿಗೆ ಯಾರು ಬರುತ್ತಾರೋ ಇಲ್ಲವೂ ಗೊತ್ತಿಲ್ಲ ವೀರಣ್ಣ ಮಾತ್ರ ಕನ್ನಡದ ಕಾರ್ಯಕ್ರಮಗಳಿಗೆ ಖಾಯಂ ಹಾಜರ್. (ಕುಂದಾಪ್ರ ಡಾಟ್ ಕಾಂ ವರದಿ)

    ಮೂಲತಃ ಹಾವೇರಿ ಜಿಲ್ಲೆಯ ಗುತ್ತಲ ಗ್ರಾಮದವರಾದ ನಲವತ್ತೈದು ವರ್ಷ ಪ್ರಾಯದ ವೀರಣ್ಣ ಸುಮಾರು ಹದಿನಾರು ವರ್ಷದ ಹಿಂದೆ ಕೃಷಿಯಲ್ಲಿ ನಷ್ಟ ಅನುಭವಿಸಿ ಬದುಕು-ಉದ್ಯೋಗ ಅರಸಿಕೊಂಡು ಊರನ್ನು ತೊರೆದು ಉಡುಪಿಗೆ ಬಂದು ನೆಲೆಸಿದವರು. ಇಲ್ಲಿ ಕೂಲಿ ಕೆಲಸ ಮಾಡಿಕೊಂಡು ಹೆಂಡತಿ ಮಗನೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಕರಾವಳಿ ತನಗೆ ಹೊಸ ಬದುಕನ್ನು ನೀಡಿದೆ ಎಂಬುದನ್ನು ಅವರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ

    ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರಾಗಿರುವ ವೀರಣ್ಣ, ಹೊಸದಾಗಿ ಸದಸ್ಯರಾಗಬಯಸುವವರಿಗೂ ಮಾರ್ಗದರ್ಶನವನ್ನಿತ್ತು ತಮ್ಮ ಬ್ಯಾಗಿನಲ್ಲಿ ಸದಾ ಇರುವ ಫಾರಂ ತುಂಬಿಸಿ ಪರಿಷತ್ತಿಗೆ ಕಳುಹಿಸಿಕೊಡುತ್ತಿದ್ದಾರೆ. ಕೂಲಿ ಕೆಲಸ ಮಾಡುವುದರ ಜೊತೆಯಲ್ಲಿಯೇ ಕವನ ಬರೆಯುವ ಅಭಿರುಚಿಯನ್ನೂ ಬೆಳೆಸಿಕೊಂಡಿರುವ ಅವರು. 2010ರಲ್ಲಿ ‘ರೈತನ ಕೂಗು’ ಎಂಬ ಕವನ ಸಂಕಲನವನ್ನೂ ಹೊರತಂದಿದ್ದಾರೆ.(ಕುಂದಾಪ್ರ ಡಾಟ್ ಕಾಂ ವರದಿ)

    ಉಡುಪಿಯಲ್ಲಿ ಪರಿಷತ್ತಿನ ಕಟ್ಟಡ ನಿರ್ಮಾಣವಾಗಬೇಕೆಂದು ತಮ್ಮ ಮೂರು ದಿನದ ದುಡಿಮೆಯ ಹಣವನ್ನು ನೀಡಿ ತಮ್ಮ ಅಭಿಮಾನವನ್ನು ತೋರಿಸಿಕೊಟ್ಟಿದ್ದಾರೆ. ಕನ್ನಡದ ಬಗ್ಗೆ ವೇದಿಕೆಗಳಲ್ಲಿ ಮಾತಾನಾಡುವ ಮಂದಿ ಮೊದಲು ತಮ್ಮ ಮಕ್ಕಳನ್ನು ಕನ್ನಡದ ಶಾಲೆಗೆ ಸೇರಿಸಲಿ. ಆಗ ಮಾತ್ರ ಅವರಿಗೆ ಕನ್ನಡದ ಬಗೆಗೆ ಮಾತನಾಡುವ ನೈತಿಕತೆ ಇರುತ್ತದೆ ಎಂದು ಆಕ್ರೋಶವನ್ನೂ ಅವರು ವ್ಯಕ್ತಪಡಿಸುವ ವೀರಣ್ಣನಿಗೆ ತನ್ನ ಹುಟ್ಟೂರಿನಲ್ಲಿ ಹೋಬಳಿ ಮಟ್ಟದ ಕನ್ನಡದ ಕಾರ್ಯಕ್ರಮವನ್ನು ಸಂಘಟಿಸಬೇಕು ಎನ್ನುವ ಅಭಿಲಾಷೆ ಇದೆ. (ಕುಂದಾಪ್ರ ಡಾಟ್ ಕಾಂ ವರದಿ)

    Click here

    Click here

    Click here

    Call us

    Call us

    ಅದೇನೇ ಇರಲಿ. ತುತ್ತಿನ ಚೀಲಕ್ಕಾಗಿ ದಿನವೂ ದುಡಿಯಬೇಕಾದ ಅನಿವಾರ್ಯತೆಯ ನಡುವೆ ವೀರಣ್ಣ ಅವರ ಕನ್ನಡ ಪ್ರೀತಿಯನ್ನು ಮಾತ್ರ ಮೆಚ್ಚಲೇಬೇಕಾದುದು.

    -ಸುನಿಲ್ ಹೆಚ್. ಜಿ. ಬೈಂದೂರು

    Kannada KASAPA
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ರಾಮೀ ಗ್ರೂಪ್ಸ್ ಸಂಸ್ಥಾಪಕ, ಹೆಸರಾಂತ ಉದ್ಯಮಿ ವರದರಾಜ್ ಎಂ. ಶೆಟ್ಟಿ ಅವರ ವಿಶೇಷ ಸಂದರ್ಶನ

    14/12/2023

    Video ಅಪಘಾತಕ್ಕೀಡಾಗುವ ಅನಾಥ ಗೋವುಗಳ ಆಪತ್ಭಾಂದವ ಬೈಕ್ ಮೆಕ್ಯಾನಿಕ್ ಸಂಜೀವ

    14/10/2023

    INTERVIEW ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳೇ ನಮಗೆ ಮತವಾಗಲಿದೆ – ಗುರುರಾಜ ಶೆಟ್ಟಿ ಗಂಟಿಹೊಳೆ

    05/05/2023
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.