Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಸ ಕೃತಿಗಳ ನಡುವೆ ಹಳೆಯ ಪುಸ್ತಕಗಳ ಮೇಳ
    alvas nudisiri

    ಹೊಸ ಕೃತಿಗಳ ನಡುವೆ ಹಳೆಯ ಪುಸ್ತಕಗಳ ಮೇಳ

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ:
    ಅಲ್ಲಿ ಹಳೆಯ ಪುಸ್ತಕಗಳಿದ್ದವು. ಹೊಸ ಕೃತಿಗಳ ಸಂಗ್ರಹವೂ ಇತ್ತು. ಕೃತಿಗಳತ್ತ ಕಣ್ಣು ಹಾಯಿಸಿ ಸಾಗುವವರು, ಹಾಗೆ ಸಾಗುತ್ತಲೇ ಇಷ್ಟವಾದ ಪುಸ್ತಕವನ್ನು ಕೈಗೆತ್ತಿಕೊಳ್ಳುವವರೂ ಇದ್ದರು. ಮಕ್ಕಳು, ಯುವಕರು, ಮಧ್ಯವಯಸ್ಕರು ಮತ್ತು ವಯೋವೃದ್ಧರು ಪುಸ್ತಕ ಪ್ರೀತಿಯೊಂದಿಗೆ ಅಲ್ಲಿದ್ದರು. ಸಾಹಿತ್ಯ, ಧರ್ಮ ಆಧ್ಯಾತ್ಮ, ಸಂಸ್ಕೃತಿ ಸೇರಿದಂತೆ ವಿವಿಧ ಬಗೆಯ ಕೃತಿಗಳ ರಾಶಿ ಎದ್ದುಕಾಣುತ್ತಿತ್ತು.

    Click Here

    Call us

    Click Here

    ಮೂಡುಬಿದಿರೆಯ ಆಳ್ವಾಸ್ ಆವರಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ 2022ರ ಪ್ರಯುಕ್ತ ಆಯೋಜಿತವಾದ ಪುಸ್ತಕ ಮೇಳದ ವಿಶೇಷ ಚಿತ್ರಣವಿದು. ಇಲ್ಲಿ 10ಕ್ಕೂ ಹೆಚ್ಚು ಪುಸ್ತಕದ ಸ್ಟಾಲ್‌ಗಳಿದ್ದು ಪುಸ್ತಕ ಓದುಗರನ್ನು ಸೆಳೆಯುತ್ತಿವೆ.

    ಹಳೆಯ ಪುಸ್ತಕಗಳನ್ನು ನೋಡುವ ಕುತೂಹಲದೊಂದಿಗೆ ಹಲವರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ತಮ್ಮಿಷ್ಟದ ಕ್ಷೇತ್ರಕ್ಕೆ ಸಂಬಂಧಿಸಿದ ಹೊಸ ಪುಸ್ತಕಗಳು ಬಂದಿದ್ದರೆ ಖರೀದಿಸುವ ಇರಾದೆಯೊಂದಿಗೆ ಭಾಗವಹಿಸುವವರೂ ಇದ್ದಾರೆ. ಧರ್ಮ-ಆಧ್ಯಾತ್ಮಕ್ಕೆ ಸಂಬಂಧಿಸಿದ ಪುಸ್ತಕಗಳ ಸ್ಟಾಲ್‌ಗಳಲ್ಲಿ ಹಿರಿಯರು ಕಾಣಿಸಿಕೊಂಡರೆ ಎಲ್ಲಾ ಬಗೆಯ ಪುಸ್ತಕಗಳು ಲಭ್ಯವಿರುವ ಸ್ಟಾಲ್‌ಗಳ ಕಡೆಗೆ ಎಲ್ಲಾ ವಯೋಮಾನದವರು ಧಾವಿಸುತ್ತಿದ್ದಾರೆ.

    ಸಪ್ನಾ ಬುಕ್ ಹೌಸ್, ನವಕರ್ನಾಟಕ ಸೇರಿದಂತೆ ಕರ್ನಾಟಕದ ವಿವಿಧ ಪ್ರತಿಷ್ಠಿತ ಪ್ರಕಾಶನ ಸಂಸ್ಥೆಗಳ ಮಳಿಗೆಗಳು ಇಲ್ಲಿವೆ. ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಕಟಿಸಿದ ಪುಸ್ತಕಗಳೂ ಇಲ್ಲಿ ಲಭ್ಯವಿವೆ. ಆಳ್ವಾಸ್ ನುಡಿಸಿರಿ, ವಿರಾಸತ್ ಸಾಂಸ್ಕೃತಿಕ ವೇದಿಕೆಗಳ ಮೂಲಕ ವ್ಯಕ್ತವಾದ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ತಜ್ಞರ ವಿಚಾರಗಳನ್ನೊಳಗೊಂಡ ವಿಶೇಷ ಸಂಪುಟಗಳೂ ಇಲ್ಲಿ ಮಾರಾಟಕ್ಕೆ ಲಭ್ಯವಿವೆ. ’ನುಡಿಸಿರಿ’ ಸಮ್ಮೇಳನದ ಸಂದರ್ಭದಲ್ಲಿ ಹೊರತರಲಾದ ಎಲ್ಲಾ ವಾರ್ಷಿಕ ಸಂಚಿಕೆಗಳು ಒಂದೆಡೆ ಸಿಗುತ್ತಿವೆ. ಸಿರಿಗನ್ನಡ, ಕರಾವಳಿ ಕರ್ನಾಟಕ ಸಂಪುಟದ ಕೃತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ.

    ದಕ್ಷಿಣ ಕನ್ನಡದ ಸಾಹಿತ್ಯದ ವಿಶೇಷತೆಯನ್ನು ಪರಿಚಯಿಸುವ ಹಲವು ಕೃತಿಗಳು ಇಲ್ಲಿ ಖರೀದಿಗೆ ಲಭ್ಯವಿವೆ. ಹಳೆಯ ಪುಸ್ತಕಗಳನ್ನು ಮುಖಬೆಲೆಗಿಂತ ಅರ್ಧದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಹೆಚ್ಚಾಗಿ ಮೆಡಿಕಲ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆಗಳಿಗೆ ಅನೂಕೂಲಕರವಾಗುವಂತಹ ಪುಸ್ತಕಗಳನ್ನು ಮಂಡಿಪೇಟೆ, ದಾವಣಗೆರೆಯ ಮಳಿಗೆಗಳಲ್ಲಿ ಕಾಣಬಹುದು.

    Click here

    Click here

    Click here

    Click Here

    Call us

    Call us

    ಲಲಿತಕಲಾ ಅಕಾಡೆಮಿ ಹೊರತಂದ ಕಲಾತ್ಮಕ ವಲಯಕ್ಕೆ ಸಂಬಂಧಿಸಿದ ಪುಸ್ತಕಗಳೂ ನೋಡುಗರಿಗೆ ವಿಶೆಷವೆನಿಸಿ ಕೊಂಡುಕೊಳ್ಳುತಿದ್ದಾರೆ. ಕೇರಳ ಮೂಲದ ಗೋಪಿನಾಥ್ ಲಲಿತಕಲೆಗೆ ಸಂಬಂಧಿಸಿದ ವಿನೂತನ ಕೃತಿಗಳನ್ನು ಮಾರಾಟ ಮಾಡುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯವು ಮಳಿಗೆಯಲ್ಲಿ ವಿದ್ಯಾರ್ಥಿಗಳ ವ್ಯಾಸಾಂಗಕ್ಕೆ ಸಹಕಾರಿಯಾಗುವಂತಹ ಹಲವಾರು ಪುಸ್ತಕಗಳಿವೆ. ಮಕ್ಕಳ ಆಸಕ್ತಿಗೆ ತಕ್ಕಂತೆ ಕಾರ್ಟೂನ್ ಪುಸ್ತಕಗಳು, ಕಥೆ ಕಾದಂಬರಿಗಳು, ಲೇಖಕರಾದ, ಕುವೆಂಪು, ತೇಜಸ್ವಿ, ಎನ್ ಗಣೇಶಯ್ಯ ಸೇರಿದಂತೆ ಅನೇಕ ಜನಪ್ರಿಯ ಪುಸ್ತಕಗಳೂ ಮಾರಟಕ್ಕಿವೆ.

    • ವರದಿ:ಐಶ್ವರ್ಯ ಕೋಣನ, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ, ಉಜಿರೆ
    SDM Ujire Students
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026

    ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್‌

    20/04/2026
    Leave A Reply Cancel Reply

    seven + 4 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.