Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಸಿರುಮನೆ ಮಾದರಿ – ಕಾರ್ಕಳದ ವಿದ್ಯಾರ್ಥಿಗಳ ಪರಿಸರಸ್ನೇಹಿ ಯೋಜನೆ
    alvas nudisiri

    ಹಸಿರುಮನೆ ಮಾದರಿ – ಕಾರ್ಕಳದ ವಿದ್ಯಾರ್ಥಿಗಳ ಪರಿಸರಸ್ನೇಹಿ ಯೋಜನೆ

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ:
    ಮನೆ ಕಟ್ಟುವ ಕನಸಿನ ಜೊತೆಗೆ ಪರಿಸರದ ಕಾಳಜಿ ಸೇರಿಕೊಂಡರೆ ಪರಿಸರ ಸ್ನೇಹಿ ಮನೆಯನ್ನೇ ನಿರ್ಮಿಸಬಹುದಾಗಿದೆ. ಇಂಥದ್ದೇ ಮಾದರಿಯ ವಿನ್ಯಾಸವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ವಿಜ್ಞಾನ ಮೇಳದಲ್ಲಿ ಗಮನ ಸೆಳೆಯುತ್ತಿದೆ.

    Click Here

    Call us

    Click Here

    ಕಾರ್ಕಳದ ಕಲ್ಕಿ ಇಂಗ್ಲಿಷ್ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಇರ್ಬಿಸ್ ಸುಂದರವಾದ ಹಸಿರು ಮನೆಯ ಮಾದರಿಯನ್ನು ನಿರ್ಮಿಸಿದ್ದು, ಇದರೆಡೆಗೆ ಕುತೂಹಲ ತಳೆದು ಹಲವರು ಮಾಹಿತಿ ಪಡೆಯುತ್ತಿದ್ದಾರೆ.

    ಮನೆಯ ಕಟ್ಟಡ ಒಳಗೊಳ್ಳುವ ಎಲ್ಲಾ ಪರಿಕರಗಳನ್ನೂ ಪರಿಸರಸ್ನೇಹಿಯಾಗಿಸಬಹುದು ಎಂಬ ಆತ್ಮವಿಶ್ವಾಸವನ್ನು ಈ ಮಾದರಿ ಮೂಡಿಸುತ್ತಿದೆ. ಎಲೆಕ್ಟ್ರಿಸಿಟಿ, ಗೋಡೆಯ ಬಣ್ಣ, ಸಿಮೆಂಟ್, ಸ್ಟೀಲ್ ಬಳಕೆಯ ಸಂದರ್ಭದಲ್ಲಿ ಪರಿಸರಸ್ನೇಹಿ ವಸ್ತುಗಳಿಗೇ ಆದ್ಯತೆ ನೀಡಬಹುದಾದ ಮಾದರಿ ಇದು. ಗೋಡೆಗೆ ಬಳಸಲಾಗುವ ಬಣ್ಣಕ್ಕೆ ರಸಾಯನಿಕ ಅಂಶವಿಲ್ಲದ ಉತ್ಪನ್ನಕ್ಕೇ ಆದ್ಯತೆ ನೀಡುವುದು ಹೇಗೆ ಎಂಬುದನ್ನು ಈ ಮಾದರಿ ತಿಳಿಸಿಕೊಡುತ್ತಿದೆ.

    ಪರಿಸರಸ್ನೇಹಿ ಸೋಲಾರ್ ತಂತ್ರಜ್ಞಾನವನ್ನು ಬಳಸಿಕೊಂಡು ಇಡೀ ಮನೆಯ ಎಲೆಕ್ಟ್ರಿಸಿಟಿ ಅವಶ್ಯಕತೆಯನ್ನು ಪೂರೈಸಿಕೊಳ್ಳುವ ಪರ್ಯಾಯ ಮಾರ್ಗವನ್ನೂ ಈ ಮಾದರಿ ತೂರಿಸುತ್ತದೆ. ಮನೆಗೆ ಪ್ರವೇಶದ್ವಾರದಲ್ಲಿ ಆರ್‌ಎಫ್‌ಐಡಿ ಸ್ಕ್ಯಾನ್ ಮಾಡುವ ಮೂಲಕ ಮನೆ ಅಂಗಣಕ್ಕೆ ಪ್ರವೇಶಿಸಬಹುದು. ಕತ್ತಲ ಸಮಯದಲ್ಲಿ ಕಾಲ್ನಡಿಗೆಯನ್ನು ಗಮನಿಸುವ ಸೆನ್ಸಾರ್ ಸ್ವಯಂಚಾಲಿತವಾಗಿ ವಿದ್ಯುತ್ ದೀಪ ಬೆಳಗಿಸುತ್ತದೆ. ಇನ್ನೂ ಸಾಪ್ಟ್ವೇರ್ ಅಪ್ಲಿಕೇಶನ್ ಧ್ವನಿಯ ಬಳಕೆಯ ಮೂಲಕ `ವಿದ್ಯುತ್ ದೀಪಗಳನ್ನು ಆನ್ ಮತ್ತು ಆಫ್ ಮಾಡಬಹುದಾಗಿದೆ. ಇದರಿಂದ ಸಮಯ ಹಾಗೂ ವಿದ್ಯುತ್‌ನ ಉಳಿತಾಯವು ಆಗಲಿದೆ. ಇದು ಪರಿಸರಕ್ಕೆ ಮಹತ್ವದ ಕೊಡುಗೆ ಎಂಬುದು ವಿದ್ಯಾರ್ಥಿ ಇರ್ಬಿಸ್‌ನ ಅಭಿಪ್ರಾಯ.

    ಈ ಮಾದರಿ ವಿನ್ಯಾಸದಲ್ಲಿ ರೂಪುಗೊಳ್ಳುವ ಮನೆಯಿಂದ ಪರಿಕರಗಳಿಂದ ಪರಿಸರಕ್ಕೆ ಯಾವುದೇ ಅಪಾಯವಿಲ್ಲ. ಇವುಗಳಿಂದ ರಾಸಯನಿಕಗಳ ಬಿಡುಗಡೆಯು ಶೂನ್ಯ, ಬಹುತೇಕ ಪೇಂಟ್ಸ್, ಸಿಮೆಂಟ್ ಇವುಗಳಿಂದ ಅಸ್ತಮಾದಂತಹ ರೋಗ ಮನುಷ್ಯನಲ್ಲಿ ಕಂಡುಬರುವುದು ಸರ್ವೇಸಾಮಾನ್ಯ. ಆದರೆ ಇಲ್ಲಿ ಬಳಸಲಾಗಿರುವ ಪ್ರತಿ ವಸ್ತುಗಳು ಯಾವುದೇ ತರಹದ ಮಾಲಿನ್ಯಕಾರಕ ಸೂಸುವ ವಸ್ತುಗಳಲ್ಲ. ನೋಡಲು ಅದೇ ತೆರನಾಗಿ ಕಂಡುಬಂದರೂ ಈ ಬಗೆಯ ಮನೆ ನಿರ್ಮಾಣದ ಪ್ರಕಾರ ಪರಿಸರಸ್ನೇಹಿಯೂ ಆಗಿದೆ. ಮನುಷ್ಯನ ಸುಸ್ಥಿರ ಆರೋಗ್ಯಕ್ಕೂ ಪೂರಕವಾಗಿದೆ.

    Click here

    Click here

    Click here

    Click Here

    Call us

    Call us

    ಇನ್ನೂ ಗಿಡಗಳಿಗೆ ನೀರಿನಕೊರತೆಉಂಟಾದಾಗ, ಮಣ್ಣಿನಲ್ಲಿ ನೀರಿನತೇವಕಡಿಮೆಯಾಗದಂತೆ ನಿರ್ವಹಿಸಲು ಹೊಸ ಬಗೆಯ ಸೆನ್ಸಾರ್‌ನ್ನು ಅಳವಡಿಕೆ ಮಾಡಲಾಗಿದೆ. ಇದು ಸ್ವಯಂಚಾಲಿತವಾಗಿ ಮೋಟಾರ್ ಪಂಪ್‌ಆನ್ ಆಗುವ ಮೂಲಕ ನೀರಿನ ನಿರ್ವಹಣೆ ಮಾಡುವಂತೆ ವಿನ್ಯಾಸ ಮಾಡಲಾಗಿದೆ.

    • ವರದಿ: ರಂಜಿತ್‌ಕುಮಾರ್, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ ಉಜಿರೆ
    SDM Ujire Students
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026

    ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್‌

    20/04/2026
    Leave A Reply Cancel Reply

    13 − 11 =

    Call us

    Click Here

    Call us

    Call us

    Call us
    Highest Viewed Recently
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.