Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆರೋಗ್ಯಕರ ಹರ್ಬಲ್ ತುಪ್ಪದ ಹೀರೇಕಾಯಿ ನಾರು
    alvas nudisiri

    ಆರೋಗ್ಯಕರ ಹರ್ಬಲ್ ತುಪ್ಪದ ಹೀರೇಕಾಯಿ ನಾರು

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ:
    ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ರ್ಟೀಯ ಸಾಂಸ್ಕೃತಿಕ ಜಾಂಬೂರಿಯ ಕಲಾಮೇಳದ ವಿಶೇಷ ನಾರಿನ ಅಂಗಡಿಯೊಂದು ಜನರ ಆಕರ್ಷಣೆಯ ಕೇಂದ್ರವಾಗಿದೆ.

    Click Here

    Call us

    Click Here

    ಪ್ಲಾಸ್ಟಿಕ್‌ನಿಂದ ಉಂಟಾಗುವ ಅಪಾಯವನ್ನು ಅರಿತ ಅದೆಷ್ಟೋ ಜನರು ದಿನಬಳಕೆಗಾಗಿ ಪ್ಲಾಸ್ಟಿಕ್‌ಗೆ ಪರ್ಯಾಯವನ್ನು ಹುಡುಕಿಕೊಂಡಿದ್ದಾರೆ. ಪರಿಸರ ಪೂರಕ ಮತ್ತು ಆರೋಗ್ಯಕರವಾದ ವಸ್ತುಗಳನ್ನು ಬಳಸುವುದರಿಂದ ಆಗುವಂತಹ ಉಪಯೋಗಗಳನ್ನು ಸ್ವತಃ ಅರಿತ ತುಮಕೂರಿನ ಶಿವಣ್ಣ ಅವರು ತುಪ್ಪದ ಹೀರೇಕಾಯಿ ನಾರಿನ ಉತ್ಪಾದನೆಯ ಅಂಗಡಿಯೊಂದನ್ನು ಪ್ರಾರಂಭಿಸಿದ್ದಾರೆ. ಈ ಮಳಿಗೆಯಲ್ಲಿ ನಾರಿನ ಉತ್ಪನ್ನಗಳನ್ನು ಮಾರುತ್ತಿದ್ದಾರೆ.

    ಅತಿಯಾದ ಪರಿಸರ ಮಾಲಿನ್ಯದಿಂದಾಗಿ ಇತ್ತೀಚೆಗೆ ಚರ್ಮ ರೋಗಗಳ ಪ್ರಮಾಣ ಜಾಸ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ಚರ್ಮ ರೋಗದಿಂದ ರಕ್ಷಣೆ ಪಡೆಯಲು ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಎನ್ನುವ ಸದುದ್ದೇಶದಿಂದ ತುಪ್ಪದ ಹೀರೇಕಾಯಿಂದ ತಯಾರಾದ ಮೈ ಉಜ್ಜುವ ನಾರು, ಮತ್ತು ಬೆನ್ನು ಉಜ್ಜುವ ಬ್ರಶ್ ಸಿದ್ಧಪಡಿಸಿದ್ದಾರೆ. ಇವರ ಮಳಿಗೆಯ ಪ್ರತಿಯೊಂದು ಉತ್ಪನ್ನಗಳು ನೈಸರ್ಗಿಕವಾಗಿಯೇ ಸಿದ್ಧವಾಗಿವೆ ಎಂಬುದು ಬಹಳ ವಿಶೇಷ.

    ಇದಲ್ಲದೇ ಮೊಳಕಾಲು ನೋವು ಮತ್ತು ಕೀಲು ನೋವಿನ ನಿವಾರಣೆಗೆ ಉಪಯುಕ್ತವಾಗುವ ಹುಣಸೆಹಣ್ಣಿನ ಪುಡಿಯನ್ನು ತಯಾರಿಸಿ ಮಾರಾಟಮಾಡುತ್ತಿದ್ದಾರೆ. ಜೊತೆಗೆ ಯಾವುದೇ ಕೆಮಿಕಲ್ ಮತ್ತು ಪ್ರಿಸರ್ವೇಟಿವ್ ಬಳಸದೇ ಬಹು ಸ್ವಾದಿಷ್ಟವಾದ ಹುಣಸೆಹಣ್ಣಿನ ತೊಕ್ಕನ್ನು ತಯಾರಿಸುತ್ತಾರೆ. ಇದರ ಜೊತೆಗೆ ಮಕ್ಕಳ ವಿಶೇಷ ಆಕರ್ಷಣೆಯಾದ ಹುಣಸೆಹಣ್ಣಿನ ಕಟ್ಟಾ-ಮಿಠ್ಠಾ ಕೂಡ ಸಿದ್ಧಪಡಿಸಿದ್ದಾರೆ. ಔಷಧೀಯ ಗುಣಗಳನ್ನು ಹೊಂದಿರುವ ಹುಣಸೆಹಣ್ಣಿನ ವೈವಿಧ್ಯಮಯ ಉತ್ಪನ್ನಗಳನ್ನು ಶಿವಣ್ಣ ಅವರು ತಯಾರಿಸಿದ್ದಾರೆ.

    ವರದಿ: ಭಾರತಿ ಹೆಗಡೆ, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಮ್.ಸಿ ಉಜಿರೆ

    Click here

    Click here

    Click here

    Call us

    Call us

    SDM Ujire Students
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.