Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 40,000ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಬೃಹತ್ ಯೋಗ
    alvas nudisiri

    40,000ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಬೃಹತ್ ಯೋಗ

    Updated:28/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಯೋಗ ಹಾಗೂ ಸರ್ವಧರ್ಮ ಪ್ರಾರ್ಥನೆಯೊಂದಿಗೆ ಸಂಪನ್ನಗೊಂಡ ಜಾಂಬೂರಿ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಭಾರತ್ ಸೌಟ್ಸ್-ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಕೊನೆಯ ದಿನ ಪುತ್ತಿಗೆ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ವೇದಿಕೆಯಲ್ಲಿ 40,000 ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಬೃಹತ್ ಯೋಗ ಪ್ರಾತ್ಯಕ್ಷಿಕೆ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಹಾಗೂ ಪ್ರಾಂಶುಪಾಲ ಫಾದರ್ ಫ್ರಾನ್ಸಿಸ್ ಗ್ಸೇವಿಯರ್ ಗೋಮ್ಸ್, ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯು ಸಂಸ್ಕೃತಿ, ಕಲೆ, ವಿಜ್ಞಾನ, ಸಾಹಿತ್ಯ, ಮನೋರಂಜನೆ ಮುಂತಾದ ಆಯಾಮಗಳನ್ನೊಳಗೊಂಡ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜಾಂಬೂರಿಗೆ ಆಗಮಿಸಿದ್ದ ದೇಶದ ವಿವಿಧ ಪ್ರದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಉತ್ತಮ ಅನುಭವ ನೀಡಿದೆ. ಜಾಂಬೂರಿಯಲ್ಲಿ ಕಲಿತ ಎಲ್ಲಾ ವಿಚಾರಗಳನ್ನು ಕೂಡ ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕು. ಜಾಂಬೂರಿಯೂ ವಿದ್ಯಾರ್ಥಿಗಳ ಯೋಚನಾ ಕ್ರಮದಲ್ಲಿ, ಸಂಬಂಧಗಳನ್ನು ಬೆಸೆಯುವ ಸಾಮರ್ಥ್ಯದಲ್ಲಿ ಬದಲಾವಣೆಗಳನ್ನು ತಂದಿದ್ದು ಸಮಾಜದಲ್ಲಿರುವ ವಿವಿಧ ಮನಸ್ಥಿತಿಯ ಜನರೊಂದಿಗೆ ಬೆರೆಯಲು ಅವಕಾಶ ಮಾಡಿಕೊಟ್ಟಿದೆ. ಕ್ರಿಸ್ಮಸ್ ಹಬ್ಬವು ಈಗಾಗಲೇ ಪ್ರಾರಂಭವಾಗಿದ್ದು ಎಲ್ಲರನ್ನು ಪ್ರೀತಿಸಿ ಮತ್ತು ಕ್ಷಮಿಸಿ ಎಂಬ ಸಂದೇಶವನ್ನು ಜಗತ್ತಿಗೆ ಸಾರುತ್ತಿದೆ. ನಮ್ಮನ್ನು ನಾವು ಪ್ರೀತಿಸಿದಾಗ ಎಲ್ಲಾ ನಕಾರಾತ್ಮಕ ಭಾವನೆಗಳು ನಮ್ಮಿಂದ ದೂರವಾಗಿ ಸದ್ಭಾವನೆಗಳು ಇಮ್ಮಡಿಕೊಳ್ಳುತ್ತದೆ. ಪ್ರೀತಿಯಿಂದ ಮಾತ್ರ ದ್ವೇ?, ತಾರತಮ್ಯ, ತಪ್ಪು ತಿಳುವಳಿಕೆ ಮತ್ತು ನೋವನ್ನು ದೂರಗೊಳಿಸಲು ಸಾಧ್ಯ ಆದ್ದರಿಂದ ಎಲ್ಲರನ್ನೂ ಪ್ರೀತಿಸಿ ಎಂದರು.

    ಸಮಸ್ತ ಸುನ್ನಿ ಯುವಜನ ಸಂಘದ ದಕ್ಷಿಣ ಕನ್ನಡ, ಸ್ಟೇಟ್ ಜನರಲ್ ಸೆಕ್ರೆಟರಿ ಜಾರಿಮಿಸ್ ಅಸೋಸಿಯೇ?ನ್, ಜರುಸಲೆಂ ಅಕಾಡೆಮಿಯ ಸಂಶುಲ್ ಉಲೇಮಾ ಸ್ಮಾರಕದ ಅಧ್ಯಕ್ಷ ಮೌಲಾನ ಹಾಜಿ ಅಬ್ದುಲ್ ಅಝೀಜ್ ಜಾರಿಮೀ ಚಕ್ಕಬೆಟ್ಟು ಮಾತನಾಡಿದ, ಭಗವದ್ಗೀತೆ, ಕುರಾನ್, ಬೈಬಲ್ ಮುಂತಾದ ಧರ್ಮ ಗ್ರಂಥಗಳಲ್ಲಿ ಹಾಗೂ ಬಸವಣ್ಣ, ಬ್ರಹ್ಮಶ್ರೀ ನಾರಾಯಣ ಗುರುಗಳು ಸೇರಿದಂತೆ ಅನೇಕ ಸಮಾಜ ಸುಧಾರಕರು ಮಾನವರೆಲ್ಲರೂ ಒಂದೇ, ವಸುದೈವ ಕುಟುಂಬಕಂ ಎಂಬ ಸಂದೇಶವನ್ನು ಸಾರಿದ್ದಾರೆ. ಒತ್ತಡದಿಂದ ಪ್ರೀತಿ ಕರುಣೆಯನ್ನು ಪಡೆಯಲು ಸಾಧ್ಯವಿಲ್ಲ ಹಾಗೂ ಸ್ವೀಕರಿಸಲು ಸಾಧ್ಯವಿಲ್ಲ ಆದ್ದರಿಂದ ಎಲ್ಲರನ್ನೂ ಪ್ರೀತಿಯಿಂದ ಗೆಲ್ಲಿ ಎಂದರು.

    ಮೂಡುಬಿದರೆ ಜೈನಮಠದ ಸ್ವಸ್ವಿಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಜಗತ್ತು ಅನೇಕ ಜಾತಿ, ಭಾ?, ಧರ್ಮದವರನ್ನು ಒಳಗೊಂಡಿದೆ ದೇಶದ ಜನರು ಧರ್ಮ ಸಾಮರಸ್ಯದಿಂದಿರಬೇಕು ಹಾಗಾದಾಗ ಮಾತ್ರ ದೇಶದ ವಿಕಾಸ ಸಾಧ್ಯ. ಈ ವಿಶ್ವದಲ್ಲಿ ನಮ್ಮ ಇರುವಿಕೆ ಇರುವುದರಿಂದ ವಿಶ್ವದ ಪ್ರತಿಯೊಂದು ಜೀವಿಯ ಮೇಲೆ ಕ್ಷಮೆ, ಕರುಣೆ, ಅನುಕಂಪ, ದಯೆ, ಸಂಯಮ ಮುಂತಾದ ಗುಣಗಳನ್ನು ಹೊಂದಿರಬೇಕು. ವೇದವ್ಯಾಸ, ಕಣಾದ ಮುಂತಾದ ಋಷಿಮುನಿಗಳು ಅನೇಕ ವಿಚಾರಗಳನ್ನು ನಮಗೆ ನೀಡಿದ್ದಾರೆ. ಮಾನವರು ಪ್ರಾಣಿ ಪಕ್ಷಿಗಳೊಂದಿಗೆ ಸಂಯಮದಿಂದ ವರ್ತಿಸುವ ರೀತಿಯನ್ನು ಕಲಿತುಕೊಂಡಿದ್ದಾರೆ ಆದರೆ ಮನು?- ಮನು?ರ ನಡುವೆ ತಾಳ್ಮೆಯಿಂದ ವರ್ತಿಸುವ ರೀತಿಯನ್ನು ಕರಗತ ಮಾಡಿಕೊಂಡಿಲ್ಲ ಇದನ್ನು ಕಲಿತಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ಆದ್ದರಿಂದ ನಿರುಪಯುಕ್ತ ವಸ್ತುಗಳನ್ನು ತೊರೆದು ಉತ್ತಮವಾದದ್ದನ್ನೇ ಯೋಚಿಸೋಣ ಎಂದರು.

    Click here

    Click here

    Click here

    Click Here

    Call us

    Call us

    ಸೌಟ್ಸ್-ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಭಾರತ್ ಸ್ಕೌಟ್ಸ್-ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂದ್ಯಾ ಅವರು ಧ್ವಜಾವರೋಹಣದ ಮೂಲಕ ಏಳು ದಿನಗಳ ಮೆಗಾ ಕಾರ್ಯಕ್ರಮಕ್ಕೆ ಮುಕ್ತಾಯ ಘೋಷಿಸಿದರು. ಈ ಮೂಲಕ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಸಂಪನ್ನಗೊಂಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    thirteen − 12 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.