Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ: ಡಿಸಿ ಕೂರ್ಮಾ ರಾವ್
    ಊರ್ಮನೆ ಸಮಾಚಾರ

    ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ: ಡಿಸಿ ಕೂರ್ಮಾ ರಾವ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ತಿಳುವಳಿಕೆ ನೀಡುವ ಉದ್ದೇಶದಿಂದ ಮಾಡುತ್ತಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅತ್ಯಂತ ಮಹತ್ವದಾಗಿದ್ದು, ಜಿಲ್ಲೆಯಾದ್ಯಂತ ಜನಸಾಮಾನ್ಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಹೇಳಿದರು.

    Click Here

    Call us

    Click Here

    ನಾಗೂರು ಶ್ರೀ ಲಲಿತ ಕೃಷ್ಣ ಕಲಾಮಂದಿರದಲ್ಲಿ ಶನಿವಾರ ನಡೆದ ಕಿರಿಮಂಜೇಶ್ವರ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಒಂದೇ ಸೂರಿನಡಿಯಲ್ಲಿ ತರುವ ಮೂಲಕ ಸಾರ್ವಜನಿಕರ ಆವಹಾಲುಗಳನ್ನು ಪಡೆದು ಸ್ಥಳೀಯ ಸಮಸ್ಯೆಗಳಿಗೆ ಸಾಧ್ಯವಾದಷ್ಟರ ಮಟ್ಟಿಗೆ ಪ್ರಾಮಾಣಿಕವಾಗಿ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುತ್ತದೆ. ಇನ್ನು ಕೆಲವು ಅರ್ಜಿಗಳು ತಾಂತ್ರಿಕ ಹಾಗೂ ಕಾನೂನಾತ್ಮಕ ತೊಡಕಿದ್ದರೆ ಅವುಗಳನ್ನು ಹಂತ ಹಂತವಾಗಿ ಮುಂದಿನ ದಿನಗಳಲ್ಲಿ ಫಾಲೋಅಪ್ ಮಾಡಿ ಇಥ್ಯರ್ತಗೊಳಿಸಲು ಪ್ರಯತ್ನಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಶಾಂತಿ ಹಾಗೂ ಸಹನೆಯಿಂದ ಸಹಕರಿಸಬೇಕು ಎಂದರು.

    ವಿವಿಧ ಫಲಾನುಭವಿಗಳಿಗೆ ಸವಲತ್ತು, ಆದೇಶ ಪ್ರತ್ರವನ್ನು ವಿತರಿಸಿ ಮಾತನಾಡಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಬೈಂದೂರು ತಾಲೂಕು ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಹೆಚ್ಚಿನವರು ಹೈನುಗಾರಿಕೆ ಮತ್ತು ಕೃಷಿಯನ್ನು ಅವಂಭಿಸಿದ್ದಾರೆ. ಕ್ಷೇತ್ರಕ್ಕೆ ಈಗಾಗಲೇ ಸರ್ಕಾರ ಹಾಗೂ ಸಂಸದರ ಸಹಕಾರದಿಂದ ಸುಮಾರು ಮೂರುವರೆ ಸಾವಿರ ಕೋಟಿಗೂ ಮೀರಿ ಅನುದಾನ ಬಂದಿದ್ದು, ಹಳ್ಳಿಯ ಮೂಲೆಮೂಲೆಗಳಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಿ ಅಭಿವೃದ್ಧಿಪಡಿಸಲಾಗಿದೆ. ರಸ್ತೆ, ಸೇತುವೆ, ಕಿಂಡಿ ಅಣೆಕಟ್ಟುಗಳ ನಿರ್ಮಾಣ, ಕುಡಿಯುವ ನೀರು, ಬೆಳಕು, ಕೃಷಿ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕೇಂದ್ರ ಸರ್ಕಾರವು ಮೀನುಗಾರರಿಗೆ ಹಂತಹಂತವಾಗಿ ಸೀಮೆಎಣ್ಣೆ ಬಿಡುಗಡೆಗೊಳಿಸುತ್ತಿದೆ. ಈ ಭಾಗದ ಐದು ಹಳ್ಳಿಗಳಿಗೆ ಕೃಷಿಗೆ ಸಮರ್ಪಕ ನೀರನ್ನು ಒದಗಿಸುವ ಉದ್ದೇಶದಿಂದ ಶೀಘ್ರದಲ್ಲಿ ಸುಮಾರು ೭೮ ಕೋಟಿ ವೆಚ್ಚದಲ್ಲಿ ಶ್ರೀ ಗುಡೇ ಮಹಾಲಿಂಗೇಶ್ವರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.

    ಗ್ರಾಪಂ ಅಧ್ಯಕ್ಷೆ ಗೀತಾ ಸಮಾರಂಭ ಉದ್ಘಾಟಿಸಿದರು. ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು ಪ್ರಾಸ್ತಾವಿಸಿದರು. ಜಿಪಂ ಸಿಇಒ ಪ್ರಸನ್ನ, ತಾಪಂ ಇಒ ಭಾರತಿ ಎಸ್., ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ, ಪರೀಕ್ಷಾರ್ಥದ ಐಎಎಸ್ ಅಧಿಕಾರಿ ಯತೀಶ್, ಗ್ರಾಪಂ ಉಪಾಧ್ಯಕ್ಷ ಶೇಖರ ಖಾರ್ವಿ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರಾಗಿ ಅಂತರಾಷ್ಟ್ರೀಯ ಖ್ಯಾತಿಯ ಯೋಗಪಟು ಧನ್ವಿ ಮರವಂತೆ ಉಪಸ್ಥಿತರಿದ್ದರು. ಶಿಕ್ಷಕ ಸುಬ್ರಹ್ಮಣ್ಯ ಉಪ್ಪುಂದ ಕಾರ್ಯಕ್ರಮ ನಿರ್ವಹಿಸಿದರು. ಸಭೆಯಲ್ಲಿ ಹಲವಾರು ಅರ್ಜಿಗಳು ಬಂದಿದ್ದು, ಕೆಲವನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    10 + 9 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.