Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾವಿನಲ್ಲೂ ಸಾರ್ಥಕತೆ – 6 ಮಂದಿ ರೋಗಿಗಳಿಗೆ ಬೆಳಕಾದ ಶಿಕ್ಷಕಿ ಶಿಲ್ಪಾ
    ಅಪಘಾತ-ಅಪರಾಧ ಸುದ್ದಿ

    ಸಾವಿನಲ್ಲೂ ಸಾರ್ಥಕತೆ – 6 ಮಂದಿ ರೋಗಿಗಳಿಗೆ ಬೆಳಕಾದ ಶಿಕ್ಷಕಿ ಶಿಲ್ಪಾ

    Updated:01/03/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ:
    ಮರವಂತೆಯಲ್ಲಿ ಫೆ.25ರಂದು ನಡೆದ ಅಪಘಾತದಿಂದಾಗಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರೀಯವಾಗಿದ್ದ ಉಪ್ಪುಂದ ಮಡಿಕಲ್ ನಿವಾಸಿ, ಶಿಕ್ಷಕಿ ಶಿಲ್ಪಾ ಪ್ರಸನ್ನ ಕುಮಾರ್ (44ವ) ಅವರ ಸಾವಿನ ನೋವಿನ ನಡುವೆಯೂ, ಅವರ ಕುಟುಂಬದ ಸಕಾಲಿಕ ನಿರ್ಧಾರದಿಂದಾಗಿ 6 ಮಂದಿಯ ಜೀವ ಉಳಿಸಲು ಸಾಧ್ಯವಾಗಿದೆ.

    Click Here

    Call us

    Click Here

    ಘಟನೆಯ ವಿವರ:
    ಮರವಂತೆ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿದ್ದ ಶಿಲ್ಪಾ ಅವರು ಶಾಲೆ ಮುಗಿಸಿ ತಮ್ಮ ಸ್ಕೂಟಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕಾರಿಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆ ಬಳಿಕ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ರಕ್ಷಿಸಲು ಎಲ್ಲಾ ಪ್ರಯತ್ನದ ನಡುವೆಯೂ ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಬಳಿಕ ಮಾನವ ಅಂಗಾಂಗ ಕಸಿ ಕಾಯ್ದೆ 1994ರ ಅನುಸಾರ ಶಿಲ್ಪಾ ಅವರನ್ನು ಎರಡು ಭಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.

    6 ಮಂದಿಗೆ ಜೀವದಾನ:
    ಮೆದುಳು ನಿಷ್ಕ್ರೀಯಗೊಂಡಿರುವುದನ್ನು ವೈದ್ಯರು ಘೋಷಿಸಿದ ಬಳಿಕ ಅವರ ಪತಿ ಪ್ರಸನ್ನ ಕುಮಾರ್ ಮತ್ತು ಅವರ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡುವ ಇಚ್ಛೆ ವ್ಯಕ್ತಪಡಿಸಿದರು. ಅದರಂತೆ ಫೆ.27ರಂದು ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳನ್ನು ದಾನ ಮಾಡಲಾಗಿದ್ದು, 6 ಜನರ ಜೀವ ಉಳಿಸಲು ಸಹಾಯವಾಗಿದೆ. ಜೀವನಸಾರ್ಥಕತೆ ಪ್ರೋಟೋಕಾಲ್ ಮತ್ತು ನಿರ್ಧಾರಗಳ ಪ್ರಕಾರ, ಯಕೃತ್ ಅನ್ನು ಅಸ್ಟರ್ ಸಿ ಎಂ ಐ ಆಸ್ಪತ್ರೆ ,ಬೆಂಗಳೂರು, ಒಂದು ಮೂತ್ರಪಿಂಡವನ್ನು ಎ ಜೆ ಆಸ್ಪತ್ರೆ ಮಂಗಳೂರು ಮತ್ತು ಎರಡು ಕಾರ್ನಿಯಾಗಳು, ಒಂದು ಮೂತ್ರಪಿಂಡ ಹಾಗೂ ಚರ್ಮ ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು. ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ವರ್ಗಾಯಿಸಲಾಯಿತು.

    ಉಪ್ಪುಂದ ಮಡಿಕಲ್ ಗದ್ದೆಮನೆ ನಿವಾಸಿಯಾದ  ಶಿಲ್ಪಾ ಅವರು ನಾಗೂರಿನ ಗುಂಜಾನುಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಬಡ್ತಿ ಹೊಂದಿ ಎರಡು ವರ್ಷಗಳ ಹಿಂದೆ ಮರವಂತೆ ಪ್ರೌಢಶಾಲೆಗೆ ವರ್ಗಾವಣೆಯಾಗಿದ್ದರು. ಶಿಲ್ಪಾ ಟೀಚರ್ ಅನತಿ ಕಾಲದಲ್ಲೇ ವಿದಾರ್ಥಿ ಮತ್ತು ಪೋಷಕರ ಮೆಚ್ಚುಗೆ ಗಳಿಸಿದ್ದರು. ಮಂಗಳವಾರ ಬೆಳಿಗ್ಗೆ ಅವರ ಮೃತದೇಹವನ್ನು ಮರವಂತೆ ಶಾಲೆಗೆ ತಂದಾಗ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸಾರ್ವಜನಿಕರು ಸೇರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಅಂತಿಮ ವಿದಾಯ ಕೋರಿದರು. ಅವರ ಗೌರವಾರ್ಥ ಶಾಲೆಗೆ ರಜೆ ನೀಡಲಾಗಿತ್ತು. ಶಿಲ್ಪಾ ಅವರು ಆರ್.ಎಸ್.ಎಸ್ ಮುಂದಾಳು ಪತಿ ಪ್ರಸನ್ನ ಕುಮಾರ್ ಉಪ್ಪುಂದ, ಓರ್ವ ಪುತ್ರ ಓರ್ವ ಪುತ್ರಿ ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.

    ಶಿಲ್ಪಾ ಅವರ ಕುಟುಂಬದ ಈ ಅಂಗಾಂಗ ದಾನದ ಈ ಉದಾತ್ತ ನಿರ್ಧಾರವು ಜನರ ಬದಲಾಗುತ್ತಿರುವ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಸ್ವಾಗತಾರ್ಹ ಬದಲಾವಣೆಯಾಗಿದೆ ಮತ್ತು ಇತರರು ಇದನ್ನು ಅನುಕರಿಸುವ ಅಗತ್ಯವಿದೆ. – ಡಾ. ಅವಿನಾಶ ಶೆಟ್ಟಿ, ವೈದ್ಯಕೀಯ ಅಧೀಕ್ಷಕರು

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.