Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೆಪಿಯ ಹಾಲಾಡಿ ಎಂಬ ಅಶ್ವಮೇಧದ ಕುದುರೆಯನ್ನು ಕಟ್ಟಿ ಹಾಕಲಿದೆಯಾ ಕಾಂಗ್ರೆಸ್?
    ಉಡುಪಿ ಜಿಲ್ಲೆ

    ಬಿಜೆಪಿಯ ಹಾಲಾಡಿ ಎಂಬ ಅಶ್ವಮೇಧದ ಕುದುರೆಯನ್ನು ಕಟ್ಟಿ ಹಾಕಲಿದೆಯಾ ಕಾಂಗ್ರೆಸ್?

    Updated:30/03/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ:
    ಅರಬ್ಬೀ ಸಮುದ್ರದ ತಟ, ಮಲೆನಾಡಿನ ಪ್ರದೇಶಗಳನ್ನೊಳಗೊಂಡ ಜಿಲ್ಲೆಯ ವಿಸ್ತಾರವಾದ ಪ್ರದೇಶ – ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಜೋರಾಗಿದೆ. ಎಲ್ಲಾ ಪಕ್ಷಗಳ ಹುರಿಯಾಳುಗಳ ಮತಭೇಟೆಯಲ್ಲಿ ತೊಡಗಿದ್ದಾರೆ. ಈ ಭಾರಿ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂಬ ಕುತೂಹಲವಿದ್ದು, ಎರಡು ರಾಷ್ಟ್ರೀಯ ಪಕ್ಷಗಳ ಪೈಕಿ ಬಿಜೆಪಿ ಅಭ್ಯರ್ಥಿ ಯಾರು ಎಂಬುವುದರ ಮೇಲೆ ಕಾಂಗ್ರೆಸ್ – ಬಿಜೆಪಿ ಗೆಲುವಿನ ಲೆಕ್ಕಾಚಾರ ನಿರ್ಣಯವಾಗಲಿದೆ.

    Click Here

    Call us

    Click Here

    69 ಗ್ರಾಮಗಳನ್ನು ಹೊಂದಿರುವ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 218 ಮತಗಟ್ಟೆಗಳಿವೆ. ಕ್ಷೇತ್ರ ಪುನರ್ ವಿಂಗಡನೆಯ ಬಳಿಕ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದ ಬಹುಪಾಲು ಕ್ಷೇತ್ರಗಳು ಕುಂದಾಪುರ ಕ್ಷೇತ್ರವನ್ನು ಸೇರಿದ್ದವು. ಹಂಗಾರಕಟ್ಟೆಯಿಂದ ಕೋಡಿ ತನಕದ ಕರಾವಳಿ ಭಾಗ, ಹೊಸಂಗಡಿಯಿಂದ ಈಚೆಗಿನ ಮಲೆನಾಡಿನ ಗ್ರಾಮಗಳು, ಕುಂದಾಪುರ ಪುರಸಭೆ, ಸಾಲಿಗ್ರಾಮ ಪಟ್ಟಣ ಪಂಚಾಯತಿ ಕುಂದಾಪುರ ಕ್ಷೇತ್ರದ ವ್ಯಾಪ್ತಿಯಲ್ಲಿದೆ.

    ಕುಂದಾಪುರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಸಿಪಿಐಎಂ, ಸಂಯುಕ್ತ ಜನತಾದಳ ಪಕ್ಷಗಳು ಸ್ಪರ್ಧಿಸಿದ್ದರೂ, ಬಿಜೆಪಿ ಕಾಂಗ್ರೆಸ್ ನಡುವೆ ಸ್ಪರ್ಧೆ ಏರ್ಪಟ್ಟು ಕಳೆದ 24 ವರ್ಷಗಳಿಂದ (ಒಂದು ಅವಧಿ ಪಕ್ಷೇತರ ಶಾಸಕರಾಗಿದ್ದ ಹಾಲಾಡಿ) ಬಿಜೆಪಿ ಅಧಿಕಾರದಲ್ಲಿದೆ. ಸಿಪಿಐಎಂ ಬೇರು ಕುಂದಾಪುರದಲ್ಲಿ ಗಟ್ಟಿಯಾಗಿದ್ದು, ಅಭ್ಯರ್ಥಿ ಗೆಲುವು ಸಾಧಿಸದಿದ್ದರೂ ಫಲಿತಾಂಶದ ಮೇಲೆ ಪ್ರಭಾವ ಬೀರುವಷ್ಟು ಶಕ್ತವಾಗದಿದೆ. ಈ ಭಾರಿ ಕೆ.ಆರ್.ಎಸ್ ಪಕ್ಷ, ಉತ್ತಮ ಪ್ರಜಾಕೀಯ, ಆಮ್ ಆದ್ಮಿ ಅಭ್ಯರ್ಥಿಗಳೂ ಸ್ಪರ್ಧಿಸುವ ಸಾಧ್ಯತೆ ಇದೆ /ಕುಂದಾಪ್ರ ಡಾಟ್ ಕಾಂ ವರದಿ/

    ಕುಂದಾಪುರ ರಾಜಕೀಯ ಇತಿಹಾಸ:
    ಕುಂದಾಪುರ ರಾಜಕೀಯ ಇತಿಹಾಸವನ್ನು ಗಮನಿಸಿದರೆ, 1983, 1985, 1989, 1994ರಲ್ಲಿ ಕಾಂಗ್ರೆಸ್‌ನ ನ ಕೆ. ಪ್ರತಾಪ್ ಚಂದ್ರ ಶೆಟ್ಟಿ ಗೆಲುವು ಸಾಧಿಸಿದ್ದರು. ಹೀಗೆ ನಾಲ್ಕು ಬಾರಿ ಗೆದ್ದಿದ್ದ ಪ್ರತಾಪ್ ಚಂದ್ರ ಶೆಟ್ಟಿ ಅವರಗೆ 1999ರಲ್ಲಿ ಕಣಕ್ಕಿಳಿದ ಮೊದಲ ಚುನಾವಣೆಯಲ್ಲೇ ಸೋಲುಣಿಸಿದವರು ಹಾಲಾಡಿ ಶ್ರೀನಿವಾಸ ಶೆಟ್ಟಿ. 1999ರಲ್ಲಿ 1 ಸಾವಿರ ಮತಗಳಿಂದ ಪ್ರತಾಪಚಂದ್ರ ಶೆಟ್ಟಿ ಅವರಗೆ ಸೋಲುಣಿಸಿದ ಹಾಲಾಡಿ, 2004ರಲ್ಲಿ ಗೆಲುವಿನ ಅಂತರವನ್ನು 20 ಸಾವಿರಕ್ಕೆ ವಿಸ್ತರಿಸಿಕೊಂಡರು. 2008ರಲ್ಲಿ ಕಾಂಗ್ರೆಸಿನಿಂದ ಕಣಕ್ಕಿಳಿದಿದ್ದ ಪ್ರಭಾವಿ ರಾಜಕಾರಣ ಕೆ. ಜಯಪ್ರಕಾಶ್ ಹೆಗ್ಡೆಯನ್ನೇ 25 ಸಾವಿರ ಮತಗಳಿಂದ ಮಣಿಸಿದ್ದರು.

    ಹೀಗೆ ಮೂರು ಬಾರಿ ಗೆದ್ದಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟರಿಗೆ 2012ರಲ್ಲಿ ಜಗದೀಶ್ ಶೆಟ್ಟರ್ ಅವಧಿಯಲ್ಲಿ ಸಚಿವ ಸ್ಥಾನ ನೀಡುವುದಾಗಿ ಹೇಳಿ ಬೆಂಗಳೂರಿಗೆ ಕರೆಸಿಕೊಂಡಿದ್ದರು. ಆದರೆ ಅಂತಿಮ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಇದರಿಂದ ಬೇಸರಗೊಂಡ ಹಾಲಾಡಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷವನ್ನೇ ತೊರೆದಿದ್ದರು.

    Click here

    Click here

    Click here

    Call us

    Call us

    ರಾಷ್ಟ್ರೀಯ ಪಕ್ಷಗಳನ್ನು ಏಕಾಂಗಿಯಾಗಿ ಮಣಿಸಿದ್ದ ಹಾಲಾಡಿ:
    ಮುಂದೆ 2013ರ ವಿಧಾನಸಭೆ ಚುನಾವಣೆಗೆ ಸ್ವತಂತ್ರವಾಗಿ ಕಣಕ್ಕಿಳಿದು 89 ಸಾವಿರ ಮತಗಳನ್ನು ಪಡೆದು 40 ಸಾವಿರ ಮತಗಳ ಅಂತರದಿಂದ ಹಾಲಾಡಿ ಭಾರೀ ಜಯ ದಾಖಲಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು. ಇದು ಹಾಲಾಡಿ ವೈಯಕ್ತಿಕ ವರ್ಚಸ್ಸಿಗೆ ಕನ್ನಡಿ ಹಿಡಿದಂತಿತ್ತು. ಇದಾದ ಬಳಿಕ 2018ರ ಚುನಾವಣೆ ವೇಳೆಗೆ ಮರಳಿ ಬಿಜೆಪಿಗೆ ಬಂದಿದ್ದ ಹಾಲಾಡಿ ಮತ್ತೆ ಇಲ್ಲಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್’ನ ರಾಕೇಶ್ ಮಲ್ಲಿ 56,405 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. /ಕುಂದಾಪ್ರ ಡಾಟ್ ಕಾಂ ವರದಿ/

    ಕುಂದಾಪುರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಯಾರು?
    ಕುಂದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ಆದರೆ ಖುದ್ದು ಹಾಲಾಡಿಯೇ ತಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದರೆ ಬಿಜೆಪಿಯ ಯಾವ ಅಭ್ಯರ್ಥಿಯೇ ಸ್ಪರ್ಧಿಸಿದರೂ ಕಾಂಗ್ರೆಸ್ ಪಕ್ಷಕ್ಕೆ ವರದಾನವಾಗು ಸಾಧ್ಯತೆ ಇದೆ.

    ಸದ್ಯದ ಲೆಕ್ಕಾಚಾರದಂತೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೇ ಟಿಕೆಟ್ ದೊರೆಯುವ ಸಾಧ್ಯತೆ ಇದೆ. ಇನ್ನು ಹಾಲಾಡಿ ಅವರನ್ನು ಹೊರತುಪಡಿಸಿದರೆ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹಲವು ವರ್ಷದಿಂದ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಿರಣ್ ಕೊಡ್ಗಿ ಅವರು ಹಾಲಾಡಿ ಅವರ ಬೆಂಬಲಿಗರೇ ಆದರೂ ಶಾಸಕ ಸ್ಥಾನದ ಆಕಾಂಕ್ಷಿಯೂ ಹೌದು. ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರೂ ಟಿಕೆಟ್ ರೇಸ್’ನಲ್ಲಿದ್ದು ಕುಂದಾಪುರ ಅಥವಾ ಬೈಂದೂರು ಕ್ಷೇತ್ರಕ್ಕೆ ಕಣ್ಣಿಟ್ಟಿದ್ದಾರೆ. ಅಧಿಕಾರ ಇರಲಿ ಇಲ್ಲದಿರಲಿ ಜನಸೇವೆಯಲ್ಲಿ ನಿರಂತರವಾಗಿ ತೊಡಗಿಕೊಳ್ಳುವುದು ಹೆಗ್ಡೆ ಅವರ ಪ್ಲಸ್ ಪಾಯಿಂಟ್. ಇನ್ನು 2013ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಬಿ. ಕಿಶೋರ್ ಕುಮಾರ್ ಅವರಿಗೆ ಟಿಕೆಟ್ ದೊರೆತರೂ ಅಚ್ಚರಿಯಿಲ್ಲ. ಒಂದು ಹಂತದಲ್ಲಿ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದ ಕಿಶೋರ್ ಕುಮಾರ್ ಅವರನ್ನು ಬಿಜೆಪಿ ಮತ್ತೆ ಗುರುತಿಸಿ ಹುದ್ದೆಗಳನ್ನು ನೀಡುತ್ತಲೇ ಬಂದಿದೆ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಸದ್ಯ ಸೇವೆ ಸಲ್ಲಿಸುತ್ತಿರುವ ಅವರಿಗೆ, ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಜವಾಬ್ದಾರಿ, ಬೈಂದೂರು ವಿಧಾನಸಭಾ ಕ್ಷೇತ್ರ ಉಸ್ತುವಾರಿಯನ್ನು ನೀಡಲಾಗಿದೆ.

    ಕಾಂಗ್ರೆಸ್ ಟಿಕೆಟ್ ಫಿಕ್ಸ್:
    ಕಾಂಗ್ರೆಸ್ ಪಕ್ಷದಲ್ಲಿ ನಾಲ್ವರು ಆಕಾಂಕ್ಷಿಗಳಿದ್ದರೂ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಫೈನಲ್ ಆಗಿದೆ. ಮೊಳಹಳ್ಳಿ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿನೇಶ್ ಅವರು ಟ್ರಸ್ಟ್ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡವರು. ಜನರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದು, ಸದ್ಯ ಕಾಂಗ್ರೆಸ್ ಪಕ್ಷದ ಭರವಸೆಯ ನಾಯಕ ಎಂದೆನಿಸಿಕೊಂಡಿದ್ದಾರೆ.

    ಕಾಂಗ್ರೆಸ್ ಟಿಕೆಟ್’ಗೆ ಸಹಕಾರ ಕ್ಷೆತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶ್ಯಾಮಲಾ ಭಂಡಾರಿ, ಅಶೋಕ್ ಬಿಜಾಡಿ ಕೂಡ ಅರ್ಜಿ ಸಲ್ಲಿಸಿದ್ದರೂ ಅಂತಿಮವಾಗಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೇ ಟಿಕೆಟ್ ಫೈನಲ್ ಆಗಿದೆ. /ಕುಂದಾಪ್ರ ಡಾಟ್ ಕಾಂ ವರದಿ/

    ಒಟ್ಟು ಮತದಾರರು: 2,04,525
    ಪುರುಷರು: 98224,
    ಮಹಿಳೆಯರು: 106298

    ಇದನ್ನೂ ಓದಿ:
    ► ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಒಟ್ಟು ಮತದಾರರ ಸಂಖ್ಯೆ ಎಷ್ಟು ಗೊತ್ತೆ? – https://kundapraa.com/?p=65599 .

    ಜಾತಿ ಲೆಕ್ಕಾಚಾರ
    ಒಟ್ಟು ಮತದಾರರು 2,04,525
    ಬಂಟ್ಸ್ 48,000
    ಬಿಲ್ಲವ 36,000
    ಮೊಗವೀರ 27,000
    ದೇವಾಡಿಗ 12,000
    ಗಾಣಿಗ 8,000
    ಕೊಂಕಣಿ ಖಾರ್ವಿ 10,000
    ಕ್ರಿಶ್ಚಿಯನ್ 14,000
    ಮುಸ್ಲಿಂ 17,000
    ಇತರೆ 8,529

    ಅಚ್ಚ ಕುಂದಾಪ್ರ ಕನ್ನಡದ ಊರು:
    ಅಚ್ಚ ಕುಂದಾಪ್ರ ಕನ್ನಡದ ಸೊಗಡಿರುವ ಕ್ಷೇತ್ರದಲ್ಲಿ ತುಳು, ಬ್ಯಾರಿ, ಉರ್ದು, ಕೊಂಕಣಿ, ಕೊರಗ, ನವಾಯತಿಯಂಥ ಸಮುದಾಯ ಭಾಷೆಗಳು ಕೇಳಿಬರುತ್ತವೆ. ಕಾಡಿನಂಚಿನಲ್ಲಿ ಮರಾಠಿ, ಕುಡುಬಿಗಳಂಥ ಬುಡಕಟ್ಟು ಸಮುದಾಯವಿದೆ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ, ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ, ಆನೆಗುಡ್ಡೆ ಶ್ರೀ ವಿನಾಯಕ, ಕುಂದಾಪುರದ ಶ್ರೀ ಕುಂದೇಶ್ವರ ಸೇರಿದಂತೆ ಹಲವು ಪ್ರಸಿದ್ಧ ದೇವಸ್ಥಾನಗಳಿವೆ. ದೈವಾರಾಧನೆ, ಪಾಣಾರಾಟ, ನಾಗಾರಾಧನೆ, ಯಕ್ಷಗಾನ ಹರಕೆ ಸಂಪ್ರದಾಯಗಳಿವೆ. ಕುಂದಾಪುರದ ರೋಸರಿ ಇಗರ್ಜಿ ಜಿಲ್ಲೆಯ ಪ್ರಮುಖ ಚರ್ಚ್ಗಳಲ್ಲಿ ಒಂದಾಗಿದೆ. ಸಾಹಿತ್ಯ, ಸಿನಿಮಾ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಹಲವು ಸಾಧಕರನ್ನು ನೀಡಿದ ಹೆಗ್ಗಳಿಕೆ ಕುಂದಾಪುರದ್ದು. /ಕುಂದಾಪ್ರ ಡಾಟ್ ಕಾಂ ವರದಿ/

    ಮೀನುಗಾರಿಕೆಯನ್ನು ಕುಂದಾಪುರ ಅವಲಂಬಿಸಿದೆ. ಆರ್ಥಿಕ ವಹಿವಾಟಿಗೆ ತೆಂಗಿನ ಫಸಲು ಮತ್ತು ಹೊಟೇಲ್ ಉದ್ಯಮ ಚೈತನ್ಯ ನೀಡಿದೆ. ಕುಂದಾಪುರದ ಗಣನೀಯ ಮಂದಿ ರಾಜ್ಯದ ವಿವಿಧ ಕಡೆ ಮತ್ತು ಮುಂಬೈ, ಹೈದರಾಬಾದ್, ಪುಣೆ ಮುಂತಾದೆಡೆ ಹೊಟೇಲ್ ನಡೆಸುತ್ತಿದ್ದಾರೆ. ಶೇ.65ಕ್ಕಿಂತ ಹೆಚ್ಚು ಜನರು ವ್ಯವಸಾಯೇತರ ಕಸುಬಿನಿಂದ ಬದುಕು ಸಾಗಿಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಹೊಡೆತಕ್ಕೆ ಕೃಷಿ ಗದ್ದೆಗಳಲೆಲ್ಲ ಕಟ್ಟಡಗಳು ಎದ್ದುನಿಂತಿವೆ. /ಕುಂದಾಪ್ರ ಡಾಟ್ ಕಾಂ ವರದಿ/

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    17/12/2025

    ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.