Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಂಗಳೂರು: ವೆರಿಟೊ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಉದ್ಘಾಟನೆ
    ಕರಾವಳಿ

    ಬೆಂಗಳೂರು: ವೆರಿಟೊ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು
    : ವೆರಿಟೊ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಉದ್ಘಾಟನಾ ಸಮಾರಂಭವು ಇತ್ತಿಚಿಗೆ ಬೆಂಗಳೂರಿನ ಕಲ್ಯಾಣ ನಗರದ ಕಾಸ್ಮೋಪಾಲಿಟನ್ ಕ್ಲಬ್ ನಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಮಾಜಿ ಸಾಲಿಸಿಟರ್ ಜನರಲ್ (ಭಾರತ ಸರ್ಕಾರ) ಮತ್ತು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಮಾತನಾಡಿ, ಮಾಧ್ಯಮಗಳಲ್ಲಿ ಪರಿಶುದ್ಧತೆ ಇದ್ದಾಗ ಸ್ವಚ್ಛ ಮತ್ತು ಸ್ವೀಕಾರಾರ್ಹ ಪ್ರಜಾಪ್ರಭುತ್ವ ಬರುತ್ತದೆ. “ನಾನು ಕರ್ನಾಟಕ ಲೋಕಾಯುಕ್ತಕ್ಕೆ ಬಂದ ನಂತರ ಜನರ ಕಷ್ಟಗಳನ್ನು ತಿಳಿದುಕೊಂಡೆ. ಸಮಾಜದಲ್ಲಿ ನಡೆಯುವ ತಪ್ಪುಗಳಿಗೆ ವ್ಯಕ್ತಿ ಮಾತ್ರ ಅಲ್ಲದೆ ಸುತ್ತ ಇರುವ ಪರಿಸರವೂ ಕಾರಣವಾಗುತ್ತದೆ. ಸುಮಾರು 50-60 ವರ್ಷಗಳ ಹಿಂದೆ ಸಮಾಜದ ಜನರು ದುಷ್ಟ ಕೆಲಸಗಳನ್ನು ಮಾಡಿದ್ದಕ್ಕಾಗಿ ವ್ಯಕ್ತಿ ಮತ್ತು ಇಡೀ ಕುಟುಂಬವನ್ನು ಬಹಿಷ್ಕರಿಸುತ್ತಿದ್ದರು. ಹಾಗಾಗಿ ಜನರು ತಪ್ಪು ಮಾಡಲು ಹೆದರುತ್ತಿದ್ದರು. ಈಗ ಶ್ರೀಮಂತ ಮತ್ತು ಶಕ್ತಿಶಾಲಿಯಾಗಲು ಹುಚ್ಚು ಓಟವಿದೆ, ಅದು ನಿಲ್ಲಬೇಕು ಎಂದರು.

    ಯುವಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಇತರರ ಜೇಬಿನಿಂದ ಹಣವನ್ನು ಕದಿಯಲು ಪ್ರಯತ್ನಿಸಬೇಡಿ, ಗಳಿಸಿದ ಹಣದಲ್ಲಿ ಸಂತೃಪ್ತಿ ಪಡೆಯಬೇಕು. ದುರಾಸೆಯು ಯಾವುದೇ ಚಿಕಿತ್ಸೆಯಿಲ್ಲದ ಮತ್ತು ಕಾನೂನಿಗೆ ಹೆದರದ ರೋಗ ಹಾಗೂ ಯುವಕರು ಅದಕ್ಕೆ ಬಲಿಯಾಗಬಾರದು” ಎಂದರು.

    ಈ ಸಂದರ್ಭದಲ್ಲಿ ಮಾತನಾಡಿದ ಎನ್ ಟಿಪಿಸಿ ಲಿಮಿಟೆಡ್ ಸಲಹೆಗಾರ (ಭಾರತ ಸರ್ಕಾರ) ಮತ್ತು ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಆರ್ ಸಿಐ) ಮುಖ್ಯ ಮಾರ್ಗದರ್ಶಕ ಎಂ. ಬಿ. ಜಯರಾಮ್, “ತಂಡವು ವೈವಿಧ್ಯಮಯ ಸುದ್ದಿಗಳನ್ನು ನೀಡುವ ಭರವಸೆ ನೀಡಿದೆ ಮತ್ತು ಅವರು ಬ್ರೇಕಿಂಗ್ ನ್ಯೂಸ್ ನೀಡಲು ಸ್ಪರ್ಧೆಯಲ್ಲಿಲ್ಲ. ಜನರು ಗುಣಮಟ್ಟದ ಸುದ್ದಿಯನ್ನು ನಿರೀಕ್ಷಿಸುತ್ತಾರೆ ಎಂಬುದು ನಿಜ. ವೆರಿಟೊ ಅದನ್ನು ತಲುಪಿಸುವಲ್ಲಿ ಯಶಸ್ವಿಯಾಗುತ್ತದೆ ಎಂದು ನನಗೆ ಖಾತ್ರಿಯಿದೆ” ಎಂದರು.

    ಇಂಗ್ಲಿಷ್ ಸುದ್ದಿ ವಿಶ್ಲೇಷಣಾ ವೆಬ್ ಸೈಟ್ verito.today ಅನ್ನು ಮುಖ್ಯ ಅತಿಥಿ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಉದ್ಘಾಟಿಸಿದರು.

    Click here

    Click here

    Click here

    Call us

    Call us

    ಪಿಆರ್ ಸಿಐ ಮುಖ್ಯ ಮಾರ್ಗದರ್ಶಕ ಎಂ.ಬಿ.ಜಯರಾಮ್ ಅವರು verito.kannada.today ಕನ್ನಡ ಸುದ್ದಿ ವಿಶ್ಲೇಷಣಾ ವೆಬ್ ಸೈಟ್ ಗೆ ಚಾಲನೆ ನೀಡಿದರು.

    ನಿರ್ದೇಶಕ ಕೃಷ್ಣಲಾಲ್ ವಿ.ಪಿ. veritomedia.com, ಕಂಪನಿಯ ವೆಬ್ ಸೈಟ್ ಗೆ ಚಾಲನೆ ನೀಡಿದರು.

    ಸಂಸ್ಥೆಯ ಹಿತೈಷಿ ಎನಾ ಅಬ್ರಿಯೊ, ನಿರ್ದೇಶಕ ಮತ್ತು ಅಧ್ಯಕ್ಷ ಸಂತೋಷ್ ಕೆವಿನ್ ನಜರೆತ್, ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪೆಜತ್ತಾಯ, ನಿರ್ದೇಶಕರಾದ ಕೃಷ್ಣಲಾಲ್ ವಿ.ಪಿ., ನಾರಾಯಣ ರಾಜ್, ಹೈವೆಲ್ ಕ್ಲೈನ್ ಲೋಬೊ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪೆಜತ್ತಾಯ ಸ್ವಾಗತಿಸಿ, ನಿರ್ದೇಶಕ ಹೈವೆಲ್ ಕ್ಲೈನ್ ಲೋಬೊ ವಂದಿಸಿದರು. ಶಮೀರಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಿಬ್ಬಂದಿ ಪೂರ್ಣಿಮಾ ಪ್ರಾರ್ಥಿಸಿದರು.

    ಬರಹಗಾರ, ಸಂಗೀತ ನಿರ್ದೇಶಕ ಮತ್ತು ಸಂಯೋಜಕ ವಿನ್ಸೆಂಟ್ ನೇತೃತ್ವದ ತಂಡದಿಂದ ಸಂಗೀತ ಸಂಜೆ ಮತ್ತು ವಿಶೇಷ ಆಹ್ವಾನಿತ ಕನ್ನಡದ ಹೆಸರಾಂತ ಕಲಾವಿದ ಟೆನ್ನಿಸ್ ಕೃಷ್ಣ ಅವರ ಹಳೆಯ ಮಧುರ ಗೀತೆಗಳ ಗಾಯನ ಮತ್ತು ಹಾಸ್ಯಮಯ ಸಂಭಾಷಣೆಗಳು ಪ್ರೇಕ್ಷಕರನ್ನು ರಂಜಿಸಿದವು. ನಂತರ ಭೋಜನಕೂಟ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.