Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶೋಷಿತರು ಸಶಕ್ತರಾಗದೇ ಪ್ರಜಾಪ್ರಭುತ್ವದ ಆಶಯ ಈಡೇರದು: ಪತ್ರಕರ್ತ ಜಾನ್ ಡಿ’ಸೋಜಾ
    Uncategorized

    ಶೋಷಿತರು ಸಶಕ್ತರಾಗದೇ ಪ್ರಜಾಪ್ರಭುತ್ವದ ಆಶಯ ಈಡೇರದು: ಪತ್ರಕರ್ತ ಜಾನ್ ಡಿ’ಸೋಜಾ

    Updated:25/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಗ್ರಾಮೀಣ ಭಾರತ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ

    ಕುಂದಾಪುರ: ಶೋಷಿತರು ಮತ್ತು ತುಳಿತಕ್ಕೊಳಗಾದವರಿಗೆ ಸಮಾನತೆ ಕಲ್ಪಿಸಿ ಕೊಡುವಲ್ಲಿ ಸಶಕ್ತರಾಗದಿದ್ದಲ್ಲಿ ಪ್ರಜಾಪ್ರಭುತ್ವದ ಆಶಯಕ್ಕೆ ಯಾವ ಬೆಲೆ ಸಿಕ್ಕಿದಂತಾಗುತ್ತದೆ? ಇದನ್ನು ಸರಿಮಾಡುವ ನಿಟ್ಟಿನಲ್ಲಿ ಪತ್ರಿಕೆ ಮಾಧ್ಯಮಗಳು ಶೋಷಿತರ ಪರವಾಗಿ ನಿಂತಿದೆಯೇ ಎಂದು ಖ್ಯಾತ ಪತ್ರಕರ್ತ ಜಾನ್ ಡಿ’ಸೋಜಾ ಪ್ರಶ್ನಿಸಿದರು.

    Click Here

    Call us

    Click Here

    ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ನರ್ಸರಿ ಸ್ಕೂಲ್ ಹಾಲ್‌ನಲ್ಲಿ ಗ್ರಾಮೀಣ ಭಾರತ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡಿದರು.

    [quote bgcolor=”#ffffff” arrow=”yes” align=”right”] ಅಭಿವೃದ್ಧಿಯ ಕಲ್ಪನೆ ಬದಲಾಗಬೇಕು:

    ಸಂಕೀರ್ಣ ಹಾಗೂ ಸಂಕುಚಿತವಾಗಿ ಮುನ್ನಡೆಯುತ್ತಿರುವ ದೇಶದಲ್ಲಿ ಸ್ವಾತಂತ್ರ್ಯ ದೊರೆತು 6 ದಶಕಗಳು ಕಳೆದರು ಗ್ರಾಮೀಣ ಭಾಗಗಳು ಸಮಸ್ಯೆಗಳಿಂದ ಮುಕ್ತವಾಗಿಲ್ಲ. ರಾಜಕೀಯ ಇಚ್ಚಾಶಕ್ತಿಯ ಕೊರತೆ, ಜನರಲ್ಲಿನ ಸಾಮಾಜಿಕ ಬದ್ಧತೆಯ ನಿಷ್ಕ್ರೀಯತೆ ಅಭಿವೃದ್ಧಿಯ ಹಿನ್ನಡೆಗೆ ಕಾರಣ. ಅಭಿವೃದ್ಧಿಯೆಂದರೆ ಕೇವಲ ಬಹುಮಹಡಿ ಕಟ್ಟಡ ನಿರ್ಮಾಣ, ಅಂತರ್ಜಾಲ ಅಭಿವೃದ್ಧಿ, ಡಿಜಿಟಲೀಕರಣ ಎಂದು ಮನೆ ಮಾಡಿರುವ ಭ್ರಮೆ ಎಲ್ಲರನ್ನು ಬಿಟ್ಟು ಹೋಗಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯತೆ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಹಿನ್ನಲೆಯಲ್ಲಿ ಪತ್ರಿಕೋದ್ಯಮ ಕಾರ್ಯಾನಿರ್ವಹಿಸಿದಾಗ ಉತ್ತಮ ಸಮಾಜ ನಿರ್ಮಾಣದ ಪ್ರೇರಕ ಶಕ್ತಿಯಾಗಲು ಸಾಧ್ಯ ಎಂದು ಜಾನ್ ಡಿಸೋಜಾ ಅಭಿಪ್ರಾಯಪಟ್ಟರು. [/quote]

    ಇಂದು ಮಾಧ್ಯಮಗಳು ಸಂಪಾದಕನ, ಪತ್ರಕರ್ತನ ದೃಷ್ಠಿಯಲ್ಲಿ ಸಾಗದೇ ಉದ್ಯಮಿಯ ದೃಷ್ಠಿಕೋನದಲ್ಲಿ ಮುನ್ನಡೆಯುತ್ತಿರುವುದರಿಂದ ದಿಕ್ಕು ದಿಸೆಯಿಲ್ಲದ ಜನರಿಗೆ ಸರಿಯಾದ, ಸ್ಪಷ್ಟವಾದ, ನೇರವಾದ ದೃಷ್ಠಿಯನ್ನು ನೀಡಲು ಸೋತಿವೆ. ಬಂಡವಾಳಶಾಹಿಗಳ ಹಿಡಿತದಲ್ಲಿ ಮಾಧ್ಯಮ ನಲುಗುತ್ತಿರುವುದರಿಂದ ಪತ್ರಕರ್ತರು ಪತ್ರಕರ್ತರಾಗಿರದೇ ಉದ್ಯೋಗಿಗಳಂತೆ ಕೆಲಸ ಮಾಡಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿರುವುದು ವಿಷಾದನೀಯ ಎಂದರು.

    Click here

    Click here

    Click here

    Click Here

    Call us

    Call us

    ಗ್ರಾಮೀಣ ಭಾರತದ ಆಶಾಕಿರಣ:

    ಒಂದು ಕಾಲದಲ್ಲಿ ಪತ್ರಿಕೆಗಳು ಗ್ರಾಮೀಣ ಭಾರತದ ಆಶಾಕಿರಣವಾಗಿದ್ದವು. ಬಾಲಗಂಗಾಧರ ತಿಲಕರು ಗಣೋಶೋತ್ಸವದ ಮೂಲಕ ಸಂಘಟನೆ, ತನ್ನದೇ ಪತ್ರಿಕೆಯ ಮೂಲಕ ಸಾಮಾಜಿಕ ಜಾಗೃತಿಯನ್ನುಂಟು ಮಾಡಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ಮಾ ಗಾಂಧಿಯವರು ಪತ್ರಿಕೆಯನ್ನು ಹೊರ ತಂದು ಜನರಲ್ಲಿ ರಾಷ್ಟ್ರೀಯತೆಯ ಭಾವವನ್ನು ಜಾಗೃತಗೊಳಿಸಿದರು. ದೇಶವು ಪತ್ರಿಕೆಗಳಿಂದ ಹೊಸ ದಿಕ್ಕಿನತ್ತ ಸಾಗುತ್ತಿದ್ದವು. ಇಂದು ಗೊತ್ತು ಗುರಿಯಿಲ್ಲದೇ ಸಾಗುತ್ತಿರುವ ಪತ್ರಿಕೋದ್ಯಮದ ಅಂಕುಡೊಂಕುಗಳನ್ನು ತಿದ್ದುವ ಕೆಲಸದಲ್ಲಿ ಪ್ರಾಜ್ಞರು ಕಾರ್ಯನಿರ್ವಹಿಸಬೇಕಿದೆ. ಸಾಮಾಜಿಕ ಬದ್ಧತೆಯಿಲ್ಲದೇ ಸಾಗುವ ಪತ್ರಿಕೆಗಳು ಗ್ರಾಮೀಣ ಭಾರತದ ಆಶಾಕಿರಣವಾಗಲು ಸಾಧ್ಯವಿಲ್ಲ ಎಂದವರು ಹೇಳಿದರು.

    ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅಧ್ಯಕ್ಷತೆವಹಿಸಿದ್ದರು. ಪೂರ್ವಾಧ್ಯಕ್ಷ ಟಿ. ಬಿ. ಶೆಟ್ಟಿ ಪರಿಚಯಿಸಿದರು. ಕಾರ್ಯದರ್ಶಿ ಸಂತೋಷ ಕೋಣಿ ಉಪಸ್ಥಿತರಿದ್ದರು. ನಿಯೋಜಿತ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ವಂದಿಸಿದರು. ಡಾ. ಛಾಯಾ ಹೆಬ್ಬಾರ್ ಸಹಕರಿಸಿದರು.

    kundapura ಕುಂದಾಪುರ
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    three × 1 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.