Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಕ್ಷವೇ ಸಾಮಾನ್ಯ ಕಾರ್ಯಕರ್ತನ್ನು ಗುರುತಿಸಿದೆ. ಗೆಲ್ಲಿಸಲು ಪಣತೊಡಿ – ಕೆ. ಅಣ್ಣಾಮಲೈ
    ಊರ್ಮನೆ ಸಮಾಚಾರ

    ಪಕ್ಷವೇ ಸಾಮಾನ್ಯ ಕಾರ್ಯಕರ್ತನ್ನು ಗುರುತಿಸಿದೆ. ಗೆಲ್ಲಿಸಲು ಪಣತೊಡಿ – ಕೆ. ಅಣ್ಣಾಮಲೈ

    Updated:08/05/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಪ್ರಧಾನಿ ನರೇಂದ್ರ ಮೋದಿಯವರೇ ಹಿಂದೆ ನಿಂತು ಆಯ್ಕೆ ಮಾಡಿದ ಅಭ್ಯರ್ಥಿ ಗುರುರಾಜ ಗಂಟಿಹೊಳೆ. ಅವರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. 25 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗುರುರಾಜ ಗಂಟಿಹೊಳೆಯವರು ಜಯ ಸಾಧಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣೆ ಸಹ ಉಸ್ತುವಾರಿ ಕೆ.ಅಣ್ಣಾಮಲೈ ಹೇಳಿದರು.

    Click Here

    Call us

    Click Here

    ಸೋಮವಾರ ಬೆಳಗ್ಗೆ ತ್ರಾಸಿಯಿಂದ ಬೈಂದೂರಿನ ವರೆಗೂ ಬೃಹತ್ ರೋಡ್ ಶೋ, ಬೈಕ್ ರ್ಯಾಲಿ ನಡೆಸಿ, ಅನಂತರ ಮಾತನಾಡಿದ ಅವರು, ಗುರುರಾಜ ಗಂಟಿಹೊಳೆಯವರ ಆಯ್ಕೆ ಕೇವಲ ಯಾರೋ ಒಂದಿಬ್ಬರು ಮಾಡಿದ್ದಲ್ಲ. ಪಕ್ಷವೇ ಸಾಮಾನ್ಯ ಕಾರ್ಯಕರ್ತನ್ನು ಗುರುತಿಸಿ ಅವಕಾಶ ನೀಡಿದೆ. ಇದರ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರಿದ್ದಾರೆ ಮತ್ತು ಅವರ ಅಭಿವೃದ್ಧಿಯ ಕನಸುಗಳು ಇವೆ. ನಾವೆಲ್ಲರೂ ಒಟ್ಟಾಗಿ ಗುರುರಾಜ ಗಂಟಿಹೊಳೆ ಅವರನ್ನು ಗೆಲ್ಲಿಸೊಣ ಎಂದು ಕರೆ ನೀಡಿದರು.

    ಕ್ಷೇತ್ರದಲ್ಲಿ ಬಡವ, ಶ್ರೀಮಂತ, ಶ್ರಮೀಕರು, ರೈತರು, ಕಾರ್ಮಿಕರು ಹೀಗೆ ಸಾಮಾನ್ಯರಿಂದ ಹಿಡಿದು ಎಲ್ಲರ ಬೆಂಬಲ ಗುರುರಾಜ ಗಂಟಿಹೊಳೆಯವರ ಮೇಲಿದೆ.

    ಬಿಜೆಪಿ ಪಕ್ಷ ಸಾಮಾನ್ಯರಿಗೂ ಸ್ಥಾನಮಾನ ನೀಡುತ್ತದೆ ಎಂಬುದಕ್ಕೆ ಗುರುರಾಜ ಗಂಟಿಹೊಳೆ ನಿದರ್ಶನವಾಗಿದೆ. ಬದಲಾವಣೆಗಾಗಿ ಈ ಅಭ್ಯರ್ಥಿಯ ಆಯ್ಕೆ ಮಾಡಲಾಗಿದೆ. ದೇಶ ಮೊದಲು ಎಂಬ ತತ್ವದಡಿ ಸಂಘಟನೆಯ ಕೆಲಸ ಮಾಡಿದವರು, ಕಳೆದ 15 ವರ್ಷದಿಂದ ಪಕ್ಷದ ಕಾರ್ಯವನ್ನು ನಿಷ್ಠೆಯಿಂದ ಮಾಡುತ್ತಾ ಬಂದಿದ್ದಾರೆ.

    ಮನುಷ್ಯ ಅಹಂ ಇಲ್ಲದೇ ಸಮಾಜಕ್ಕಾಗಿ ಕೆಲಸ ಮಾಡಿದಾಗ ದೇವರಾಗುತ್ತಾನೆ ಎಂದು ಉಪನಿಷತ್ ಹೇಳುತ್ತದೆ. ಆ ರೀತಿಯ ನಾಯಕರು ನಮ್ಮ ಪ್ರಧಾನಿ ನರೇಂದ್ರ ಮೋದಿ. ಅದೇ ಮಾದರಿಯಲ್ಲಿ ಗುರುರಾಜ ಗಂಟಿಹೊಳೆಯವರು ಬೆಳೆಯಲಿದ್ದಾರೆ. ಇದರಿಂದ ಕ್ಷೇತದರದ ಸಮಗ್ರ ಅಭಿವೃದ್ಧಿಯೂ ಆಗಲಿದೆ. ಕಾರಣ ಗುರುರಾಜ ಗಂಟಿಹೊಳೆ ಅವರ ಹಿಂದೆ ಪ್ರಧಾನಿ ಮೋದಿಯವರಿದ್ದಾರೆ ಎಂದರು.

    Click here

    Click here

    Click here

    Call us

    Call us

    ಇಡೀ ಪ್ರಪಂಚದಲ್ಲಿ ಯಾವ ರಾಜಕಾರಣಿಗೂ ಮೋದಿಗೆ ನೀಡುವಷ್ಟು ಮರ್ಯಾದೆ ಇಲ್ಲ. ಎಂಬುದು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರ್ಯಾಲಿಯಿಂದ ಕಂಡು ಬಂದಿದೆ. ರಾಜ್ಯದಲ್ಲಿ ಬಿಜೆಪಿ

    130 ಹೆಚ್ಚು ಸೀಟುಗಳೊಂದಿಗೆ ಸ್ಪಷ್ಟ ಬಹುಮತ ಪಡೆದು ಸರಕಾರ ರಚನೆ ಮಾಡಲಿದೆ ಎಂದರು.

    ಗುರುರಾಜ ಗಂಟಿಹೊಳೆಯವರು ಬೈಂದೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿಸಲಿದ್ದಾರೆ. ಪಕ್ಷದಲ್ಲೂ ಅವರು ಉನ್ನತ ಹುದ್ದೆಗೆ ಹೋಗಲಿದ್ದಾರೆ. ಕ್ಷೇತ್ರದಲ್ಲಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿದ್ದು, ಗುರುರಾಜ ಗಂಟಿಹೊಳೆ ಅವರು ಅದರ ಸದುಪಯೋಗ ಮಾಡಿಕೊಡಲಿದ್ದಾರೆ ಎಂದರು.

    ಕ್ಷೇತ್ರದಲ್ಲಿ ಸುಕುಮಾರ ಶೆಟ್ಟಿಯವರು ಶಾಸಕರಾಗಿ ಕಳೆದ 5 ವರ್ಷದಲ್ಲಿ 3 ಸಾವಿರ ಕೋಟಿಗೂ ಅಧಿಕ ಅನುದಾನ ತಂದಿದ್ದಾರೆ. ನಮ್ಮ ಪಕ್ಷದಲ್ಲಿ ಹೊಸಬರಿಗೆ ಅವಕಾಶ ನೀಡುತ್ತಿರುತ್ತಾರೆ. ಆದರೆ, ಕಾಂಗ್ರೆಸ್ ನಿಂದ 7 ಬಾರಿ ಸ್ಪರ್ಧಿಸಿ, ನಾಲ್ಕು ಬಾರಿ ಶಾಸಕರಾಗಿ 8 ನೇ ಬಾರಿ ಸ್ಪರ್ಧೆಗೆ ಇಳಿದು ಕೊನೆಯ ಅವಕಾಶ ನೀಡಿ ಎನ್ನುತ್ತಿದ್ದಾರೆ. ಇದು ಕೊನೆ ಚುನಾವಣೆ ಗೆಲ್ಲಿಸಿ ಎಂಬುದು ಕಾಂಗ್ರೆಸ್ ವ್ಯಾದಿಯದು ಎಂದು ವಾಗ್ದಾಳಿ ನಡೆಸಿದರು.

    ನಾನು ರ್ಯಾಲಿಯಲ್ಲಿ ಗುರುರಾಜ ಗಂಟಿಹೊಳೆ ಅವರೊಂದಿಗೆ ಭಾಗವಹಿಸಲು ಚಪ್ಪಲಿ ಹಾಕಿರಲಿಲ್ಲ. ನಾವೆಲ್ಲ ಕಾರ್ಯಕರ್ತರು ಮೇ 10 ರಂದು ಚಪ್ಪಲಿ ಧರಿಸದೇ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಬರಿಗಾಲಿನಲ್ಲಿ ಸಂಪರ್ಕ ಮಾಡಿ, ಹೆಚ್ಚಿನ ಮತದಾನ ಮಾಡಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಗೆಲುವಿಗೆ ಸಂಕಲ್ಪ ಮಾಡೋಣ ಎಂದು ಕಾರ್ಯಕರ್ತರು, ಬೆಂಬಲಿಗರಿಗೆ ಅಣ್ಣಾಮಲೈ ಕರೆ ನೀಡಿದರು.

    ಈ ಸಂದರ್ಭದಲ್ಲಿ ಗುರುರಾಜ್ ಗಂಟಿಹೊಳೆ, ಮಂಡಳ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೋವಿಂದ ಬಾಬು ಪೂಜಾರಿ, ಚುನಾವಣಾ ಪ್ರಭಾರಿ ಬ್ರಿಜೇಶ್ ಚೌಟರ್, ಜಿಲ್ಲಾ ಕಾರ್ಯದರ್ಶಿ ಸದಾನಂದ್ ಉಪ್ಪಿನಕುದ್ರ, ನಟ ಶೈನ್ ಶೆಟ್ಟಿ, ಉದ್ಯಮಿ ಪ್ರವೀಣಕುಮಾರ್ ಶೆಟ್ಟಿ ಸಹಿತವಾಗಿ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

    ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದು, ಬೈಕ್ ರ್ಯಾಲಿ ಮೂಲಕ ಆಗಮಿಸಿ, ಬಿಜೆಪಿ, ಮೋದಿಯವರ ಪರವಾಗಿ ಘೋಷಣೆ ಕೂಗಿ, ಬಿಜೆಪಿ, ಕೇಸರಿ ಬಾವುಟ ಹಾರಿಸಿ ಸಂಭ್ರಮಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    23/12/2025

    ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    23/12/2025

    ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ

    22/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ
    • ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.