Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಾಲೂಕಿನಲ್ಲಿ ಮುಂದುವರಿದ ಮಳೆಯ ತೀವ್ರತೆ. ಮನೆ, ರಸ್ತೆ, ತೋಟಗಳಿಗೆ ಹಾನಿ
    ಊರ್ಮನೆ ಸಮಾಚಾರ

    ತಾಲೂಕಿನಲ್ಲಿ ಮುಂದುವರಿದ ಮಳೆಯ ತೀವ್ರತೆ. ಮನೆ, ರಸ್ತೆ, ತೋಟಗಳಿಗೆ ಹಾನಿ

    Updated:25/07/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಜು.25:
    ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ತೀವ್ರತೆ ಮುಂದುವರಿದ ಪರಿಣಾಮ ನದಿಗಳು ತಂಬಿ ಹರಿಯುತ್ತಿದೆ, ಸಮುದ್ರ ಪ್ರಕ್ಷುಬ್ದಗೊಂಡು ಅಬ್ಬರಿಸುತ್ತಿದೆ. ಅಲ್ಲಲ್ಲಿ ತಗ್ಗು ಪ್ರದೇಶ ಜಲಾವೃತ, ಪ್ರವಾಹ ಪರಿಸ್ಥಿತಿ ಸೇರಿದಂತೆ ಸಾಕಷ್ಟು ಮಳೆಹಾನಿಯೂ ಸಂಭವಿಸುತ್ತಿದೆ.

    Click Here

    Call us

    Click Here

    ಕರಾವಳಿಯಲ್ಲಿ ಜೂ.24ರಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನಿರಂತರ ಮಳೆ ಸುರಿಯುತ್ತಲೇ ಇದೆ. ಕುಂದಾಪುರದ ಪಂಚ ನದಿಗಳಾದ ಸೌರ್ಪಣಿಕ, ಖೇಟ, ಚಕ್ರ, ಕುಬ್ಜ, ವಾರಾಹಿ ನದಿಗಳು ತುಂಬಿ ಹರಿಯುತ್ತಿದೆ. ಕೋಡಿ, ಗಂಗೊಳ್ಳಿ, ಮರವಂತೆ, ಶಿರೂರು ಕರಾವಳಿಯ ಕೆಲ ಭಾಗಗಳಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದೆ. ಬೈಂದೂರು ಕುಂದಾಪುರ ಬ್ರಹ್ಮಾವರ ಹೆಬ್ರಿ ತಾಲೂಕುಗಳಲ್ಲಿ ಗಾಳಿ ಮಳೆ ಹಾಗೂ ಮರ ಬಿದ್ದು ಮನೆ, ಕೊಟ್ಟಿಗೆ ಹಾಗೂ ತೋಟಗಳಿಗೆ ಹಾನಿಯಾಗಿದೆ. ವಿದ್ಯುತ್ಕಂಬಗಳ ಮೇಲೆ ಮರ ಬಿದ್ದ ಪರಿಣಾಮ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಕರಾವಳಿಯಿಂದ ಮಲೆನಾಡಿಗೆ ಸಂಪರ್ಕಿಸುವ ರಸ್ತೆಯಲ್ಲಿ ಅಲ್ಲಲ್ಲಿ ಮರಗಳು, ಕೆಲವೆಡೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ.

    ನೆರೆ ನೆರೆ ನೆರೆ:
    ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದ್ದರಿಂದ ನಾಡ ಗ್ರಾಮದ ಚಿಕ್ಕಳಿ ಪರಿಸರ, ಸಾಲ್ಬುಡ, ಹೊಸಾಡು ಭಾಗಗಳಲ್ಲಿ ಬ್ರಹ್ಮಕುಂಡ ನದಿ ತುಂಬಿರುತ್ತಿರುವುದರಿಂದ ಮಾರಣಕಟ್ಟೆ ದೇಗುಲದ ಪರಿಸರ, ಕುಬ್ಜಾ ನದಿ ತುಂಬಿ ಹರಿಯುತ್ತಿರುವುದರಿಂದ ಕಾವ್ರಾಡಿಮ, ಮುಂಭಾರಿ, ಕೌಜೂರು, ಮಾವಿನಗುಳಿ, ಬಿಜ್ರಿ ಭಾಗಗಳಲ್ಲಿ, ವಾರಾಹಿ ನದಿಯಿಂದಾಗಿ ಹಾಲಾಡಿ ಆಸುಪಾಸುವಿನಲ್ಲಿ ನದಿನೀರು ಕೃಷಿಭೂಮಿ, ಮನೆ, ದೇಗುಲಗಳ ಪರಿಸರಕ್ಕೆ ನದಿ ನೀರು ನುಗ್ಗಿದೆ.

    ಸೇನಾಪುರ ಗ್ರಾಮದಲ್ಲಿ ಮನೆಯೊಂದು ಗಾಳಿ ಮಳೆಗೆ ನೆಲಸಮವಾಗಿದೆ. ಬೈಂದೂರು ಗಂಗಾನಾಡು ನೀರೋಡಿ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಕಿರುಸೇತುವೆ ಕೊಚ್ಚಿಹೋಗಿದೆ. ಒತ್ತಿನಣೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತನ ಭೀತಿ ಮುಂದುವರಿದಿದೆ.

    ಹವಮಾನ ಇಲಾಖೆಯ ವರದಿಯಂತೆ ಕುಂದಾಪುರ ತಾಲೂಕಿನಲ್ಲಿ 107.3ಮಿ.ಮೀ, ಬೈಂದೂರು ತಾಲೂಕಿನಲ್ಲಿ 139.9 ಮಿ.ಮೀ, ಬ್ರಹ್ಮಾವರದಲ್ಲಿ 72.5, ಹೆಬ್ರಿ ತಾಲೂಕಿನಲ್ಲಿ 118.8 ಮಿ.ಮೀ ಮಳೆಯಾಗಿದೆ. ಬೈಂದೂರು ತಾಲೂಕಿನಲ್ಲಿ ಜು.25ರಂದು ಅಂದಾಜಿಸಿದಂತೆ 2.30ಲಕ್ಷ ಹಾನಿಯಾಗಿದ್ದರೆ, ಕುಂದಾಪುರ ತಾಲೂಕಿನಲ್ಲಿ 3.90 ಲಕ್ಷದಷ್ಟು ಹಾನಿಯನ್ನು ಅಂದಾಜಿಸಲಾಗಿದೆ.

    Click here

    Click here

    Click here

    Call us

    Call us

    ಅಧಿಕ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜು.24 ಹಾಗೂ 25ರಂದು ರಜೆ ಘೋಷಿಸಲಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್

    23/12/2025

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    23/12/2025

    ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ
    • ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.