Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀರಾಜ್‌ ವಕ್ವಾಡಿ ಅವರ ಕಿರು ಕಾದಂಬರಿ – ‘ಅತ್ತ ನಕ್ಷತ್ರ’ ಬಿಡುಗಡೆ
    ಊರ್ಮನೆ ಸಮಾಚಾರ

    ಶ್ರೀರಾಜ್‌ ವಕ್ವಾಡಿ ಅವರ ಕಿರು ಕಾದಂಬರಿ – ‘ಅತ್ತ ನಕ್ಷತ್ರ’ ಬಿಡುಗಡೆ

    Updated:22/08/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸಮಕಾಲೀನ ಜಗತ್ತನ್ನು ದರ್ಶಿಸುವುದು ಸಾಹಿತ್ಯದ ತುರ್ತು – ರಾಜ್‌ ಆಚಾರ್ಯ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಜಾತಿ, ವರ್ಣ, ವರ್ಗಗಳ ಮೇಲಿನ ಸಂಘರ್ಷಕ್ಕೆ ಶತಮಾನಗಳ ಇತಿಹಾಸವಿದೆ. ಈ ಸಂಘರ್ಷದಲ್ಲಿ ನಮ್ಮೊಳಗಿನ ಜೀವದ್ರವ್ಯ ಆಕುಂಚನವಾಗದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಎಂದಿಗಿಂತಲೂ ಇಂದು ತುಸು ಹೆಚ್ಚೇ ಇದೆ ಎಂದು ಕವಿ, ಸಾಹಿತಿ ರಾಜ್‌ ಆಚಾರ್ಯ ಪುಣೆ ಹೇಳಿದರು.

    ಅವರು ರವಿವಾರ ಜನಪ್ರತಿನಿಧಿ ಕುಂದಾಪುರದಲ್ಲಿ ಜನಪ್ರತಿನಿಧಿ ಪ್ರಕಾಶನ ಪ್ರಕಟಿಸಿದ ಕವಿ, ಲೇಖಕ ಶ್ರೀರಾಜ್‌ ವಕ್ವಾಡಿಯವರ ಕಿರು ಕಾದಂಬರಿ ಅತ್ತ ನಕ್ಷತ್ರ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    ವಸ್ತು, ವಿಷಯ, ವ್ಯಕ್ತಿ ಈ ಮೂರರ ನೆಲೆಯಲ್ಲಿ ತಾರ್ಕಿಕ ಅಂಶಗಳನ್ನು, ಸಾಂಕೇತಿಕವಾಗಿ ಭಾಷೆ ಸಂಜ್ಞೆಗಳನ್ನು ಪರಿಣಾಮಕಾರಿಯಾಗಿ ಸಾಹಿತ್ಯದಲ್ಲಿ ಬಳಸಿಕೊಳ್ಳುವುದು ಅಗತ್ಯ. ಸಾಹಿತ್ಯಮುಖಿಯ ವೈಯಕ್ತಿಕ ನೆಲೆಗಟ್ಟಿನಲ್ಲಿ ವ್ಯಕ್ತವಾಗುವ ನೀತಿಸತ್ಯಗಳು ಸಾಮಾಜಿಕ ನೆಲೆಯಲ್ಲಿ ಪರಿಗಣನೆಗೆ ಬಂದರೆ ಅದು ಸಾಹಿತಿಯೊಬ್ಬನ ಗೆಲುವು. ಸಮಕಾಲೀನ ಜಗತ್ತನ್ನು ತೆರೆದಿಡುವ ತುರ್ತು ಅಗತ್ಯ ಸಾಹಿತ್ಯಕ್ಕಿದೆ. ವ್ಯಕ್ತಿಕೇಂದ್ರೀಕೃತ ನೆಲೆಯಿಂದಲೇ ಸಮಕಾಲೀನ ಜಗತ್ತಿನ ದರ್ಶನ ಹೊರಗೆಡಹಲು ಸಾಧ್ಯ ಎನ್ನುವುದಕ್ಕೆ ʼಅತ್ತ ನಕ್ಷತ್ರʼ ಉತ್ತಮ ಕೃತಿ ಎಂದು ಅವರು ಹೇಳಿದರು.

    ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ಒಂದು ಕೃತಿ ಭಾಷೆಯ ಬಳಕೆಯಿಂದ ಮತ್ತು ಕೃತಿಕಾರನ ಸೃಜನಶೀಲತೆಯಿಂದ ಮಾತ್ರ ಓದುಗನನ್ನು ಪರಿಣಾಮಕಾರಿಯಾಗಿ ತಲುಪುವುದಕ್ಕೆ ಸಾಧ್ಯ. ಸೂಕ್ಷ್ಮ ಸಂವೇದನೆ ಮತ್ತು ಕಾಲ್ಪನಿಕ ಸೃಜನಶೀಲತೆ ಇರುವ ಒಬ್ಬ ಲೇಖಕನಿಂದ ಮಾತ್ರ ಇದು ಸಾಧ್ಯವಾಗುತ್ತದೆ. ಕಾವ್ಯಾತ್ಮಕ ಭಾವದಿಂದ ಒಂದು ಕಥೆಯನ್ನು ಹೊರತರುವುದು ಸುಲಭವಲ್ಲ. ಈ ಕೃತಿಯಲ್ಲಿ ಅಂತಹ ಗುಣ ಎದ್ದು ತೋರುತ್ತದೆ ಎಂದರು.

    Click here

    Click here

    Click here

    Call us

    Call us

    • ಕೃತಿಕಾರ ಶ್ರೀರಾಜ್‌ ವಕ್ವಾಡಿ ಮಾತನಾಡಿದರು.
    • ಕೀರ್ತಿ ಭಟ್ ಕೃತಿ ಪರಿಚಯ ಮಾಡಿದರು.

    ಮೈಸೂರು ವಿದ್ಯಾವರ್ಧಕ ಕಾನೂನು ಕಾಲೇಜಿನ ಉಪನ್ಯಾಸಕಿ ಕೀರ್ತಿ ಭಟ್ ಕೃತಿ ಪರಿಚಯ ಮಾಡಿಕೊಟ್ಟರು, ಕೃತಿಕಾರ ಶ್ರೀರಾಜ್‌ ವಕ್ವಾಡಿ ಪ್ರಸ್ತಾವಿಸಿ ಸ್ವಾಗತಿಸಿದರು, ಪ್ರಕಾಶಕ ಸುಬ್ರಹ್ಮಣ್ಯ ಪಡುಕೋಣೆ ವಂದಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ವಿನಯಾ ಶೆಟ್ಟಿ ಕೌಂಜೂರು ಕಾರ್ಯಕ್ರಮ ನಿರೂಪಿಸಿದರು.

    ಬಿಡುಗಡೆ ಕಾರ್ಯಕ್ರಮದ ನಂತರ ಕೃತಿಕಾರರೊಂದಿಗೆ ʼಅತ್ತ ನಕ್ಷತ್ರ : ಮಾತು ಕಥೆʼ ಸಂವಾದದಲ್ಲಿ ಸಾಹಿತಿ ರಾಜ್‌ ಆಚಾರ್ಯ ಪುಣೆ, ಲೇಖಕಿ ಪೂರ್ಣೀಮಾ ಭಟ್‌ ಕಮಲಶಿಲೆ, ಉಪನ್ಯಾಸಕಿಯರಾದ ಅಮೃತಾ ಕುಂದಾಪುರ, ವಿನಯಾ ಶೆಟ್ಟಿ, ಪತ್ರಕತ್ರ ನಿಝಾಮ್‌ ಅನ್ಸಾರಿ ಭಾಗಿಯಾಗಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.