Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ ಸಂಪನ್ನ
    ಊರ್ಮನೆ ಸಮಾಚಾರ

    ಕೋಟೇಶ್ವರದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ ಸಂಪನ್ನ

    Updated:18/09/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಶ್ರೀ ವಿಶ್ವಕರ್ಮ ಸಮಾಜ ಯುವಕ ದಳ, ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘ, ಶ್ರೀದೇವಿ ಮಹಿಳಾ ಮಂಡಳಿ ಕೋಟೇಶ್ವರ ಇವರ ಆಶ್ರಯದಲ್ಲಿ, ಪುರೋಹಿತ್ ರೋಹಿತಾಕ್ಷ ಆಚಾರ್ಯರ ಪ್ರಧಾನ ಆಚಾರ್ಯತ್ವದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವವು ಕೋಟೇಶ್ವರ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ನಡೆಯಿತು.

    Click Here

    Call us

    Click Here

    ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಅಧ್ಯಾಪಕ ಪಡುವರಿ ನಾಗೇಶ್ ಆಚಾರ್ಯ ಮಾತನಾಡಿ, ವಿಶ್ವಕರ್ಮ ಸಮುದಾಯವರು ಸಾಮಾಜಿಕವಾಗಿ ಎಲ್ಲಾ ವರ್ಗದ ಜನರಲ್ಲಿ ಗುರುತಿಸಿಕೊಳ್ಳಲು ನಾವು ಮಾಡುವ ಪಂಚ ಕಸುಬುಗಳೇ ಕಾರಣ. ಆದರೆ ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಪ್ರಬುದ್ಧತೆಗೆ ಬರುವಲ್ಲಿ ಹಿಂದೆ ಉಳಿಯಲು ನಮ್ಮಲ್ಲಿನ ಶಿಕ್ಷಣ ಹಾಗೂ ಸಂಘಟನೆಯ ಕೊರತೆಯೇ ಮೂಲ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಜೀವನ ಸಂಸ್ಕಾರದ ಜೊತೆಗೆ ಬದುಕುವ ಶಿಕ್ಷಣ ನೀಡಬೇಕಾಗಿದೆ ಎಂದರು.

    ಪುರೋಹಿತ್ ರೋಹಿತಾಕ್ಷ ಆಚಾರ್ಯ ಶುಭಾಶಂಸನೆಗೈದು, ಭಗವಂತನ ಆರಾಧನೆ ಅಷ್ಟು ಸುಲಭವಲ್ಲ, ಅದಕ್ಕೂ ಯೋಗ ಹಾಗೂ ಋಣಾನುಬಂಧ ಸಂಬಂಧಗಳು ಬೇಕು. ಭಗವಂತ ಸರ್ವ ವ್ಯಾಪಿ, ಪ್ರತ್ಯಕ್ಷವಾಗಿ ಕಾಣುವ ದೇವರಲ್ಲ. ಈ ಜಗತ್ತಿನ ಸೃಷ್ಟಿ ,ಸ್ಥಿತಿ, ಲಯಗಳನ್ನು ಮಾಡಿದಂತಹ ಭಗವಂತನ ದಿನವೇ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ರಜತ ಶಿಲ್ಪಿ ಸಾಂತಾವರ ಕೇಶವ ಆಚಾರ್ಯ ಅವರನ್ನು ಗುರುತಿಸಿ ಸಮ್ಮಾನಿಸಲಾಯಿತು ಹಾಗೂ ಯುವ ಪ್ರತಿಭೆ ಪ್ರೀತಮ್ ಆಚಾರ್ಯ ಹೊದ್ರಾಳಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಶ್ರೀ ವಿಶ್ವಕರ್ಮ ಸಮಾಜ ಯುವಕ ದಳದ ಅಧ್ಯಕ್ಷ ಸುರೇಶ್ ಆಚಾರ್ಯ ಸಾಂತಾವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಕೊಂಕಣ ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲೆಟ್ ಉಮೇಶ್ ಆಚಾರ್ಯ ಸಾಂತಾವರ, ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘದ ಅಧ್ಯಕ್ಷ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಶ್ರೀ ವಿಶ್ವಕರ್ಮ ಸಮಾಜ ಯುವಕ ದಳದ ಗೌರವಾಧ್ಯಕ್ಷ ಸತೀಶ್ ಆಚಾರ್ಯ ಹೊದ್ರಾಳಿ, ಶ್ರೀದೇವಿ ಮಹಿಳಾ ಮಂಡಳಿ ಕೋಟೇಶ್ವರ ಇದರ ಅಧ್ಯಕ್ಷೆ ಲಕ್ಷ್ಮೀ ಗೋಪಾಲ ಆಚಾರ್ಯ ತೆಕ್ಕಟ್ಟೆ, ಶ್ರೀ ವಿಶ್ವಕರ್ಮ ಸಮಾಜ ಯುವಕ ದಳದ ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಅರಸರಬೆಟ್ಟು ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

    ಮಂಗಳೂರು ಮಹಾಲಸಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿ ಪ್ರೀತಮ್ ಆಚಾರ್ಯ ಹೊದ್ರಾಳಿ ಅವರ ಕುಂಚದಲ್ಲಿ ಮೂಡಿಬಂದ ಆಕರ್ಷಕ ಶ್ರೀ ವಿಶ್ವಕರ್ಮ ದೇವರ ಚಿತ್ತಾರದ ಕ್ಯಾನ್ವಾಸ್ನ್ನು ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘದ ಅಧ್ಯಕ್ಷ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ ಅವರಿಗೆ ಹಸ್ತಾಂತರಿಸಿದರು.

    ಕೋಶಾಧಿಕಾರಿ ಗಣೇಶ್ ಆಚಾರ್ಯ ಕುಂಬ್ರಿ ಸ್ವಾಗತಿಸಿ, ಗೌರವಾಧ್ಯಕ್ಷ ಸತೀಶ್ ಆಚಾರ್ಯ ಹೊದ್ರಾಳಿ ಪ್ರಸ್ತಾವನೆಗೈದು, ಸತೀಶ್ ಆಚಾರ್ಯ, ಮಂಜುನಾಥ ಆಚಾರ್ಯ ಅರಸರಬೆಟ್ಟು, ದಿನೇಶ್ ಆಚಾರ್ಯ ಸಾಂತಾವರ ಸಹಕರಿಸಿ, ಕಲಾವಿದ ಜೀವಿ ವೆಂಕಟೇಶ್ ಆಚಾರ್ಯ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.