Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತದ ಗಡಿ ಭದ್ರತಾ ಪಡೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸುನೀತಾ ಪೂಜಾರಿಗೆ ಹುಟ್ಟೂರ ಸನ್ಮಾನ
    ಊರ್ಮನೆ ಸಮಾಚಾರ

    ಭಾರತದ ಗಡಿ ಭದ್ರತಾ ಪಡೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸುನೀತಾ ಪೂಜಾರಿಗೆ ಹುಟ್ಟೂರ ಸನ್ಮಾನ

    Updated:14/11/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಭಾರತದ ಗಡಿ ಭದ್ರತಾ ಪಡೆಗೆ ಸೇರ್ಪಡೆಗೊಂಡು, ಪಂಜಾಬ್ನ ಬಿಎಸ್ಎಫ್ ಶಿಬಿರದಲ್ಲಿ 11 ತಿಂಗಳ ಕಾಲ ತರಬೇತಿ ಮುಗಿಸಿ, ದೇಶದ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡು ಮೊದಲ ಬಾರಿಗೆ ಊರಿಗೆ ಆಗಮಿಸಿದ ಹೆಮ್ಮಾಡಿ ಸುನೀತಾ ಪೂಜಾರಿ ಅವರಿಗೆ ಊರವರ ಪರವಾಗಿ ಹೆಮ್ಮಾಡಿ ರಿಕ್ಷಾ ನಿಲ್ದಾಣದ ಬಳಿ ಆಯೋಜಿಸಲಾದ ಹುಟ್ಟೂರ ಸಮ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

    Click Here

    Call us

    Click Here

    ಕಾರ್ಯಕ್ರಮ ಉದ್ಘಾಟಿಸಿದ ಗೃಹ ರಕ್ಷಕ ದಳದ ಜಿಲ್ಲಾ ಸೆಕೆಂಡ್ ಇನ್ ಕಮಾಂಡ್, ಪತ್ರಕರ್ತ ಕೆ.ಸಿ. ರಾಜೇಶ್ ಅವರು ಮಾತನಾಡಿ ನಾವೆಲ್ಲ ಈ ದಿನ ನಿಶ್ಚಿಂತೆಯಿಂದ ಮನೆಗಳಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಆಚರಿಸುತ್ತಿರುವುದಕ್ಕೆ ದೇಶದ ಗಡಿಯಲ್ಲಿ ಹಗಲಿರುಳು ಕಾಯುವ ಯೋಧರು ಕಾರಣ. ಸೇನೆಗೆ ಸೇರುವ ಮೂಲಕ ಹೆಮ್ಮಾಡಿಯ ಹೆಮ್ಮೆಯಾಗಿರುವ ಸುನೀತಾ ಪೂಜಾರಿ ಅವರನ್ನು ಗೌರವಿಸುವುದರೊಂದಿಗೆ ಹೆಮ್ಮಾಡಿಯ ಜನ ಈ ದಿನ ಅರ್ಥಪೂರ್ಣ ದೀಪಾವಳಿ ಆಚರಿಸಿದ್ದಾರೆ ಹೇಳಿದರು.

    ಹೆಮ್ಮಾಡಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಂಜು ಕಾಳಾವರ ಮಾತನಾಡಿ, ಈ ಇಬ್ಬರು ಯುವತಿಯರು ಊರಿನ ಇನ್ನಷ್ಟು ಮಕ್ಕಳಿಗೆ, ಯುವಕರಿಗೆ ಸೇನೆ ಸೇರಲು ಪ್ರೇರಕ ಶಕ್ತಿಯಾಗಲಿ. ಊರವರ ಈ ಅಭಿಮಾನವೇ ಆಕೆಯ ಸೇನೆಯ ಕಾರ್ಯಕ್ಕೆ ಇನ್ನಷ್ಟು ಪ್ರೇರಣೆಯಾಗಲಿದೆ. ಸುನೀತಾ ಪೂಜಾರಿಯವರನ್ನು ಧೈರ್ಯದಿಂದ ದೇಶ ಸೇವೆಗೆ ಕಳುಹಿಸಿದ ತಂದೆ – ತಾಯಿ ಬಗ್ಗೆ ನಿಜಕ್ಕೂ ಹೆಮ್ಮೆಯಾಗುತ್ತಿದೆ ಎಂದರು.

    ಹುಟ್ಟೂರ ಸನ್ಮಾನ ಸ್ವೀಕರಿಸಿ ಮಾತನಾಡಿದ ಸುನೀತಾ ಪೂಜಾರಿ, ಸಾಮಾನ್ಯ ಕುಟುಂಬದಲ್ಲಿ ಜನಿಸಿದ ನನ್ನನ್ನು ಓದಿಸಲು ಅಮ್ಮ ಬಹಳಷ್ಟು ಕಷ್ಟಪಟ್ಟಿದ್ದಾರೆ. ನಾನು ಈಗ ಈ ಹಂತಕ್ಕೆ ಬರುವಲ್ಲಿ, ಸೇನೆಗೆ ಸೇರುವಲ್ಲಿ ನನಗೆ ಅಮ್ಮನೇ ಪ್ರೇರಕ ಶಕ್ತಿ. ಒಬ್ಬಳೇ ಮಗಳಾದರೂ ಸೇನೆಗೆ ಹೋಗಬೇಡ ಎಂದು ಹೇಳಿಲ್ಲ. ನೀನು ಖಂಡಿತ ಇದನ್ನು ಸಾಧಿಸುತ್ತೀಯಾ ಎಂದು ಅಮ್ಮ ಧೈರ್ಯ ತುಂಬಿ ಕಳುಹಿಸಿದ್ದರಿಂದಲೇ ನಾನು ಈ ಯಶಸ್ಸು ಪಡೆಯುವಂತಾಯಿತು. ಏನಾದರೊಂದು ಸಾಧನೆ ಮಾಡಬೇಕು ಎನ್ನುವ ಹಂಬಲ ನನಗೆ ಚಿಕ್ಕಂದಿನಿಂದಲೇ ಇತ್ತು. ಅದಕ್ಕಾಗಿ ಪೊಲೀಸ್, ಅಂಚೆ ಪರೀಕ್ಷೆ ಎಲ್ಲಾ ಬರೆದೆ. ಆದರೆ ಯಶಸ್ಸು ಸಿಗಲಿಲ್ಲ. ಹಾಗಂತ ಪ್ರಯತ್ನ ಮಾತ್ರ ಬಿಡಲಿಲ್ಲ. ಬಿಎಸ್ಎಫ್ ಪರೀಕ್ಷೆಯಲ್ಲಿ ಪಾಸಾದೆ. ತರಬೇತಿ ಪಡೆದು, ಈಗ ದೇಶ ಸೇವೆಯ ನನ್ನ ಕನಸು ಸಾಕಾರಗೊಳ್ಳುತ್ತಿದೆ ಈ ನನ್ನ ಯಶಸ್ಸಿನಲ್ಲಿ ಮನೆಯವರು, ಕುಟುಂಬಸ್ಥರು, ಊರ ಅನೇಕರು ನೆರವಾಗಿದ್ದಾರೆ. ಊರವರ ಈ ಪ್ರೀತಿ, ಮನೆ ಮಗಳಂತೆ ಕಾಣುವ ರೀತಿಗೆ ನಾನು ಸದಾ ಋಣಿಯಾಗಿರುತ್ತೇನೆ. ನಿಮ್ಮೆಲ್ಲರ ಗೌರವಕ್ಕೆ ಕೃತಜ್ಞತೆಗಳು ಎಂದರು.

    ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ ಭಟ್ ಅಧ್ಯಕ್ಷತೆ ವಹಿಸಿದ್ದರು. ಹೊಸಾಡು ಶಾಲಾ ಶಿಕ್ಷಕಿ ಪ್ರತಿಮಾ ಆರ್. ಮೊಗವೀರ, ಜೆಸಿಐ ಕುಂದಾಪುರ ಸಿಟಿ ನಿಯೋಜಿತ ಅಧ್ಯಕ್ಷ ರಾಘವೇಂದ್ರ ಕುಲಾಲ್, ಗ್ರಾ.ಪಂ. ಸದಸ್ಯ ರಾಘವೇಂದ್ರ ಪೂಜಾರಿ ಹೆದ್ದಾರಿಮನೆ, ಮಾಜಿ ಸದಸ್ಯ ಸಯ್ಯದ್ ಯಾಸೀನ್ ಸಂತೋಷನಗರ, ಉದ್ಯಮಿ ಅಬ್ಬಾಸ್, ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷ ಪ್ರವೀಣ್ ದೇವಾಡಿಗ, ರವಿ ಕೆ., ಹೆಮ್ಮಾಡಿ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಭಂಡಾರಿ, ಸುನೀತಾ ತಾಯಿ ಗಂಗಾ, ಸಹೋದರ ಸುನೀಲ್ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ನಾರಾಯಣ ಪೂಜಾರಿ, ಬಾಬು ಪೂಜಾರಿ ಶಿರೂರು, ಸುನೀತಾ ಸಹೋದ್ಯೊಗಿ ಕಲ್ಕತ್ತಾದ ಆಯಂತಿಕಾ ಅವರನ್ನು ಗೌರವಿಸಲಾಯಿತು.

    ಊರಿನ ಅನೇಕ ಮಂದಿ ಸೇರಿ ಕುಂದಾಪುರದಿಂದ ತಲ್ಲೂರು ಮೂಲಕವಾಗಿ ತೆರೆದ ವಾಹನದಲ್ಲಿ ಸುನೀತಾ ಪೂಜಾರಿ ಅವರನ್ನು ಮೆರವಣಿಗೆ ಮೂಲಕ ಹೆಮ್ಮಾಡಿಗೆ ಕರೆತರಲಾಯಿತು. ಬಳಿಕ ಗ್ರಾಮ ದೇವರಾದ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಆ ಬಳಿಕ ಹೆಮ್ಮಾಡಿಯ ಶ್ರೀ ಲಕ್ಷ್ಮಿ ನಾರಾಯಣ ರಿಕ್ಷಾ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಯಿತ

    ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಸ್ವಾಗತಿಸಿ, ವಸಂತ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025

    ವೃದ್ಧೆ ನಾಪತ್ತೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.