Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    ??????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಒಂಭತ್ತನೇ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ- 2024 ಪ್ರದಾನ ಸಮಾರಂಭ ಇತ್ತೀಚೆಗೆ ಗೊಂಬೆ ಮನೆಯಲ್ಲಿ ಜರುಗಿತು.

    Click Here

    Call us

    Click Here

    ಉದ್ಯಮಿ ನಾಗಭೂಷಣ ರಮೇಶ್ ಐತಾಳ್ ಉಪ್ಪಿನಕುದ್ರು ಅಕಾಡೆಮಿ ಕಟ್ಟಡದ ಆವರಣದಲ್ಲಿ ಸೋಲಾರ್ ಸ್ಟ್ರೀಟ್ ಲೈಟ್ ಹಾಗೂ ಏಣಿಯನ್ನು ಕೊಡುಗೆಯಾಗಿ ನೀಡಿ ಉದ್ಘಾಟಿಸಿದರು.

    ಮಾಹೆಯ ಮಾಜಿ ಡೆಪ್ಯೂಟಿ ರಿಜಿಸ್ಟ್ರಾರ್ ಟಿ. ರಂಗ ಪೈ ದೀಪ ಬೆಳಗಿಸಿ, ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2024 ನ್ನು ಹಿರಿಯ ಯಕ್ಷಗಾನ ಚಂಡೆ ಕಲಾವಿದ ಏಳಜಿತ ಸದಾನಂದ ಪ್ರಭು ಅವರಿಗೆ ಪ್ರದಾನ ಮಾಡಲಾಯಿತು.

    ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರುರವರು ಅಧ್ಯಕ್ಷ ಸ್ಥಾನ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಪಿ.ವಿ.ಭಂಡಾರಿ, (ವೈದ್ಯಕೀಯ ಸಲಹೆಗಾರರು ಹಾಗೂ ಮನೋರೋಗ ತಜ್ಞರು, ಡಾ ಬಿ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ,, ಉಡುಪಿ) ಶಿವಾನಂದ ಪೈ ( ಲೆಕ್ಕ ಪರಿಶೋಧಕರು, ಮಂಗಳೂರು) ಹಾಗೂ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಯಕ್ಷಗಾನ ಮದ್ದಲೆ ಕಲಾವಿದ ಸುರೇಶ್ ಉಪ್ಪೂರ, ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಸೂತ್ರಧಾರಿ ಪ್ರಭಾಕರ್ ಆಚಾರ್, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ನೆಂಪು, ರಾಜ್ಯ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಪಟು ಕುಮಾರಿ ಪ್ರಾರ್ಥನಾ ಪೈ, ಗಂಗೊಳ್ಳಿ ಇವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಸೋಲಾರ್ ಲೈಟ್ ಕೊಡುಗೆ ನೀಡಿದ ನಾಗಭೂಷಣ ರಮೇಶ್ ಐತಾಳ್, ಉಪ್ಪಿಮಕುದ್ರು ಹಾಗೂ ಯಕ್ಷಗಾನ ಗಾನ ವೈಭವ ಪ್ರಾಯೋಜಕರಾದ ಶಿವಾನಂದ ಪೈ ಯವರನ್ನೂ ಸಹ ಅಕಾಡೆಮಿಯ ವತಿಯಿಂದ ಗೌರವಿಸಲಾಯಿತು. ಯಕ್ಷಗಾನ ಗೊಂಬೆ ಚಿತ್ರ ಬಿಡಿಸಿ ಬಹುಮಾನ ಗೆಲ್ಲಿ ಆನ್ಲೈನ್ ಚಿತ್ರ ಬಿಡಿಸುವ ಸ್ಪರ್ಧೆಯ ವಿಜೇತರಿಗೆ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ , ಸ್ಥಳೀಯ ವಿದ್ಯಾರ್ಥಿಳಿಗೆ ಹಾಗೂ ಮಹಿಳೆಯರಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

    Click here

    Click here

    Click here

    Click Here

    Call us

    Call us

    ಮನೋರಂಜನಾ ಕಾರ್ಯಕ್ರಮವಾಗಿ ಶಿವಾನಂದ ಪೈ ( ಲೆಕ್ಕ ಪರಿಶೋಧಕರು, ಮಂಗಳೂರು) ಪ್ರಾಯೋಜಕತ್ವದಲ್ಲಿ ಮಯ್ಯ ಯಕ್ಷ ಬಳಗ, ಹಾಲಾಡಿ ಇವರಿಂದ ತೆಂಕು – ಬಡಗು ಯಕ್ಷಗಾನ ಗಾನ ವೈಭವ ಪ್ರಸ್ತುತಿಯಡಿ ಬಡಗಿನ ಖ್ಯಾತ ಭಾಗವತದ್ವಯರಾದ ರಾಘವೇಂದ್ರ ಮಯ್ಯ ಹಾಲಾಡಿ, ಪ್ರಸನ್ನ ಭಟ್ ಬಾಳ್ಕಲ್ , ಮದ್ದಲೆಯಲ್ಲಿ ಶಶಾಂಕ್ ಆಚಾರ್, ಚಂಡೆಯಲ್ಲಿ ಸುಜನ ಹಾಲಾಡಿ, ತೆಂಕಿನ ಭಾಗವತರಾಗಿ ಅಮೃತ ಅಡಿಗ ಮತ್ತು ಬಳಗದವರು ನೆರೆದ ಪ್ರೇಕ್ಷಕರ ಗಮನ ಸೆಳೆದರು. ಬೇಳೂರು ವಿಷ್ಣುಮೂರ್ತಿ ನಾಯಕ್ ರವರು ನಿರೂಪಿಸಿದರು. ಇಡೀ ಕಾರ್ಯಕ್ರಮವನ್ನು

    ಅಕಾಡೆಮಿಯ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ರು ವೇದಿಕೆಯಲ್ಲಿರುವ ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಕಲಾವಿದರು ಯಕ್ಷಗಾನ ಶೈಲಿಯಲ್ಲಿ ಪ್ರಾರ್ಥಿಸಿದರು. ನಾಗೇಶ್ ಶ್ಯಾನುಭಾಗ್, ಬಂಟ್ವಾಡಿ ಮತ್ತು ರಾಜೇಂದ್ರ ಪೈ ಯವರು ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.