Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆರೆಬೇಟೆ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದ ಆರಗ ಜ್ಞಾನೇಂದ್ರ, ಬಿ ವೈ ರಾಘವೇಂದ್ರ
    ಸಿನಿ ಟಾಕೀಸ್

    ಕೆರೆಬೇಟೆ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದ ಆರಗ ಜ್ಞಾನೇಂದ್ರ, ಬಿ ವೈ ರಾಘವೇಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ‘ಕೆರೆಬೇಟೆ’ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರದ ಟ್ರೈಲರ್, ಟೀಸರ್ ಮತ್ತು ರೋಮ್ಯಾಂಟಿಕ್ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ. ಇದೀಗ ಸಿನಿಮಾ ತಂಡ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡುವ ಮೂಲಕ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚಿಗಷ್ಟೇ ಮೊದಲ ಹಾಡನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ಸಿನಿಮಾದ ಬಹುನಿರೀಕ್ಷಿಯ ಟೈಟಲ್ ಟ್ರ್ಯಾಕ್ ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿದೆ.

    Click Here

    Call us

    Click Here

    ವಿಶೇಷ ಎಂದರೆ ಈ ಹಾಡನ್ನು ಶಾಸಕ ಹಾಗೂ ಮಾಜಿ ಹೋಂ ಮಿನಿಸ್ಟರ್ ಆರಗ ಜ್ಞಾನೇಂದ್ರ ಹಾಗೂ ಸಂಸದರಾದ ಬಿ ವೈ ರಾಘವೇಂದ್ರ ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಟೈಟಲ್ ಟ್ರ್ಯಾಕ್ ರಿಲೀಸ್ ಕಾರ್ಯಕ್ರಮದಲ್ಲಿ ಕೆರೆಬೇಟೆ ಚಿತ್ರದ ಹಾಡು ಅದ್ದೂರಿಯಾಗಿ ಬಿಡುಗಡೆಯಾಯಿತು.

    ‘ಕೆರಿಬ್ಯಾಟಿ ಶುರುವಾತು…’ ಎನ್ನುವ ಈ ಟೈಟಲ್ ಟ್ರ್ಯಾಕ್ ಅನ್ನು ಪ್ರಮೋದ್ ಮರವಂತೆ ಬರೆದಿದ್ದಾರೆ, ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದು ಕರಿಬಸವ ತಡಕಲ್ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಈ ಹಾಡನ್ನು ಕೇಳಿ ಮನಸೋತ ಶಾಸಕ ಆರಗ ಜ್ಞಾನೇಂದ್ರ ಹಾಗೂ ಸಂಸದ ಬಿ ವೈ ರಾಘವೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.

    ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿ ಮಾತನಾಡಿದ ಬಿ ವೈ ರಾಘವೇಂದ್ರ, ‘ಈ ಸಿನಿಮಾ ಸಂಪೂರ್ಣವಾಗಿ ಮಲೆನಾಡಿನ ಸುತ್ತಮುತ್ತವೇ ಚಿತ್ರೀಕರಣಗೊಂಡಿದೆ. ಜೊತೆಗೆ ಮಲೆನಾಡಿನವರೇ ಸೇರಿ ಈ ಸಿನಿಮಾ ಮಾಡಿದ್ದಾರೆ. ಮಲೆನಾಡಿನ ಸೌಂದರ್ಯವನ್ನು ತುಂಬಾ ಸುಂದರವಾಗಿ ತೋರಿಸಲಾಗಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

    ಇನ್ನು ಆರಗ ಜ್ಞಾನೇಂದ್ರ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಸಂಸ್ಕೃತಿಗಳು ಕಣ್ಮರೆಯಾಗಿವೆ. ಅನೇಕ ಪದ್ಧತಿಗಳು ಮರೆಯಾಗಿವೆ. ಇದೀಗ ಕೆರೆಬೇಟೆ ಸಂಸ್ಕೃತಿಯ ಬಗ್ಗೆ ಸಿನಿಮಾ ಮಾಡಿರುವುದು ತುಂಬಾ ಖುಷಿ ಆಗುತ್ತೆ. ಟ್ರೈಲರ್ ಮತ್ತು ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ನಾಯಕ ನಟ, ನಿರ್ದೇಶಕ ನಿರ್ಮಾಪಕ ಸೇರಿದಂತೆ ಎಲ್ಲರೂ ಮಲೆನಾಡಿನವರೇ ಎನ್ನುವುದು ಖುಷಿಯ ವಿಚಾರ. ಸಿನಿಮಾ ಎಲ್ಲಾ ಕಡೆ ಹೌಸ್ ಫುಲ್ ಪ್ರದರ್ಶನ ಕಾಣಲಿ’ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಸಾಂಗ್ ರಿಲೀಸ್ ಬಳಿಕ, ನಿಜವಾದ ಕೆರೆಬೇಟೆ ಆಟಗಾರರು ಕೂಣಿ ಹಿಡಿದು ಪ್ರತಿ ಜಿಲ್ಲೆಗಳಿಗೂ ಚಿತ್ರದ ಪ್ರಚಾರಕ್ಕಾಗಿ ಬೈಕ್ ರ್ಯಾಲಿ ಹೊರಡಲಿದ್ದು ರ್ಯಾಲಿಗೂ ಚಾಲನೆ ನೀಡಲಾಯಿತು.

    ಸದ್ಯ ರಿಲೀಸ್ ಗೆ ಸಿದ್ಧವಾಗಿರುವ ‘ಕೆರೆಬೇಟೆ’ ಸಿನಿಮಾ ಟೈಟಲ್ ಟ್ರ್ಯಾಕ್ ಮೂಲ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಇದೇ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೇಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾರರ್, ಹಾಸ್ಯ ಮತ್ತು ವಿಸ್ಮಯದ ಪರಿಗೆ ಪ್ರೇಕ್ಷಕ ಫಿದಾ –  ‘ಛೂ ಮಂತರ್’ ಚಿತ್ರ ವಿಮರ್ಶೆ

    11/02/2025

    ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶನದ ಟ್ರಿಪಲ್‌ ತಲಾಖ್‌ ಸಿನಿಮಾಗೆ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ ಪ್ರಶಸ್ತಿ

    24/01/2025

    ಕನ್ನಡದ ಅತೀ ದೊಡ್ಡ ಡಾನ್ಸ್‌ ಮ್ಯೂಸಿಕ್‌ ವಿಡಿಯೋ ಸಾಂಗ್‌. ಡ್ಯಾನ್ಸ್ ಪ್ರತಿಭೆಯ ಅನಾವರಣ “ನಿಲ್ಲಬೇಡ”

    23/11/2024
    Leave A Reply Cancel Reply

    10 − 8 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.