Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರ್ಗೋಳಿ ಗೋವಿಂದ ಶೇರುಗಾರ್ ಗೆ ಪೌರಸನ್ಮಾನ
    ಕುಂದಾಪ್ರದ್ ಸುದ್ಧಿ

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರ್ಗೋಳಿ ಗೋವಿಂದ ಶೇರುಗಾರ್ ಗೆ ಪೌರಸನ್ಮಾನ

    Updated:03/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

     ಕುಂದಾಪ್ರ ಡಾಟ್  ಕಾಂ ಸುದ್ದಿ

    Click Here

    Call us

    Click Here

    ಕುಂದಾಪುರ: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರ್ಗೋಳಿ ಗೋವಿಂದ ಶೇರುಗಾರ್ ಅವರಿಗೆ ಶ್ರೀ ರಾಮಕ್ಷತ್ರೀಯ ಗಣೇಶೋತ್ಸವ ಸುವರ್ಣ ಸಮಿತಿ ಹಾಗೂ ಇತರ ಸಮಾಜ ಸೇವ ಸಂಘಟನೆಗಳು ಜತೆಯಾಗಿ ಇಲ್ಲಿನ ಬೋರ್ಡ್ ಹೈಸ್ಕೂಲಿನ ಕಲಾ ಮಂದಿರದಲ್ಲಿ ಪೌರ ಸನ್ಮಾನ ನೀಡಿ ಗೌರವಿಸಿತು.

    ಕಾರ್ಯಕ್ರಮದಲ್ಲಿ ಭಾಗವಹಿಸಿದ ಕುಂದಾಪುರದ ತಹಸೀಲ್ದಾರ್ ಗಾಯತ್ರಿ ನಾಯಕ್ ಮಾತನಾಡಿ, ಆಧುನೀಕತೆಯ ಬದಲಾವಣೆಯನ್ನು ಕಾಣುತ್ತಿರುವ ಕರಾವಳಿ ಜಿಲ್ಲೆಗಳಲ್ಲಿ ನಮ್ಮ ಸಾಂಸ್ಕೃತಿಕ ಸೊಬಗಿನ ರಾಯಭಾರಿಯಂತಿರುವ ಯಕ್ಷಗಾನ ಕಲೆಯ ಬಗ್ಗೆ ಆಸಕ್ತಿ ಉಳಿದುಕೊಂಡಿರುವ ಕಾರಣದಿಂದಾಗಿ ಈ ಭಾಗದ ಯಕ್ಷಗಾನ ಕಲಾವಿದರುಗಳು ಕಲಾ ಶೋತ್ರುಗಳ ಮನದಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರು.

    ನಮ್ಮ ಪರಂಪರೆಯನ್ನು ಮುಂದಿನ ತಲೆಮಾರಿಗೆ ಉಳಿಸಿ-ಬೆಳೆಸುತ್ತಿರುವ ಯಕ್ಷಗಾನ ಕಲಾವಿದರ ಪರಿಶ್ರಮಕ್ಕೆ ಪದ್ಮಭೂಷಣ, ರಾಜ್ಯೋತ್ಸವ ಮುಂತಾದ ಪ್ರಶಸ್ತಿಗಳನ್ನು ನೀಡುವ ಮೂಲಕ ಈ ಪ್ರಶಸ್ತಿಗಳ ಹಿರಿಮೆ ಹೆಚ್ಚಿದೆ. ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗುವ ಈ ಕಾಲಘಟ್ಟದಲ್ಲಿ ಅರ್ಹರಿಗೆ ಪ್ರಶಸ್ತಿ ಬರುವುದರಿಂದ ಪ್ರಶಸ್ತಿಯ ಗೌರವ ಹೆಚ್ಚಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರ್ಗೋಳಿ ಗೋವಿಂದ ಶೇರುಗಾರ್ ಅವರು 4ನೇ ತರಗತಿಯವರೆಗೆ ಮಾತ್ರ ಶಿಕ್ಷಣವನ್ನು ಪಡೆದಿದ್ದ ತನಗೆ ಬದುಕನ್ನು ಕಲಿಸಿಕೊಟ್ಟಿದ್ದು ಯಕ್ಷಗಾನ ರಂಗ. 6 ರೂಪಾಯಿ ವೀಳ್ಯಕ್ಕಾಗಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನ ಇಂದು ಲಕ್ಷಾಂತರ ರೂಪಾಯಿ ಮಟ್ಟದವರೆಗೂ ಬೆಳೆದಿದ್ದರೂ, ಯಕ್ಷಗಾನ ಕಲಾವಿದರ ಜೀವನ ಮಟ್ಟದಲ್ಲಿ ನಿರೀಕ್ಷಿತ ತೃಪ್ತಿ ದೊರೆಕಿಲ್ಲ. ಹಿಂದೆ ಕಲಾವಿದನ ಮೇಲೆ ಅಭಿಮಾನವಿದ್ದಾಗ ಕಲಾಸಕ್ತರು ಬಂಗಾರ ನೀಡಿ, ಹಣ ನೀಡಿ ಗೌರವಿಸುತ್ತಿದ್ದರು. ಇದೀಗ ಕಾಲ ಬದಲಾಗಿದೆ ಪ್ರಶಸ್ತಿ, ಸನ್ಮಾನಗಳ ಹಿಂದೆ ಪ್ರಭಾವ ಬೇಕು ಎನ್ನುವ ಭಾವನೆಗಳು ಪ್ರಬಲವಾಗುತ್ತಿದೆ. 90 ರ ಹರಯಕ್ಕೆ ಸಮೀಸುತ್ತಿರುವ ನನಗೆ ಯಾಕೆ ಈ ಪ್ರಶಸ್ತಿ ಬರುತ್ತಿಲ್ಲ ಎನ್ನುವ ಖೇದ ಯಾವಾಗಲೂ ಇತ್ತು. ರಾಜ್ಯ ಸರ್ಕಾರ ಈ ಬಾರಿಯ ಪ್ರಶಸ್ತಿಗೆ ತನ್ನನ್ನು ಆಯ್ಕೆ ಮಾಡುವುದರೊಂದಿಗೆ ನನ್ನ ಮನದ ನೋವು ಮರೆಯಾಗಿದೆ. ಈ ಪ್ರಶಸ್ತಿ ನನ್ನ ಯಾವತ್ತೂ ಪ್ರೋತ್ಸಾಹಿಸಿದ ಯಕ್ಷಗಾನ ಪ್ರೀಯರಿಗೆ ಸಂದಾಯವಾಗಬೇಕು ಎಂದು ನುಡಿದರು. (ಕುಂದಾಪ್ರ ಡಾಟ್  ಕಾಂ ಸುದ್ದಿ)

    Click here

    Click here

    Click here

    Click Here

    Call us

    Call us

    ಕುಂದಾಪುರದ ಪುರಸಭಾ ಅಧ್ಯಕ್ಷೆ ಕಲಾವತಿ ಯು.ಎಸ್, ಉದ್ಯಮಿ ದತ್ತಾನಂದ ಜಿ, ರಾಮಕ್ಷತ್ರೀಯ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೆಟ್ಟಿನ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಖಾರ್ವಿ ಸಮಾಜ ಸೇವ ಸಂಘದ ಅಧ್ಯಕ್ಷ ಜಯಾನಂದ ಖಾರ್ವಿ ವೇದಿಕೆಯಲ್ಲಿ ಇದ್ದರು.

    ಜಿಲ್ಲಾ ಗೃಹ ರಕ್ಷಕದಳದ ಸೆಕಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ ಪ್ರಾಸ್ತಾವಿಕ ಮಾತುಗಳನ್ನು ಹೇಳಿದರು, ಶ್ರೀ ರಾಮಕ್ಷತ್ರೀಯ ಗಣೇಶೋತ್ಸವ ಸುವರ್ಣ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಯು ಸ್ವಾಗತಿಸಿದರು, ಪತ್ರಕರ್ತ ಯು.ಎಸ್ ಶೆಣೈ ಸನ್ಮಾನ ಪತ್ರ ವಾಚಿಸಿದರು, ರಾಜಶೇಖರ ಹೆಗ್ಡೆ ಹಾಗೂ ಗೋಪಾಲ ಪೂಜಾರಿ ನಿರೂಪಿಸಿದರು, ರಾಮದಾಸ್ ನಾಯಕ್ ವಂದನೆ ಸಲ್ಲಿಸಿದರು.

    Rojotsava award winner Govinda Sherugar honored at Kala mandira Kundapura (0)Rojotsava award winner Govinda Sherugar honored at Kala mandira Kundapura (6)Rojotsava award winner Govinda Sherugar honored at Kala mandira Kundapura (16) Rojotsava award winner Govinda Sherugar honored at Kala mandira Kundapura (17) Rojotsava award winner Govinda Sherugar honored at Kala mandira Kundapura (18) Rojotsava award winner Govinda Sherugar honored at Kala mandira Kundapura (19) Rojotsava award winner Govinda Sherugar honored at Kala mandira Kundapura (20)

    Rojotsava award winner Govinda Sherugar honored at Kala mandira Kundapura (8)Rojotsava award winner Govinda Sherugar honored at Kala mandira Kundapura (2)Rojotsava award winner Govinda Sherugar honored at Kala mandira Kundapura (9)Rojotsava award winner Govinda Sherugar honored at Kala mandira Kundapura (3) Rojotsava award winner Govinda Sherugar honored at Kala mandira Kundapura (4) Rojotsava award winner Govinda Sherugar honored at Kala mandira Kundapura (5)Rojotsava award winner Govinda Sherugar honored at Kala mandira Kundapura (15)Rojotsava award winner Govinda Sherugar honored at Kala mandira Kundapura (14)Rojotsava award winner Govinda Sherugar honored at Kala mandira Kundapura (13)Rojotsava award winner Govinda Sherugar honored at Kala mandira Kundapura (12)Rojotsava award winner Govinda Sherugar honored at Kala mandira Kundapura (11)Rojotsava award winner Govinda Sherugar honored at Kala mandira Kundapura (10)

    kundapura Yakshagana
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    eight + seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.