Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿಗೆ ಭರ್ಜರಿ ಗೆಲುವು
    ಉಡುಪಿ ಜಿಲ್ಲೆ

    ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿಗೆ ಭರ್ಜರಿ ಗೆಲುವು

    Updated:07/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು 24,111 ಮತಗಳ ಅಂತರದ ಸೋಲಿಸುವ ಮೂಲಕ ಮೇಲ್ಮನೆ ಪ್ರವೇಶಿಸಿದ್ದಾರೆ.

    Click Here

    Call us

    Click Here

    ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಗುರುವಾರ ಪ್ರಾರಂಭವಾದ ದಕ್ಷಿಣ ಶಿಕ್ಷಕ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಪದವೀದರ ಚುನಾವಣೆಯ ಎಣಿಕೆ ಕಾರ್ಯ ಶುಕ್ರವಾರ ಬೆಳಗ್ಗೆವರೆಗೂ ನಡೆಯಿತು. ಇದರಲ್ಲಿ ದಕ್ಷಿಣ ಹಾಗೂ ನೈರುತ್ಯ ಶಿಕ್ಷಕ ಕ್ಷೇತ್ರಗಳೆರಡರಲ್ಲೂ ಮೈತ್ರಿ ಅಭ್ಯರ್ಥಿಗಳೇ ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿಯೇ ಜಯಭೇರಿ ಬಾರಿಸಿದರು. ಇದೇ ವೇಳೆ ಬಿಜೆಪಿಯಿಂದ ಬಂಡಾಯ ಸ್ಪರ್ಧೆ ಮಾಡಿದ್ದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಮುಖಭಂಗವಾಗಿದೆ.

    ► ಇದನ್ನೂ ಓದಿ ಪರಿಷತ್‌ ಚುನಾವಣೆ: ಎಸ್.ಎಲ್.‌ ಬೋಜೇಗೌಡಗೆ ಗೆಲುವು, ಡಾ. ಧನಂಜಯ ಸರ್ಜಿಗೆ ಮುನ್ನಡೆ – https://kundapraa.com/?p=72780 .

    ಬಿಜೆಪಿ-ಜೆಡಿಎಸ್ ಮೈತ್ರಿ ಅಭರ್ಥಿ ಡಾ. ಧನಂಜಯ ಸರ್ಜಿ ಅವರೂ ಮೊದಲ ಪ್ರಾಶಸ್ತ್ಯ ಮತಗಳ ಎಣಿಕೆಯಲ್ಲಿಯೇ 4 ನೇ ಸುತ್ತಿನ ಮುಕ್ತಾಯಕ್ಕೆ 14,417 ಮತಗಳ ಅಂತರ ಕಾಯ್ದುಕೊಳ್ಳುವ ಮೂಲಕ ಜಯ ದಾಖಲಿಸುವ ಸೂಚನೆ ನೀಡಿದ್ದರು.

    ಬೆಳಗ್ಗೆಯಿಂದ ಆರಂಭವಾದ ನೈರುತ್ಯ ಪದವೀದರ ಕ್ಷೇತ್ರದ ಚುನಾವಣೆಯ ಎಣಿಕೆ ಕಾರ್ಯದಲ್ಲಿ ಮೊದಲ ಸುತ್ತಿನಿಂದಲೂ ಧನಂಜಯ ಸರ್ಜಿ ಅವರು ತಮ್ಮ ಸಮೀಪದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗಿಂತ ಮುನ್ನಡೆ ಕಾಯ್ದುಕೊಂಡರು. ಮೊದಲ ಸುತ್ತಿನಲ್ಲಿ ಧನಂಜಯ ಸರ್ಜಿ ಅವರು 6714 ಮತ ಗಳಿಸುವ ಮೂಲಕ ಆಯನೂರು ಮಂಜುನಾಥ (2434) ಅವರಿಗಿಂತ 4280 ಮತಗಳ ಮುನ್ನಡೆ ಸಾಧಿಸಿದರು. ಅದೇ ರೀತಿ 2 ನೇ ಸುತ್ತಿನಲ್ಲಿ 8,827 ಮತ, 3 ನೇ ಸುತ್ತಿನಲ್ಲಿ 14417, 4 ನೇ ಸುತ್ತಿನಲ್ಲಿ 19,973 ಮತಗಳ ಮುನ್ನಡೆ ಪಡೆದರು.4ನೇ ಸುತ್ತಿನ ಮುಕ್ತಾಯಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭರ್ಥಿ ಡಾ. ಧನಂಜಯ ಸರ್ಜಿ 19,973 ಮತಗಳ ಮುನ್ನಡೆ ಪಡೆದುಕೊಂಡಿದ್ದರು.

    Click here

    Click here

    Click here

    Call us

    Call us

    ಮೊದಲ ಪ್ರಾಶಸ್ತ್ಯದ ಮತದಲ್ಲಿಯೇ ಗೆಲ್ಲುವ ಸೂಚನೆ ನೀಡಿದ್ದ ಡಾ. ಸರ್ಜಿ ಅವರು ಅಂತಿಮ ಹಂತದಲ್ಲಿ ತಮ್ಮ ಮುನ್ನಡೆಯನ್ನು ಮತ್ತಷ್ಚು ಹೆಚ್ಚಿಸಿಕೊಂಡ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಪರಿಷತ್ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ 3 ಕ್ಷೇತ್ರಗಳಲ್ಲಿ ಗೆದ್ದಂತಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025

    ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    17/12/2025

    ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.