Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿಗೆ ಭರ್ಜರಿ ಗೆಲುವು
    ಉಡುಪಿ ಜಿಲ್ಲೆ

    ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿಗೆ ಭರ್ಜರಿ ಗೆಲುವು

    Updated:07/06/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು 24,111 ಮತಗಳ ಅಂತರದ ಸೋಲಿಸುವ ಮೂಲಕ ಮೇಲ್ಮನೆ ಪ್ರವೇಶಿಸಿದ್ದಾರೆ.

    Click Here

    Call us

    Click Here

    ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಗುರುವಾರ ಪ್ರಾರಂಭವಾದ ದಕ್ಷಿಣ ಶಿಕ್ಷಕ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಪದವೀದರ ಚುನಾವಣೆಯ ಎಣಿಕೆ ಕಾರ್ಯ ಶುಕ್ರವಾರ ಬೆಳಗ್ಗೆವರೆಗೂ ನಡೆಯಿತು. ಇದರಲ್ಲಿ ದಕ್ಷಿಣ ಹಾಗೂ ನೈರುತ್ಯ ಶಿಕ್ಷಕ ಕ್ಷೇತ್ರಗಳೆರಡರಲ್ಲೂ ಮೈತ್ರಿ ಅಭ್ಯರ್ಥಿಗಳೇ ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿಯೇ ಜಯಭೇರಿ ಬಾರಿಸಿದರು. ಇದೇ ವೇಳೆ ಬಿಜೆಪಿಯಿಂದ ಬಂಡಾಯ ಸ್ಪರ್ಧೆ ಮಾಡಿದ್ದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಮುಖಭಂಗವಾಗಿದೆ.

    ► ಇದನ್ನೂ ಓದಿ ಪರಿಷತ್‌ ಚುನಾವಣೆ: ಎಸ್.ಎಲ್.‌ ಬೋಜೇಗೌಡಗೆ ಗೆಲುವು, ಡಾ. ಧನಂಜಯ ಸರ್ಜಿಗೆ ಮುನ್ನಡೆ – https://kundapraa.com/?p=72780 .

    ಬಿಜೆಪಿ-ಜೆಡಿಎಸ್ ಮೈತ್ರಿ ಅಭರ್ಥಿ ಡಾ. ಧನಂಜಯ ಸರ್ಜಿ ಅವರೂ ಮೊದಲ ಪ್ರಾಶಸ್ತ್ಯ ಮತಗಳ ಎಣಿಕೆಯಲ್ಲಿಯೇ 4 ನೇ ಸುತ್ತಿನ ಮುಕ್ತಾಯಕ್ಕೆ 14,417 ಮತಗಳ ಅಂತರ ಕಾಯ್ದುಕೊಳ್ಳುವ ಮೂಲಕ ಜಯ ದಾಖಲಿಸುವ ಸೂಚನೆ ನೀಡಿದ್ದರು.

    ಬೆಳಗ್ಗೆಯಿಂದ ಆರಂಭವಾದ ನೈರುತ್ಯ ಪದವೀದರ ಕ್ಷೇತ್ರದ ಚುನಾವಣೆಯ ಎಣಿಕೆ ಕಾರ್ಯದಲ್ಲಿ ಮೊದಲ ಸುತ್ತಿನಿಂದಲೂ ಧನಂಜಯ ಸರ್ಜಿ ಅವರು ತಮ್ಮ ಸಮೀಪದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗಿಂತ ಮುನ್ನಡೆ ಕಾಯ್ದುಕೊಂಡರು. ಮೊದಲ ಸುತ್ತಿನಲ್ಲಿ ಧನಂಜಯ ಸರ್ಜಿ ಅವರು 6714 ಮತ ಗಳಿಸುವ ಮೂಲಕ ಆಯನೂರು ಮಂಜುನಾಥ (2434) ಅವರಿಗಿಂತ 4280 ಮತಗಳ ಮುನ್ನಡೆ ಸಾಧಿಸಿದರು. ಅದೇ ರೀತಿ 2 ನೇ ಸುತ್ತಿನಲ್ಲಿ 8,827 ಮತ, 3 ನೇ ಸುತ್ತಿನಲ್ಲಿ 14417, 4 ನೇ ಸುತ್ತಿನಲ್ಲಿ 19,973 ಮತಗಳ ಮುನ್ನಡೆ ಪಡೆದರು.4ನೇ ಸುತ್ತಿನ ಮುಕ್ತಾಯಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭರ್ಥಿ ಡಾ. ಧನಂಜಯ ಸರ್ಜಿ 19,973 ಮತಗಳ ಮುನ್ನಡೆ ಪಡೆದುಕೊಂಡಿದ್ದರು.

    Click here

    Click here

    Click here

    Click Here

    Call us

    Call us

    ಮೊದಲ ಪ್ರಾಶಸ್ತ್ಯದ ಮತದಲ್ಲಿಯೇ ಗೆಲ್ಲುವ ಸೂಚನೆ ನೀಡಿದ್ದ ಡಾ. ಸರ್ಜಿ ಅವರು ಅಂತಿಮ ಹಂತದಲ್ಲಿ ತಮ್ಮ ಮುನ್ನಡೆಯನ್ನು ಮತ್ತಷ್ಚು ಹೆಚ್ಚಿಸಿಕೊಂಡ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಪರಿಷತ್ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ 3 ಕ್ಷೇತ್ರಗಳಲ್ಲಿ ಗೆದ್ದಂತಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    eighteen − 7 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.