Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉತ್ತರಾಖಂಡ ಚಾರಣ ದುರಂತದಲ್ಲಿ ಕುಂಭಾಶಿ ಮೂಲದ ಪದ್ಮನಾಭ್‌ ಭಟ್‌ ಸಾವು
    ಅಪಘಾತ-ಅಪರಾಧ ಸುದ್ದಿ

    ಉತ್ತರಾಖಂಡ ಚಾರಣ ದುರಂತದಲ್ಲಿ ಕುಂಭಾಶಿ ಮೂಲದ ಪದ್ಮನಾಭ್‌ ಭಟ್‌ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉತ್ತರಾಖಂಡದ ಸಹಸ್ತ್ರ ತಾಲ್‌ (ಲೇಕ್‌) ಗೆ ಚಾರಣ ಹೋಗಿ ಹವಾಮಾನ ವೈಪರೀತ್ಯಕ್ಕೆ ಸಿಲುಕಿ ರಾಜ್ಯದ 9 ಜನರು ಮೃತಪಟ್ಟಿದ್ದು, ಈ ಪೈಕಿ ಕುಂಭಾಶಿ ಮೂಲದ, ಬೆಂಗಳೂರು ವಾಸಿ ಪದ್ಮನಾಭ ಭಟ್‌ (50) ಅವರೂ ಇದ್ದಾರೆ.

    Click Here

    Call us

    Click Here

    ಕುಂಭಾಶಿಯ ಕೊರವಡಿ ರಸ್ತೆಯ ಲ್ಲಿರುವ ಶ್ರೀ ಹರಿಹರ ನಿಲಯವು ಮೃತ ಪದ್ಮನಾಭ ಭಟ್ಟರ ಹಿರಿಯರ ಮೂಲ ಮನೆ. ಪದ್ಮನಾಭ ಅವರ ಹುಟ್ಟು, ವಿದ್ಯಾ ಭ್ಯಾಸ ಬೆಂಗಳೂರಿನಲ್ಲೇ ನಡೆದಿತ್ತು. ಸಿಎ ವ್ಯಾಸಂಗ ಮಾಡಿದ ಅನಂತರ ಖಾಸಗಿ ಕಂಪೆನಿಯೊಂದಕ್ಕೆ ಸೇರಿದ್ದು ಆ ಸಂಸ್ಥೆಯ ವತಿಯಿಂದ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿನ ಸಿಪಿಎ ತೇರ್ಗಡೆಯಾದರು. ಬೆಂಗಳೂರಿಗೆ ಮರಳಿದ ಬಳಿಕ ಖಾಸಗಿ ಕಂಪೆನಿ ಸೇವೆ ಯಲ್ಲಿ ಮುಂದುವರಿಸಿದ್ದರು. ಕುಂಭಾಶಿಯಲ್ಲಿ ಅವರ ಚಿಕ್ಕಪ್ಪನ ಕುಟುಂಬದವರು ವಾಸ್ತವ್ಯ ಇದ್ದಾರೆ.

    ಪದ್ಮನಾಭರಿಗೆ ಪ್ರವಾಸ, ಚಾರಣ ಇತ್ಯಾದಿ ಆಸಕ್ತಿ. ಆಗಾಗ ಸಹೋದ್ಯೋಗಿಗಳು, ಸ್ನೇಹಿತರೊಡನೆ ಪ್ರವಾಸ ಹೋಗುತ್ತಿದ್ದರು. ಮೇ 29ರಂದು 22 ಜನರ ತಂಡದೊಂದಿಗೆ ಉತ್ತರಾಖಂಡದ ಉತ್ತರ ಕಾಶಿಯ ಬೆಟ್ಟ ಪ್ರದೇಶಕ್ಕೆ ಚಾರಣ ಹೋಗಿದ್ದರು.

    ಯಶಸ್ವಿಯಾಗಿ ಪ್ರವಾಸ ಮುಗಿಸಿ ಹುಲ್ಲುಗಾವಲಿನಂತಹ ಬೆಟ್ಟ ಪ್ರದೇಶದಿಂದ ಜೂ. 4ರಂದು ಮಧ್ಯಾಹ್ನ 2 ಗಂಟೆಗೆ ಎಲ್ಲರೂ 15 ಸಾವಿರ ಅಡಿ ಎತ್ತರದಿಂದ ಕೆಳಗಿಳಿಯುತ್ತಿ¤ರುವಾಗ 100 ಕಿ.ಮೀ ನಷ್ಟು ವೇಗವಾಗಿ ಬೀಸಲಾರಂಭಿಸಿದ ಶೀತ ಮಾರುತದಿಂದಾಗಿ ಅವರು ತೊಟ್ಟಿದ್ದ ಜರ್ಕಿನ್‌ಗಳು ಚಿಂದಿಯಾದವು. ಆಧಾರ ತಪ್ಪಿದ ಅವರಿಗೆ ಯಾವ ಹಿಡಿತವೂ ಸಿಗ ಲಿಲ್ಲ. ನಾಲ್ಕು ಗಂಟೆ ಬೀಸಿದ ಮಾರುತ ಪರಿಸ್ಥಿತಿಯನ್ನು ಘೋರವಾಗಿಸಿತು. ಕೆಲವರು ಹೇಗೋ ಜೀವ ಉಳಿಸಿಕೊಂಡರೆ 9 ಮಂದಿ ಶೀತ ಮಾರುತಕ್ಕೆ ಬಲಿಯಾದರು.

    ಬೆಂಗಳೂರಿನ ಭಟ್ಟರ ನಿವಾಸದಲ್ಲಿ ರೋದನ ಮುಗಿಲು ಮುಟ್ಟಿದೆ. ಅವರ ತಾಯಿ, ಪತ್ನಿ, ಪುತ್ರ, ಪುತ್ರಿ, ಸಹೋದರಿಯರು, ಕುಟುಂಬದವರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಉತ್ತರಾಖಂಡ ಆಡಳಿತ, ಸೇನೆ ಕಾರ್ಯಾಚರಣೆ ನಡೆಸಿದೆ. ಕರ್ನಾಟಕ ಸರಕಾರವೂ ತನ್ನ ಪ್ರವಾಸಿಗರನ್ನು ವಾಪಸು ಕರೆಸಿಕೊಳ್ಳಲು ವ್ಯವಸ್ಥೆ ಮಾಡಿದೆ.

    Click here

    Click here

    Click here

    Call us

    Call us

    ಈ ತಂಡದಲ್ಲಿ ಬೆಂಗಳೂರಿನ ಇಬ್ಬರು ಮಹಿಳೆಯರಿದ್ದು, ಅವರು 34 ಬಾರಿ ಈ ಬೆಟ್ಟವನ್ನು ಏರಿ ಇಳಿದಿದ್ದರಂತೆ. ಅವರೂ ವಿಧಿಯಾಟಕ್ಕೆ ಬಲಿಯಾಗಿದ್ದಾರೆ. ಶೀತ ಮಾರುತ ಒಂದು ಗಂಟೆ ತಡವಾಗಿ ಬೀಸಿದ್ದರೂ ಎಲ್ಲರೂ ಪಾರಾಗುತ್ತಿದ್ದರು.

    ಪದ್ಮನಾಭ ಭಟ್‌ ಕುಂಭಾಶಿಯ ಬಗ್ಗೆ ಮಮತೆ ಹೊಂದಿದ್ದರು. ಕುಟುಂಬ ದವರು ಪೂಜೆ ನಡೆಸುತ್ತಿದ್ದ ಕುಂಭಾಶಿಯ ಶ್ರೀ ಹರಿಹರ ದೇವಾಲಯ ಅಭಿವೃದ್ಧಿಗೂ ಸಹಕಾರ ನೀಡಿದ್ದರು. ತೆಕ್ಕಟ್ಟೆ ಬಳಿಯ ಮಾಲಾಡಿಯ ಶ್ರೀ ನಂದಿಕೇಶ್ವರ ದೈವಕ್ಕೂ ರಜತ ಮುಖವಾಡ ಇತ್ಯಾದಿ ಸಮರ್ಪಿಸಿದ್ದರು. ಮುಂದಿನ ಡಿಸೆಂಬರ್‌ನಲ್ಲಿ ಊರಿಗೆ ಬಂದು ತಮ್ಮ ತಂದೆಯ ಸ್ಮರಣಾರ್ಥ ಕಾರ್ಯಕ್ರಮ ಇತ್ಯಾದಿ ನಡೆಸುವ ಉದ್ದೇಶವಿತ್ತು.

    ಪದ್ಮನಾಭ ಅವರು ಕೃಷ್ಣಮೂರ್ತಿ ಭಟ್‌-ಸತ್ಯವತಿ ದಂಪತಿಯ ಪುತ್ರ. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    four × 1 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.