Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವನಿಧಿ ಯೋಜನೆಗೆ ಅರ್ಹ ಯುವಜನರನ್ನು ಫಲಾನುಭವಿಗಳಾನ್ನಾಗಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಯುವನಿಧಿ ಯೋಜನೆಗೆ ಅರ್ಹ ಯುವಜನರನ್ನು ಫಲಾನುಭವಿಗಳಾನ್ನಾಗಿಸಿ: ಜಿಲ್ಲಾಧಿಕಾರಿ

    Updated:02/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಯುವನಿಧಿ ಯೋಜನೆಯ ಬಗ್ಗೆ ಹೆಚ್ಚು ಪ್ರಚಾರಪಡಿಸುವುದರೊಂದಿಗೆ ನಿರುದ್ಯೋಗ ಹೊಂದಿದ ಯುವಜನರು ಇದರ ಫಲಾನುಭವಿಗಳಾನ್ನಾಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಅನುಷ್ಠಾನ ಹಾಗೂ ಐ. ಟಿ. ಐ ಪ್ರವೇಶಾತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರಕಾರ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಾದ ಅರ್ಹ ಯುವಜನರಿಗೆ ಯುವನಿಧಿ ಯೋಜನೆಯಡಿ ಪ್ರತೀ ತಿಂಗಳು ಪದವಿ ಹೊಂದಿದವರಿಗೆ 3,000ರೂ. ಹಾಗೂ ಡಿಪ್ಲೋಮಾ ಹೊಂದಿದವರಿಗೆ 1,500 ರೂ. ಗಳನ್ನು ನೇರ ನಗದು ಹಣವನ್ನು ನಿರುದ್ಯೋಗ ಭತ್ಯೆ ರೀತಿಯಲ್ಲಿ ನೀಡುತ್ತಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಇದರ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

    ಪ್ರಸಕ್ತ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾ ಹೊಂದಿದವರು ಹಾಗೂ ಈ ಹಿಂದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ತಿರಸ್ಕೃತ ಗೊಂಡಿರುವವರೂ ಸಹ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.

    ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತೀ ತಿಂಗಳು 25 ನೇ ತಾರೀಕಿನ ಒಳಗಾಗಿ ಆನ್ಲೈನ್‍ ಲಾಗಿನ್‌ನ ಮೂಲಕ ಸ್ವಯಂ ಘೋಷಣೆಯನ್ನು ತಪ್ಪದೇ ಮಾಡಬೇಕು. ಘೋಷಣೆ ಮಾಡದೇ ಇದ್ದಲ್ಲಿ ತಿಂಗಳ ನೇರ ನಗದು ಖಾತೆಗೆ ಜಮಾವಣೆ ಆಗುವುದಿಲ್ಲ ಎಂದ ಅವರು, ಫಲಾನುಭವಿಗಳು ತಪ್ಪದೇ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ವಿನಿಮಯ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

    Click here

    Click here

    Click here

    Call us

    Call us

    ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ಐ. ಟಿ. ಐ ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಸಂಸ್ಥೆಗಳಲ್ಲಿ ಸಾಂಪ್ರದಾಯಿಕ ಕೋರ್ಸುಗಳಾದ ಫಿಟ್ಟರ್, ಎಲೆಕ್ಟ್ರೀಷಯನ್, ಎಲೆಕ್ಟ್ರೀಕಲ್, ಟರ್ನರ್ ಜೊತೆಗೆ ಆಧುನಿಕ ಕೋರ್ಸುಗಳಾದ ಎಲೆಕ್ಟ್ರೀಕ್ ವೆಹಿಕಲ್ ತಯಾರಿ, ಆರ್ಟಿಫಿಷಿಯಲ್ ಇಂಟೆಲಿಜೆನ್ಸಿ, ರೋಬೋಟ್ ತಯಾರಿಕೆಗೆ ಸಂಬಂಧಿಸಿದ ಕೋರ್ಸುಗಳನ್ನು ಟಾಟಾ ಹಾಗೂ ಟೊಯೋಟಾ ದಂತಹ ಬೃಹತ್ ಕೈಗಾರಿಕೆಗಳ ಸಹಯೋಗದೊಂದಿಗೆ ಪ್ರಾರಂಭಿಸಿದ್ದು, ಕೋರ್ಸುಗಳು ಪಡೆದ ನಂತರ ಆ ಕಂಪನಿಗಳಲ್ಲಿಯೇ ಉದ್ಯೋಗ ಕಲ್ಪಿಸುವಂತ ಒಪ್ಪಂದಗಳು ಸಹ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ಪ್ರಚಾರಪಡಿಸಿ, ಕೌಶಲ್ಯಾಭಿವೃದ್ಧಿ ಶಿಕ್ಷಣ ಪಡೆದು, ಹೆಚ್ಚು ಜನರು ಇದರ ಲಾಭ ಪಡೆದುಕೊಳ್ಳುವಂತೆ ಮಾಡಬೇಕು ಎಂದರು.

    ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೋಮಾ ಪಡೆದವರಿಗೆ ಪ್ರತಿಶತಃ ನೂರರಷ್ಟು ಉದ್ಯೋಗ ಅವಕಾಶಗಳು ದೊರೆಯಲಿದೆ ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್, ಜಿಲ್ಲಾ ಕೌಶಲ್ಯಾ ಅಧಿಕಾರಿ ಪ್ರದೀಪ್ ಡಿ ಸೋಜ, ಜಿಲ್ಲೆಯ ಎಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರುಗಳು, ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಚಾರ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.