Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮುದಾಯದ ಅಭ್ಯುದಯಕ್ಕಾಗಿ ರೋಟರಿ ನೂರಾರು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ: ಡಾ. ಭರತೇಶ್ ಅದಿರಾಜ್
    Uncategorized

    ಸಮುದಾಯದ ಅಭ್ಯುದಯಕ್ಕಾಗಿ ರೋಟರಿ ನೂರಾರು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ: ಡಾ. ಭರತೇಶ್ ಅದಿರಾಜ್

    Updated:20/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸಮುದಾಯದ ಅಭ್ಯುದಯಕ್ಕಾಗಿ ರೋಟರಿ ನೂರಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸ್ನೇಹ, ಸೇವೆ, ವಿಭಿನ್ನತೆಯಲ್ಲಿ ಏಕತೆಯನ್ನು ಸಾಧಿಸುವುದರೊಂದಿಗೆ ಸಮಾಜದ ಅಭ್ಯುದಯಕ್ಕಾಗಿ ಮುಂದಾಳತ್ವ ವಹಿಸಿಕೊಳ್ಳುವ ಕಾರ್ಯಗಳು ರೋಟರಿ ಮೂಲಕ ನಿರಂತರವಾಗಿ ನಡೆಯುತ್ತಲೇ ಇವೆ ಎಂದು ರೋಟರಿ ಜಿಲ್ಲೆ 3180ರ ಮಾಜಿ ಜಿಲ್ಲಾ ಗವರ್ನ್‌ರ್ ಡಾ. ಭರತೇಶ್ ಅದಿರಾಜ್ ಅವರು ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ಆಯೋಜಿಸಲಾದ ಆರ್.ಐ ಡಿಸ್ಟಿಕ್ 3182 ಝೋನ್-1ರ ಝೋನಲ್ ಮೆಂಬರ್‌ಶಿಪ್ ಡೆವೆಲಪ್‌ಮೆಂಟ್ ಮತ್ತು ಪಬ್ಲಿಕ್ ಇಮೇಜ್ ಸೆಮಿನಾರ್‌ನಲ್ಲಿ ಪಬ್ಲಿಕ್ ಇಮೇಜ್ ಬಗ್ಗೆ ಉಪನ್ಯಾಸ ನೀಡಿ ರೋಟರಿಯಿಂದ ಕೈಗೊಳ್ಳುವ ಸಮಾಜಮುಖಿ ಕಾರ್ಯಗಳನ್ನು ಸಮುದಾಯಕ್ಕೆ ತಿಳಿಯುವಂತೆ ಮಾಡುವುದು ಕೂಡ ಆಯಾ ಕ್ಲಬ್‌ಗಳ ಜವಾಬ್ದಾರಿಯಾಗಿದೆ. ರೋಟರಿಯ ಸಾಮಾಜಿಕ ಮೌಲ್ಯ ಹೆಚ್ಚಿಸುವಂತಹ ಕಾರ್ಯಗಳು ನಿರಂತರವಾಗಿ ಆಗಬೇಕಿದೆ ಎಂದರು.

    ರೋಟರಿ ಝೋನಲ್ ಲರ್ನಿಂಗ್ ಫೆಸಿಲಿಟೇಟರ್ ಡಾ. ಉಮೇಶ್ ಪುತ್ರನ್ ಅವರು ಮೆಂಬರ್‌ಶಿಪ್ ಡೆವಲಪ್‌ಮೆಂಟ್ ಬಗ್ಗೆ ಉಪನ್ಯಾಸ ನೀಡಿ ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿಯಲ್ಲಿ ವಿವಿಧ ವೃತ್ತಿ ಹಾಗೂ ಉದ್ಯೋಗದಲ್ಲಿ ತೊಡಗಿಸಿಕೊಂಡವರು ಸದಸ್ಯರಾಗುತ್ತಾರೆ. ಹೊಸ ಸದಸ್ಯರನ್ನು ರೋಟರಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಮತ್ತು ಧೀರ್ಘಾವಧಿಯಲ್ಲಿ ರೋಟರಿಯೊಂದಿಗೆ ಮುಂದುವರಿಯುಂತೆ ಮಾಡುವುದು ಮುಖ್ಯವಾಗಿದೆ ಎಂದರು.

    ಈ ಸಂದರ್ಭ ಬೈಂದೂರು ರೋಟರಿ ಸಮುದಾಯ ಭವನವನ್ನು ನವೀಕರಿಸಿದ ಬೈಂದೂರು ರೋಟರಿ ಟ್ರಸ್ಟ್ ಪರವಾಗಿ ಟ್ರಸ್ಟ್‌ನ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

    ರೋಟರಿ ವಲಯ 1ರ ಸಹಾಯಕ ಗವರ್ನರ್ ಡಾ. ಬಿ. ರಾಜೇಂದ್ರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಹಾಯಕ ಗವರ್ನ್‌ರ್ ಕೆ.ಕೆ. ಕಾಂಚನ್, ವಲಯ ಸೇನಾನಿಗಳಾದ ಪ್ರದೀಪ್ ಡಿ.ಕೆ, ವೆಂಕಟೇಶ್ ನಾವುಂದ, ಮೆಂಬರ್‌ಶಿಪ್ ಡೆವಲಪ್‌ಮೆಂಟ್ ವಲಯ ಸಂಯೋಜಕ ಶ್ರೀನಾಥ್ ಜೆ. ರಾವ್, ಪಬ್ಲಿಕ್ ಇಮೇಜ್ ವಲಯ ಸಂಯೋಜಕ ಗಣೇಶ್ ಐತಾಳ್, ಪಬ್ಲಿಕ್ ಇಮೇಜ್ ಕ್ಲಬ್ ಛೇರ್ಮನ್ ಐ. ನಾರಾಯಣ್, ಪಬ್ಲಿಕ್ ಇಮೇಜ್ ಕ್ಲಬ್ ಛೇರ್ಮನ್ ಮಂಜುನಾಥ ಮಹಾಲೆ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಸ್ವಾಗತಿಸಿ, ಕಾರ್ಯದರ್ಶಿ ಸುನಿಲ್ ಹೆಚ್. ಜಿ. ಬೈಂದೂರು ವಂದಿಸಿದರು. ಪೂರ್ವಾಧ್ಯಕ್ಷ ಹೆಚ್.‌ ಉದಯ್‌ ಆಚಾರ್‌ ಪ್ರಾರ್ಥಿಸಿದರು. ಕ್ಲಬ್ ಸರ್ವಿಸ್ ಛೇರ್ಮನ್ ಸೋಮನಾಥನ್ ಆರ್ ಕಾರ್ಯಕ್ರಮ ನಿರೂಪಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d