Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿರಿಮಂಜೇಶ್ವರ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಸಭೆ ಅಪೂರ್ಣ. ಸದಸ್ಯರು, ಸಾರ್ವಜನಿಕರ ಕಡೆಗಣನೆ: ಸದಸ್ಯ ಸುಬ್ಬಣ್ಣ ಶೆಟ್ಟಿ ಆರೋಪ
    ಊರ್ಮನೆ ಸಮಾಚಾರ

    ಕಿರಿಮಂಜೇಶ್ವರ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಸಭೆ ಅಪೂರ್ಣ. ಸದಸ್ಯರು, ಸಾರ್ವಜನಿಕರ ಕಡೆಗಣನೆ: ಸದಸ್ಯ ಸುಬ್ಬಣ್ಣ ಶೆಟ್ಟಿ ಆರೋಪ

    Updated:04/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಕಿರಿಮಂಜೇಶ್ವರ ಗ್ರಾಮ ಪಂಚಾಯತಿಯಲ್ಲಿ ಅಪೂರ್ಣ ಗ್ರಾಮ ಸಭೆ ನಡೆಸಲಾಗಿದ್ದು ಎರಡರಿಂದ ಮೂರು ಅಜಿಂಡಗಳಿಗೆ ಮಾನ್ಯತೆ ನೀಡಿಲ್ಲ, 2023-24ನೇ ಸಾಲಿನ ಜಮಾ ಖರ್ಚುಗಳನ್ನು ಓದಿ ಹೇಳಿಲ್ಲ, ಮುಂದಿನ ಸಾಲಿನಲ್ಲಿ ಮಾಡುವ ಕ್ರೀಯಾಯೋಜನೆಗಳ ಕಾಮಗಾರಿಗಳ ಪಟ್ಟಿ ಸಭೆಗೆ ತಿಳಿಸಿಲ್ಲ ಹಾಗೂ ಮಂಜೂರಾತಿ ಪಡೆದಿಲ್ಲ, ವಾರ್ಡು ಸಭೆಯ ನಡವಳಿ ಬಗ್ಗೆ ವಿಷಯ ತಿಳಿಸಿಲ್ಲ, ಈ ಎಲ್ಲಾ ಲೋಪಗಳನ್ನು ಮರೆಮಾಚಿಸುವ ಸಲುವಾಗಿ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಮಾದರಿ ಗ್ರಾಮಸಭೆ ಎಂದು ಬಿಂಬಿಸಿ ಪ್ರಜ್ಞಾವಂತ ಗ್ರಾಮಸ್ಥರ ದಿಕ್ಕು ತಪ್ಪಿಸುವ ಹುನ್ನಾರ ನಡೆದಿದೆ ಎಂದು ಕಿರಿಮಂಜೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಸುಬ್ಬಣ್ಣ ಶೆಟ್ಟಿ ಆರೋಪಿಸಿದ್ದಾರೆ.

    Click Here

    Call us

    Click Here

    ಅವರು ಬೈಂದೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಾಗೂರು ಮಹಾಲಸಾ ಕಲ್ಬರಲ್ ಹಾಲ್‌ನಲ್ಲಿ ನಡೆದ ಗ್ರಾಮಸಭೆಯಲ್ಲಿ ಮೂಲ ಆಶಯಗಳಿಗೆ ವಿರುದ್ಧವಾಗಿ ಅಧ್ಯಕ್ಷರು, ಪಿಡಿಓ, ನೋಡಲ್ ಅಧಿಕಾರಿಗಳು ನಡೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಮತನಾಡಲೂ ಅವಕಾಶ ಕೊಡದೇ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳದೆ ಕಾಟಾಚಾರಕ್ಕಾಗಿ ತರಾತುರಿಯಲ್ಲಿ ಗ್ರಾಮಸಭೆಯನ್ನು ಮುಗಿಸಿ ಕೈತೊಳೆದುಕೊಂಡರು ಎಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರಾಪಂನ ಸಾಮಾನ್ಯಸಭೆ ನಡೆಯುತ್ತಿಲ್ಲ. ಗ್ರಾಪಂ ಸದಸ್ಯರ ಸಮ್ಮುಖದಲ್ಲಿ ಚರ್ಚೆಗಳಿಲ್ಲ, ಪರ-ವಿರೋಧ ದಾಖಲಿಸುವುದಿಲ್ಲ. ಯಾವುದಕ್ಕೂ ನಿರ್ಣಯ ಮಾಡುವುದಿಲ್ಲ. ಮನೆ ತೆರಿಗೆ ಹೆಚ್ಚಳ ಮಾಡಿದ್ದಾರೆ. ಮಾರುಕಟ್ಟೆ ವ್ಯಾಪಾರಸ್ಥರಿಂದ ಶುಲ್ಕ ಪಡೆಯುತ್ತಿಲ್ಲ. ನೀರಿನ ಬಿಲ್ಲು ವಸೂಲಿಯಾಗುತ್ತಿಲ್ಲ. ಯಾವುದಕ್ಕೂ ಟೆಂಡರ್ ಕರೆಯುವ ಪದ್ದತಿಯಿಲ್ಲ. ಕೇವಲ ಮನೆ ತೆರಿಗೆಯಿಂದ ಗ್ರಾಮದ ಅಭಿವೃದ್ಧಿಯಾಗುವುದಿಲ್ಲ. ಆಡಳಿತ ವರ್ಗ ಹಾಗೂ ಪಿಡಿಒ ಶಾಮೀಲಾಗಿದ್ದು, ಏಕವ್ಯಕ್ತಿ ಪ್ರದರ್ಶನ ನೀಡುತ್ತಿದ್ದಾರೆ. ಪಂಚಾಯತ್ ವ್ಯವಸ್ಥೆಯಲ್ಲಿ ಇವರಾಡಿದ್ದೇ ಆಟವಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದ್ದು, ಎಲ್ಲಿಯೂ ಕೂಡ ಇಂತಹ ಘಟನೆಗಳು ನಡೆಯಬಾರದು ಎಂದ ಅವರು, ಮೇಲಿನ ಎಲ್ಲಾ ಅಹವಾಲುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಗ್ರಾಮಸಭೆಯ ವಿಡಿಯೋಗಳನ್ನು ತರಿಸಿ, ಪರಿಶೀಲಿಸಿ ತಪ್ಪಿತಸ್ಥ ಪಂಚಾಯತ್ ಅಧ್ಯಕ್ಷರು, ಪಿಡಿಓ, ನೋಡಲ್ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಈ ಹಿಂದಿನ ಗ್ರಾಮಸಭೆಯನ್ನು ರದ್ದುಪಡಿಸಿ. ಹೊಸತಾಗಿ ಗ್ರಾಮಸಭೆಯನ್ನು ನಡೆಸುವಂತೆ ಆದೇಶ ಮಾಡಿ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ದಕ್ಕೆಯಾಗದಂತೆ ನ್ಯಾಯ ಕೊಡಿಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ನೀಡಲಾಗುವುದು ಎಂದರು.

    ಕಿರಿಮಂಜೇಶ್ವರ ಗ್ರಾಪಂ ಮಾಜಿ ಸದಸ್ಯ ರಾಮಚಂದ್ರ ಮಾತನಾಡಿ, ಪೂರ್ಣಪ್ರಮಾಣದ ಹಣ ಪಾವತಿಸಿ ಗ್ರಾಮದ ತ್ಯಾಜ್ಯ ಸಂಗ್ರಹಣಾ ವಾಹನ ಖರೀದಿಸಿದ್ದು, ಅದಿನ್ನು ಪಂಚಾಯತ್ ಕೈಸೇರದೇ ಶೋರೂಂನಲ್ಲಿದೆ. ಅದನ್ನು ತಂದರೆ ನಿಲ್ಲಿಸಲು ಸ್ಥಳದ ಕೊರತೆಯ ಕಾರಣ ನೀಡುತ್ತಿರುವುದು ಹಾಸ್ಯಾಸ್ಪದ. ಪಿಡಿಒಗೆ ಆಡಳಿತದ ಅನುಭವದ ಕೊರತೆ ಎದ್ದು ಕಾಣುತ್ತಿದ್ದು, ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದ ಆಗ್ರಹಿಸಿದ ಅವರು, ಗ್ರಾಮಸ್ಥರ ವಿರೋಧದ ಹೊರತಾಗಿಯೂ ಮಾಡುವ ಕಾಮಗಾರಿಗಳಿಗೆ ನಮ್ಮ ಆಕ್ಷೇಪವಿದೆ ಎಂದರು.ಮಾಡಿದರೆ ನಮ್ಮ ಆಕ್ಷೇಪವಿದೆ ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    19 − 9 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.