Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಹಾಗೂ ಪುರಸಭಾ ಮಾಜಿ ಅಧ್ಯಕ್ಷ ಹೆಚ್. ಸುಬ್ರಾಯ ಶೇರುಗಾರ್‌ ಅವರಿಗೆ ನುಡಿನಮನ
    ಊರ್ಮನೆ ಸಮಾಚಾರ

    ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಹಾಗೂ ಪುರಸಭಾ ಮಾಜಿ ಅಧ್ಯಕ್ಷ ಹೆಚ್. ಸುಬ್ರಾಯ ಶೇರುಗಾರ್‌ ಅವರಿಗೆ ನುಡಿನಮನ

    Updated:30/09/2024No Comments
    Facebook Twitter Pinterest LinkedIn WhatsApp Reddit Tumblr Email
    filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಬೈಂದೂರು, ರಾಮಕ್ಷತ್ರಿಯ ಸಮಾಜ ಬೈಂದೂರು, ರಾಮಕ್ಷತ್ರಿಯ ಮಾತೃ ಮಂಡಳಿ ಬೈಂದೂರು ಹಾಗೂ ರಾಮಕ್ಷತ್ರಿಯ ಯುವಕ ಸಮಾಜ ಬೈಂದೂರು ಇವರ ಜಂಟಿ ಆಶ್ರಯದಲ್ಲಿ ಭಾನುವಾರ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿಧನರಾದ ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಹಾಗೂ ಪುರಸಭಾ ಮಾಜಿ ಅಧ್ಯಕ್ಷರಾದ ಹೊಸಾಡು ಸುಬ್ರಾಯ ಶೇರುಗಾರ್‌ ಅವರಿಗೆ ನುಡಿನಮನ ಸಲ್ಲಿಸಲಾಯಿತು.

    Click Here

    Call us

    Click Here

    ಈ ಸಂದರ್ಭ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಮ್ಯಾನೇಜಿಂಗ್‌ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್‌ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ರಾಮಕ್ಷತ್ರಿಯ ಸಮುದಾಯದಲ್ಲಿ ಜನಿಸಿದ ಇಬ್ಬರು ಮಹನೀಯರು ಸಮುದಾಯ ಹಾಗೂ ಸಮಾಜದಲ್ಲಿ ತಮ್ಮ ಅವಿರತ ಸೇವೆಯ ಮೂಲಕ ಗುರುತಿಸಿಕೊಂಡಿದ್ದರು. ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರು ಕಷ್ಟದಿಂದ ಓದಿ ಸರಕಾರಿ ಉದ್ಯೋಗ ಪಡೆದ ಬಳಿಕವೂ ಉನ್ನತವಾದುದನ್ನು ಸಾಧಿಸಬೇಕು ಎಂಬ ಛಲದಿಂದ ಸ್ವಂತ ಉದ್ಯಮ ಸ್ಥಾಪಿಸಿ ಹೆಸರು ಮಾಡಿದ್ದರು. ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದು ಒಂದು ಭಾರಿ ಬೈಂದೂರು ಕ್ಷೇತ್ರದ ಶಾಸಕರಾಗಿ ಅಲ್ಲಿಯೂ ಧೀರ್ಘಕಾಲ ನೆನಪಿನಲ್ಲಿ ಉಳಿಯುವಂತಹ ಯೋಜನೆ ಹಾಗೂ ಸೇವಾ ಕಾರ್ಯಗಳನ್ನು ಮಾಡಿದ್ದಾರೆ. ಹೊಸಾಡು ಸುಬ್ರಾಯ ಶೇರುಗಾರ್‌ ಅವರು ಉತ್ತಮ ಸಂಘಟನಾ ಚತುರರಾಗಿದ್ದರು. ನಾಯಕರು ಹಾಗೂ ಜನಸಾಮಾನ್ಯರ ನಡುವೆ ಕೊಂಡಿಯಾಗಿದ್ದುಕೊಂಡು ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಉದ್ಯಮದೊಂದಿಗೆ ರಾಜಕೀಯದಲ್ಲಿಯೂ ತನ್ನದೇ ಆದ ಅಸ್ತಿತ್ವವನ್ನು ತೋರ್ಪಡಿಸಿ ಬೈಂದೂರು ಅಭಿವೃದ್ಧಿಯಲ್ಲಿ ಶ್ರಮಿಸಿದ್ದರು ಎಂದರು.

    ಬೈಂದೂರು ರಾಮಕ್ಷತ್ರಿಯ ಸಮಾಜದ ಅಧ್ಯಕ್ಷರಾದ ರಾಮಕೃಷ್ಣ ಸಿ., ಮಾತೃ ಮಂಡಳಿ ಅಧ್ಯಕ್ಷರಾದ ಗಾಯತ್ರಿ ರಾಮ ಸೊಡಿತಾರ್, ಯುವಕ ಸಮಾಜದ ಕಾರ್ಯದರ್ಶಿ ರಾಜೇಶ್ ಎನ್. ಉಪಸ್ಥಿತರಿದ್ದರು. ಶ್ರೀರಾಮ ವಿವಿದೋದ್ದೇಶ ಟ್ರಸ್ಟ್ ಇದರ ಸಂಚಾಲಕರಾದ ಆನಂದ್ ಮದ್ದೋಡಿ, ವಿಶ್ವ ರಾಮಕ್ಷತ್ರಿಯ ಮಹಾಸಂಘದ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಅಗಲಿದ ಚೇತನಗಳ ಜೀವನಗಾಧೆಯನ್ನು ಪರಿಚಯಿಸಿದರು.

    ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸದಾಶಿವ ಡಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಮಾಜಿ ಟ್ರಸ್ಟಿಗಳಾದ ಜಯಾನಂದ ಹೋಬಳಿದಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸುರೇಶ್ ಬಡಿವಾಡಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮಾಲಿನಿ ಕೆ. ಮಯ್ಯಾಡಿ,  ಮಾಜಿ ಸದಸ್ಯರಾದ ರಾಮ ಸೋಡಿತಾರ್, ಉದ್ಯಮಿಗಳಾದ ವೆಂಕಟರಮಣ ಬಿಜೂರು, ಗೋಪಾಲಕೃಷ್ಣ ಕಲ್ಮಕ್ಕಿ, ರಾಮಕ್ಷತ್ರಿಯ ಸಂಘದ ಮಾಜಿ ಕಾರ್ಯದರ್ಶಿಗಳಾದ ಆನಂದ ಎಂ.ಪಿ. ರಾಮದಾಸ್ ಜಿ ಬೆಂಗಳೂರು ಮೊದಲಾದವರು ಮೃತರನ್ನು ಸ್ಮರಿಸಿ ಕಂಬನಿ ಮಿಡಿದರು.

    ಅಗಲಿದ ಹಿರಿಯ ಚೇತನಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮೌನಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    10 + 9 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.