Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿ ಆರಂಭ: ಇಡೀ ಕುಟುಂಬಕ್ಕೆ ಗುಣಮಟ್ಟದ ಆರೋಗ್ಯ ಸೇವೆ
    ಊರ್ಮನೆ ಸಮಾಚಾರ

    ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿ ಆರಂಭ: ಇಡೀ ಕುಟುಂಬಕ್ಕೆ ಗುಣಮಟ್ಟದ ಆರೋಗ್ಯ ಸೇವೆ

    Updated:15/10/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: 
    ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿಯು ಆರಂಭಗೊಂಡಿದೆ. ಭಾರತೀಯ  ಆರೋಗ್ಯ ವ್ಯವಸ್ಥೆಯು ದೂರದರ್ಶಿತ್ವದ ನಾಯಕ  ಡಾ. ಟಿ.ಎಂ.ಎ. ಪೈ ಅವರ ಸಮರ್ಪಣೆ ಮತ್ತು ಸಮಾಜ ಸೇವೆಯಲ್ಲಿ ಬದ್ಧತೆ ಅಸಾಧಾರಣವಾಗಿ ಅಪರೂಪ. ಅವರ ಕನಸನ್ನು ನನಸಾಗಿಸುವಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವಂತೆ ಮಾಡುವುದು ಈ ಕಾರ್ಡ್‌ನ ಉದ್ದೇಶವಾಗಿದೆ. ಮಣಿಪಾಲ್ ಆರೋಗ್ಯ ಕಾರ್ಡ್ “ಇಡೀ ಕುಟುಂಬಕ್ಕಾಗಿ, ಉತ್ತಮ ಮೌಲ್ಯ, ವಿಶ್ವಾಸಾರ್ಹ ಸೇವೆ ” ಎಂಬ ಅಡಿಬರಹದ ಅಡಿಯಲ್ಲಿ, ಎಲ್ಲಾ ಸದಸ್ಯರಿಗೆ ಸಮಗ್ರ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಅ.15ರಂದು ಕುಂದಾಪುರ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

    ಮಾಹೆಯ ಕುಲಾಧಿಪತಿ ಡಾ. ರಾಮದಾಸ್ ಪೈ ಅವರ ನೇತೃತ್ವದಲ್ಲಿ 2000ರಲ್ಲಿ ಪ್ರಾರಂಭವಾದ ಮಣಿಪಾಲ್ ಆರೋಗ್ಯ  ಕಾರ್ಡ್ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿಆರೋಗ್ಯ ಸೇವೆಯನ್ನು ಒದಗಿಸಲು ಶ್ರಮಿಸುತ್ತಿದೆ. ಉಚಿತ ಆರೋಗ್ಯ ಸೇವೆಯನ್ನು ನೀಡುವುದು ಸವಾಲಿನದ್ದಾಗಿದ್ದರೂ, ಈ ಉಪಕ್ರಮವು ರಿಯಾಯಿತಿ  ವೆಚ್ಚದಲ್ಲಿ ಆರೋಗ್ಯ ಸೇವೆಯನ್ನು ಖಚಿತಪಡಿಸುತ್ತದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಆರಂಭವಾಗಿ ಕರಾವಳಿ ಮತ್ತು ಮಧ್ಯ ಕರ್ನಾಟಕದ 12-15 ಜಿಲ್ಲೆಗಳಿಗೆ ವಿಸ್ತರಣೆಗೊಂಡಿದೆ.ಕಳೆದ 23 ವರ್ಷಗಳಲ್ಲಿ, ಮಣಿಪಾಲ್ ಆರೋಗ್ಯ ಕಾರ್ಡ್ ಲಕ್ಷಾಂತರ ಜನರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿದೆ, 2023 ರಲ್ಲಿ 3,60,000 ಸದಸ್ಯರು  ನೋಂದಾಯಿಸಿಕೊಂಡಿದ್ದಾರೆ , ಇದು ಅದರ ಬೆಳೆಯುತ್ತಿರುವ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

    ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ  25% ರಿಯಾಯಿತಿ, ರೇಡಿಯಾಲಜಿ ,  ಹೊರರೋಗಿ  ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ,  ಡಯಾಲಿಸಿಸ್‌ನಲ್ಲಿ ₹100 ರಿಯಾಯಿತಿ, ಆಸ್ಪತ್ರೆಯ  ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ ಎಂದರು.

    ಕಾರ್ಡ್‌ದಾರರು ಕಸ್ತೂರ್ಬಾ  ಆಸ್ಪತ್ರೆ – ಮಣಿಪಾಲ, ಡಾ. ಟಿ.ಎಂ.ಎ.ಪೈ ಆಸ್ಪತ್ರೆ-ಉಡುಪಿ, ಡಾ. ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ – ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ – ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು.

    Click here

    Click here

    Click here

    Call us

    Call us

    ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.

    ಪತ್ರಿಕಾಗೋಷ್ಟಿಯಲ್ಲಿ ಪ್ರತಿನಿಧಿಯಾದ ಅಕ್ಷಯ್ ಕುಮಾರ್, ಭದ್ರಯ್ಯ ಕೋಟೇಶ್ವರ ಹಾಗೂ ರಕ್ಷಿತ್‌ ಕುಮಾರ್‌ ಶೆಟ್ಟಿ ವಂಡ್ಸೆ ಉಪಸ್ಥಿತರಿದ್ದರು.

    2024ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
    ಕುಂದಾಪುರ: ಭದ್ರಯ್ಯ – 9448872666, ನಾಗರಾಜ್ ಖಾರ್ವಿ – 9916888916, ವಂಡ್ಸೆ: ರಕ್ಷಿತ್ – 9743366746 ಸೈಂಟ್ ಮಿಲಾಗ್ರೇಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್- 8884459066.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.