Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾನಗರಿಯ ಕಮಲಶಿಲೆ ಯಕ್ಷೋತ್ಸವದಲ್ಲಿ ಯಶಸ್ವಿ ಪ್ರದರ್ಶನ ಕಂಡ ಶ್ರೀ ದೇವಿ ಮಹಾತ್ಮೆ ಪ್ರಸಂಗ
    ಊರ್ಮನೆ ಸಮಾಚಾರ

    ಮಹಾನಗರಿಯ ಕಮಲಶಿಲೆ ಯಕ್ಷೋತ್ಸವದಲ್ಲಿ ಯಶಸ್ವಿ ಪ್ರದರ್ಶನ ಕಂಡ ಶ್ರೀ ದೇವಿ ಮಹಾತ್ಮೆ ಪ್ರಸಂಗ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಭಕ್ತಾದಿಗಳೆಲ್ಲಾ ಸೇರಿ ಮಹಾನಗರಿ ಬೆಂಗಳೂರಿನಲ್ಲಿ ಸಂಯೋಜಿಸಿದ ನಾಲ್ಕನೇ ವರ್ಷದ ಯಶಸ್ವಿ ಯಕ್ಷಗಾನ ಬಯಲಾಟ ಶನಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ  ಯಶಸ್ವಿ ಪ್ರದರ್ಶನ ಕಂಡಿತು.

    Click Here

    Call us

    Click Here

    ಕಮಲಶಿಲೆ ಯಕ್ಷಗಾನ ಮೇಳದ ಸಾಂಪ್ರದಾಯಿಕ ರಂಗಸ್ಥಳ ಮತ್ತು ಪುಷ್ಪಾಲಂಕೃತ ಬೆಳ್ಳಿ ತೊಟ್ಟಿಲ ಸೊಬಗಿನಲ್ಲಿ ಕಮಲಶಿಲೆ ಯಕ್ಷೋತ್ಸವ 2024 ಮೇಳೈಸಿತು. ಹಿರಿಯ ಭಾಗವತ ಕಿಗ್ಗ ಹಿರಣ್ಣಯ್ಯ ಆಚಾರ್ ಮತ್ತು ಯುವ ಭಾಗವತ ಗಣೇಶ್ ಶೆಟ್ಟಿ ಬೆಪ್ಡಿ ಹಾಗೂ ಗಣೇಶ್ ಬಿಲ್ಯಾಡಿ ಯವರ ‘ಹಳಬೇರು-ಹೊಸ ಚಿಗುರು’  ಸಮಾಗಮಕ್ಕೆ ಮೆರುಗುತಂದ ಚಂಡೆ-ಮದ್ದಳೆ ಮತ್ತು ಕಾಡು ದೇವಡಿಗರ ಅದ್ಭುತ ನಾದಸ್ವರದ ಜೇಂಕಾರ. ಮಧು-ಕೈಟಭ, ಚಂಡ-ಮುಂಡ, ಶುಂಭ ಮತ್ತು ಕಲಿ ರಕ್ತಬೀಜರ ಸಾಂಪ್ರದಾಯಕ ಬಡಗು ತಿಟ್ಟಿನ ವೇಷ – ಕುಣಿತ ಮಹಾನಗರಿ ಪ್ರೇಕ್ಷಕರ ಮನಸೋರೆಗೊಳಿಸಿದೆ.

    ಉಪ್ಪುಂದ ನಾಗೇಂದ್ರರ ವಿದ್ಯುನ್ಮಾಲಿ,  ಮಹಿಷಾಸುರ,  ಶ್ರೀದೇವಿ ಮತ್ತು 65 ಹರೆಯದ ಕೊಚ್ಚಾಡಿ ರಾಮ ದೇವಾಡಿಗರ ರಕ್ತೇಶ್ವರಿ ಪಾತ್ರಗಳ ವೇಷಾಲಂಕಾರ ಮತ್ತು ಆಂಗೀಕ ಅಭಿನಯ ಯಶಸ್ವಿ ಪ್ರದರ್ಶನದ ಕೇಂದ್ರ ಬಿಂದು. ಪ್ರತಿಯೊಬ್ಬ ವೇಷದಾರಿಯ ರಂಗ ಚಟುವಟಿಕೆ, ವೇಷ ಭೂಷಣಗಳು, ಕಲಾ ನೈಪುಣ್ಯತೆ, ಕಲಾವಿದರ ತಾರಾ ಮೌಲ್ಯ ಮತ್ತು ಮನೋಜ್ಞ ಅಭಿನಯ, ಸಂಪೂರ್ಣ ಬಡಗುತ್ತಿಟ್ಟಿನ  ಶೈಲಿಯಲ್ಲಿನ ದೇವಿ ಮಹಾತ್ಮೆ ಪ್ರಸಂಗಕ್ಕೆ ಮನಸೋತ ಮಹಾನಗರಿಯ ಪ್ರೇಕ್ಷಕರು ಮನಸೋತರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    ten + six =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.