Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪದ್ಮಶ್ರೀ ಡಾ. ವಿಜಯ ಸಂಕೇಶ್ವರರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಪದ್ಮಶ್ರೀ ಡಾ. ವಿಜಯ ಸಂಕೇಶ್ವರರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‍ ಕಾಂ ಸುದ್ದಿ.
    ಕೋಟ:
    ಎಲ್ಲವೂ ಇಂದು ಡಿಜಿಟಲ್ ಆದ ಕಾರಣ ಪುಸ್ತಕ ಓದುಗರ ಸಂಖ್ಯೆ ವಿರಳವಾಗಿದೆ. ಇದು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ವಿಜಯ ಸಂಕೇಶ್ವರ ಹೇಳಿದರು.

    Click Here

    Call us

    Click Here

    ಕೋಟದ ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2024ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮದಲ್ಲಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಇಂದಿನ ಯುವ ಜನಾಂಗಕ್ಕೆ ನೆನಪಿನ ಶಕ್ತಿ ಕಡಿಮೆಗೊಂಡಿದೆ. ಹಿಂದೆ ಓದಿದ್ದು ಇನ್ನು ನೆನಪಿಸಿದಲ್ಲಿ ನೆನಪಿರಲ್ಲ. ಆದರೆ ಹಿಂದಿನವರು ಯಾವಾಗಲೂ ತಮ್ಮ ಹಳೆಯ ಓದಿದ ಸಂಗತಿಗಳನ್ನು ನೆನಪಿಸಿಕೊಳ್ಳುವ ಶಕ್ತಿಯನ್ನು ಹೊಂದಿದ್ದಾರೆ. ಡಿಜಿಟಲ್‌ನಿಂದ ಮೆದುಳಿನ ಕಂಟ್ರೋಲ್‌ನ್ನು ಕಳೆದು ಕೊಂಡಿದ್ದಾರೆ ಎಂದರು.

    ದೇಶದ 23 ರಾಜ್ಯಗಳಲ್ಲಿ ಗುಟ್ಕಾ ತಂಬಾಕು ನಿಷೇಧ ಮಾಡಿದ್ದರೂ ಕರ್ನಾಟಕದಲ್ಲಿ ಮಾತ್ರ ನಿಷೇಧ ಮಾಡದಿರುವುದು ದುರದೃಷ್ಟಕರ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಯುವ ಜನತೆ ನಿಷೇಧದ ಬಗ್ಗೆ ಅಭಿಯಾನ ಪ್ರಾರಂಭಿಸಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ನಮ್ಮಯುವ ಜಾನಂಗದಲ್ಲಿ ಸಾಮರ್ಥ್ಯವಿದೆ. ಅದನ್ನು ಗುರುತಿಸಿಕೊಳ್ಳಬೇಕು. ನಾಳೆಯ ಚಿಂತನೆ, ಯೋಜನೆ ಬಂದಲ್ಲಿ ಮಾತ್ರ ಯಶಸ್ಸು ಕಾಣಬಹುದು ಈ ಉಡುಪಿಯ ಕೃಷ್ಣನ ನಾಡಿನಲ್ಲಿ ಪಂಚವರ್ಣದ ಪ್ರಶಸ್ತಿ ಸ್ವೀಕರಿಸುವುದೇ ನನ್ನ ಭಾಗ್ಯವಾಗಿದೆ ಎಂದರು.

    ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ದೊಡ್ಡಣ್ಣ ಮಾತನಾಡಿ, ಜಗತ್ತಿನಲ್ಲಿಯೇ ಕನ್ನಡ ಭಾಷೆಗೆ ಶ್ರೇಷ್ಠ ಸ್ಥಾನವಿದೆ. ರನ್ನ, ಪಂಪ, ನೃಪತುಂಗ ರಂತಹ ಅನೇಕ ಕವಿಮಹಾತ್ರಯರು ಕನ್ನಡವನ್ನು ಉಳಿಸಿ ಬೆಳೆಸಿದ್ದಾರೆ. 8 ಜ್ಜಾನ ಪೀಠ ಪುರಸ್ಕಾರವೂ ಕನ್ನಡ ಸಾಹಿತಿಗಳಿಗೆ ದೊರಕಿರುವುದು ಕನ್ನಡ ಭಾಷೆಯ ಮಹಿಮೆಯನ್ನು ಸಾರುತ್ತದೆ. ಪಂಚವರ್ಣ ಸಂಸ್ಥೆಯು ತಾಯಿ ಭಾಷೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜತೆಗೆ ಸಮಾಜಮುಖಿ ಕಾರ್ಯವೇ ರಾಜ್ಯ ಹಾಗೂ ದೇಶಕ್ಕೆ ಮಾದರಿಯಾಗಿದೆ, ಎಂದು ಹಿರಿಯ ನಟ ದೊಡ್ಡಣ್ಣ ಹೇಳಿದರು.

    ಇದೇ ವೇಳೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ವಿಶ್ವದ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರಿಗೆ ಹಿರಿಯ ನಟ ಎಸ್. ದೊಡ್ಡಣ್ಣ ಪ್ರದಾನಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಕಳದ ಸ್ವಚ್ಛ ಬ್ರಿಗೇಡ್ ಅವರಿಗೆ ವಿಶೇಷ ಪುರಸ್ಕಾರ, ವಿಶೇಷ ಅಭಿನಂದನೆಯನ್ನು ಯಕ್ಷಕಲಾ ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥ ಕೃಷ್ಣಮೂರ್ತಿ ತುಂಗ ಸ್ವೀಕರಿಸಿದರು.

    ಪ್ರತಿಭಾ ಪುರಸ್ಕಾರದ ಭಾಗವಾಗಿ ಬಹುಮುಖ ಪ್ರತಿಭೆಗಳಾದ ಸುಶ್ಮಿತಾ ಕೃಷ್ಣಮೂರ್ತಿ ಸಾಲಿಗ್ರಾಮ, ಪ್ರಜ್ಞಾ, ಗೀತಾ ಪೂಜಾರಿ ಹಂದಟ್ಟು ಅವರುಗಳಿಗೆ ನೀಡಲಾಯಿತು.

    ಉಡುಪಿಯ ಹೊಸಬದುಕು ಆಶ್ರಮಕ್ಕೆ ದಿನಸಿ ಪರಿಕರ, ಅಶಕ್ತ ಅನಾರೋಗ್ಯ ಪೀಡಿತರಿಗೆ, ವಿಶೇಷ ಚೇತನರಿಗೆ ಸಂಸ್ಥೆ ಮಾಜಿ ಅಧ್ಯಕ್ಷ ದಿ. ಉದಯ ಪೂಜಾರಿ ಸ್ಮರಣಾರ್ಥ ಸಹಾಯಹಸ್ತ ನೀಡಲಾಯಿತು. ಸ್ಥಳೀಯ ಕನ್ನಡ ಮಾಧ್ಯಮ ಶಾಲೆಗಳಿಗೆ ದತ್ತಿನಿಧಿ, ಅಂಗನವಾಡಿ ಶಾಲೆಗಳಿಗೆ ವಿವಿಧ ಪರಿಕರ ಹಸ್ತಾಂತರಿಸಿದರು.

    ಕಾರ್ಯಕ್ರಮವನ್ನು ಸಮಾಜಸೇವಕ ಆನಂದ್ ಸಿ. ಕುಂದರ್ ಉದ್ಘಾಟಿಸಿ ಶುಭಹಾರೈಸಿದರು.

    ಸಮಾಜಸೇವಕ ಮುಂಬೈ ಒಎನ್‌ಜಿಸಿ ನಿವೃತ್ತ ಮಾನ್ಯೇಜರ್ ಬನ್ನಾಡಿ ನಾರಾಯಣ ಆಚಾರ್ ಶುಭಾಶಂಸನೆಗೈದರು. ಪಂಚವರ್ಣದ ಅಧ್ಯಕ್ಷ ಅಜಿತ್ ಅಚಾರ್  ಅಧ್ಯಕ್ಷತೆ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸುರೇಶ್ ಪ್ರಭು, ಮುಂಬೈ ಸಮಾಜಸೇವಕ ಉದ್ಯಮಿ ಬಡಾಮನೆ ರತ್ನಾಕರ್ ಶೆಟ್ಟಿ, ರಾಜ್ಯ ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಡಾ. ಬಿ ರಾಘವೇಂದ್ರ ಶೆಟ್ಟಿ, ಯಡಾಡಿ ಮತ್ಯಾಡಿಯ ಸುಜ್ಞಾನ ಏಜುಕೇಶನ್ ಟ್ರಸ್ಟ್ ಮುಖ್ಯಸ್ಥ ರಮೇಶ್ ಶೆಟ್ಟಿ, ಸೃಷ್ಠಿ ಇಂಜಿನಿಯರ್ ಮಣಿಪಾಲ ಇದರ ಇಂಜಿನಿಯರ್ ಜಯರಾಜ್ ವಿ. ಶೆಟ್ಟಿ, ಬೆಂಗಳೂರು ಉದ್ಯಮಿ ಕರುಣಾಕರ ಖಲಾಸೆ, ಸಾಂಸ್ಕ್ರತಿಕ ಚಿಂತಕ ಋಷಿರಾಜ್ ಸಾಸ್ತಾನ, ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಪಂಚವರ್ಣ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್ ,ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಗೌರವಾಧ್ಯಕ್ಷೆ ಕುಸುಮ ದೇವಾಡಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ  ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

    ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ಥಳೀಯ ಕೋಟತಟ್ಟು, ಮಣೂರು, ಕಾಸನಗುಂದು ಅಂಗನವಾಡಿ ಪುಟಾಣಿಗಳಿಂದ ನೃತ್ಯ ಸಿಂಚನ, ಪಂಚವರ್ಣ ಮಹಿಳಾ ಮಂಡಲ ಮಹಿಳೆಯರಿಂದ ಹಾಗೂ ಜಿಲ್ಲೆಯ ಪ್ರಸಿದ್ಧ ನೃತ್ಯ ತಂಡ  ಕುಂಭಾಶಿಯ ಮಯೂರಿ ನೃತ್ಯ ತಂಡದಿಂದ ಸಾಂಸ್ಕೃತಿಕ ಕಲರವ, ಪಿಂಗಾರ್ ಕಲಾವಿದರ್ ಬಿದ್ರೆ ಅವರಿಂದ ಕದಂಬ ನಾಟಕ ಪ್ರದರ್ಶನ ನಡೆಯಿತು.

    ಕೋಟದ ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ವಿಶ್ವದ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರಿಗೆ ಹಿರಿಯ ನಟ ಎಸ್. ದೊಡ್ಡಣ್ಣ ಪ್ರದಾನಿಸಿದರು. ಸಮಾಜಸೇವಕ ಆನಂದ್ ಸಿ ಕುಂದರ್, ಸಮಾಜಸೇವಕ ಮುಂಬೈ ಒಎನ್‌ಜಿಸಿ ನಿವೃತ್ತ ಮಾನ್ಯೇಜರ್ ಬನ್ನಾಡಿ ನಾರಾಯಣ ಆಚಾರ್, ಪಂಚವರ್ಣದ ಅಧ್ಯಕ್ಷ ಅಜಿತ್ ಅಚಾರ್ ಮತ್ತಿತರರು ಇದ್ದರು.

    ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರೆ, ಶಿಕ್ಷಕರಾದ ಸತೀಶ್ಚಂದ್ರ ಶೆಟ್ಟಿ, ಸಂತೋಷ್ ಕುಮಾರ್ ಕೋಟ ನಿರೂಪಿಸಿದರು. ಪಂಚವರ್ಣದ ಕಾರ್ಯದರ್ಶಿ ಸುಧೀಂದ್ರ ಜೋಗಿ ವಂದಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸಹರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eighteen − 16 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.