Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಕೇಂದ್ರ, ರಾಜ್ಯ ಸರಕಾರದ ನೀತಿ ವಿರುದ್ಧ ಬೀಡಿ ಕಾರ್ಮಿಕರ ಪ್ರತಿಭಟನೆ
    ಕುಂದಾಪ್ರದ್ ಸುದ್ಧಿ

    ಕುಂದಾಪುರ: ಕೇಂದ್ರ, ರಾಜ್ಯ ಸರಕಾರದ ನೀತಿ ವಿರುದ್ಧ ಬೀಡಿ ಕಾರ್ಮಿಕರ ಪ್ರತಿಭಟನೆ

    Updated:22/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಬೀಡಿ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಕಾರ್ಮಿಕರ ಬದುಕು ಕಸಿಯುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಬೀಡಿ ಕಾರ್ಮಿಕರ ನಿಯೋಜಿತ ಹಕ್ಕೊತ್ತಾಯಗಳ ಜೊತೆಗೆ ಕುಂದಾಪುರ ತಾಲೂಕಿನ ಬೀಡಿ ಕಾರ್ಮಿಕರು ಕುಂದಾಪುರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ಬೀಡಿ ಉದ್ಯಮ ಪಾರಂಪರಿಕ ಕೈಗಾರಿಕೆಯಾಗಿದ್ದು, ರಾಜ್ಯದಲ್ಲಿ ಬೀಡಿ ಕಾರ್ಮಿಕರು ತಂಬಾಕು ಬೆಳೆಗಾರರು, ತಂಬಾಕು ಸಂಸ್ಥಾಪಕ, ಬೀಡಿ ಲೇಬರ್ ಹೀಗೇ ಲೆಕ್ಕ ಹಾಕಿದರೆ ಸರಿ ಸುಮಾರು 12ರಂದ 13 ಲಕ್ಷ ಜನರಿಗೆ ಉದ್ಯೋಗದ ಮೂಲಕ ಮೂವತ್ತು ಲಕ್ಷ ಜನರ ಊಟದ ದಾರಿಯಾಗಿದೆ. ಕಾರ್ಮಿಕ ಆಧಾರಿತ ಬೀಡಿ ಕೈಗಾರಿಕೆಯಲ್ಲಿ ಬೀಡಿ ಸುತ್ತುವ ಕಾರ್ಮಿಕರು ಸುಮಾರು 10 ಲಕ್ಷ ಜನರಿದ್ದು, ಶೇ. 94ರಷ್ಟು ಮಹಿಳೆಯರಿದ್ದಾರೆ. ಸಂಸಾರದ ನಿರ್ವಹಣೆಯ ಹೊಣೆ ಹೊತ್ತ ಮಕ್ಕಳ ಶಿಕ್ಷಣ, ಆರೋಗ್ಯ, ಆಹಾರಕ್ಕಾಗಿ ಬೀಡಿ ಕಟ್ಟುವುದರಿಂದ ಬರುವ ಆದಾಯವನ್ನೇ ಅವಲಂಭಿಸಿದ್ದಾರೆ. ಈ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಕೇಂದ್ರ ಸರ್ಕಾರ ಬೀಡಿ ಕಾರ್ಮಿಕರ ಬದುಕು ಕಸಿಯಹೊರಟಿರುವುದು ಖಂಡನೀಯ ಎಂದು ಸಿಐಟಿಯು ಮುಖಂಡ ವೆಂಕಟೇಶ್ ಕೋಣಿ ಪ್ರತಿಭಟನೆ ಸಂದರ್ಭ ಆರೋಪಿಸಿದರು. (ಕುಂದಾಪ್ರ ಡಾಟ್ ಕಾಂ)

    ಕೋಪ್ಟಾ 2015ನ್ನು ಕುರುಡಾಗಿ ಜ್ಯಾರಿಗೆ ತರಬಾರದು. ಪುನರ್ ವಸತಿ, ಪರ್ಯಾಯ ವ್ಯವಸ್ಥೆ ರೂಪಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯ ಬೀಡಿ ಕಾರ್ಮಿಕರ ನಿಯೋಗವನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಕೊಂಡೊಯ್ಯಬೇಕು, ರಾಜ್ಯ ಸರ್ಕಾರ ಬೀಡಿ ಕಾರ್ಮಿಕರ ಸಮಸ್ಯೆ, ಪರಿಹಾರ, ಶಾಸನಾತ್ಮಕ ಸೌಲಭ್ಯ ರೂಪಿಸಲು ರಾಜ್ಯ ಮಟ್ಟದ ಸಲಹಾ ಸಮಿತಿ ರಚಿಸಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ತ್ರಿಪಕ್ಷೀಯ ಸಮಿತಿಗಳನ್ನು ರಚಿಸಬೇಕು, ಪಿಎಫ್ ರಹಿತ ಕಾರ್ಮಿಕರಿಗೆ ಪಶ್ಚಿಮ ಬಂಗಾಳ, ಕೇರಳ ರಾಜ್ಯಗಳ ಮಾದರಿಯಲ್ಲಿ ಮಾಸಿಕ ಕನಿಷ್ಟ 1000 ಪಿಂಚಣಿ ನೀಡುವ ಯೋಜನೆ ರೂಪಿಸಬೇಕು, ರಾಜ್ಯ ಸರ್ಕಾರ 2015-16ನೇ ಸಾಲಿನ ಬೀಡಿ ಕಾರ್ಮಿಕರ ತುಟ್ಟಿ ಭತ್ಯೆ ನೀಡದಂತೆ ಮಾಡಿದ ಆದೇಶ ಹಿಂಪಡೆಯಬೇಕು. ಬೀಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ನಿಧಿ ನೀಡುವ ವಿದ್ಯಾರ್ಥಿ ವೇತನ ಯೋಜನೆ ಸಮರ್ಪಕ ಜ್ಯಾರಿಗೆ ಹಾಗೂ ಚಿಕಿತ್ಸೆ ವೆಚ್ಚ ಮರುಪಾವತಿ ಸಂಬಂಧಿಸಿ ಅರ್ಜಿಸಲ್ಲಿಕೆಯ ಕ್ರಮವನ್ನು ಸರಳೀಕರಣಗೊಳಿಸಬೇಕು ಎನ್ನುವ ಮನವಿಯನ್ನು ಪ್ರತಿಭಟನಾಕಾರರು ಇದೇ ಸಂದರ್ಭ ಇಲಾಖೆ ಹಾಗೂ ಸರ್ಕಾರಕ್ಕೆ ಸಲ್ಲಿಸಿದರು.

    ಈ ಸಂದರ್ಭ ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷ ಮಹಾಬಲ ವಡೇರ ಹೋಬಳಿ, ಪ್ರಧಾನ ಕಾರ್ಯದರ್ಶಿ ಬಲ್ಕೀಸ್, ಖಜಾಂಚಿ ಗಿರಿಜಾ, ಕಾರ್ಮಿಕ ಸಂಘಟನೆಯ ಮುಖಂಡ ಸತೀಶ್ ತೆಕ್ಕಟ್ಟೆ ಸೇರಿದಂತೆ ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಗೆ ಮುನ್ನ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯ ವರೆಗೆ ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿಗೆ ಕಾಲ್ನಡಿಗೆಯ ಪ್ರತಿಭಟನೆಯಲ್ಲಿ ಸಾಗಿ ಬಂದರು.

    news CITU1 news CITU2 news CITU3

    Click here

    Click here

    Click here

    Call us

    Call us

    Like this:

    Like Loading...

    Related

    CITU kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d