Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾಲತಿ ಶೆಟ್ಟಿ ನಾಪತ್ತೆ ಪ್ರಕರಣ: ಪುತ್ರನಿಂದ ಹೇಬಿಯಸ್ ಕಾರ್ಪಸ್?
    ಊರ್ಮನೆ ಸಮಾಚಾರ

    ಮಾಲತಿ ಶೆಟ್ಟಿ ನಾಪತ್ತೆ ಪ್ರಕರಣ: ಪುತ್ರನಿಂದ ಹೇಬಿಯಸ್ ಕಾರ್ಪಸ್?

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕಳೆದ ಸರಿ ಸುಮಾರು ಐದು ತಿಂಗಳ ಹಿಂದೆ ಮನೆಯಿಂದ ನಿಗೂಢವಾಗಿ ನಾಪತ್ತೆಯಾದ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಮಾಲತಿ ಬಿ. ಶೆಟ್ಟಿ (65) ಅವರ ಪತ್ತೆಗೆ ಸಂಬಂಧಿಸಿದಂತೆ ಸಾಕಷ್ಟು ಹುಡುಕಾಟದ ನಂತರವೂ ಯಾವುದೇ ಪ್ರಯೋಜನ ಇಲ್ಲದಿರುವುದರಿಂದ ಅವರ ಪುತ್ರ ಅಮೇರಿಕಾದ ಕಂಪೆನಿಯೊಂದರಲ್ಲಿ ಸಿ.ಇ.ಓ. ಆಗಿರುವ ಸತೀಶ್ ಶೆಟ್ಟಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸುವ ಮೂಲಕ ತಾಯಿಯನ್ನು ಹುಡುಕಿಕೊಡುವಂತೆ ತಮ್ಮ ಬಾವ ರಾಮಮನೋಹರ ಶೆಟ್ಟಿ ಮೂಲಕವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆನ್ನಲಾಗಿದೆ.

    Click Here

    Call us

    Click Here

    ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ತನ್ನ ಮನೆಯಲ್ಲಿ ನೆಲೆಸಿದ್ದ ಮಾಲತಿ ಬಿ.ಶೆಟ್ಟಿ ಅವರು 2015ರ ಜೂನ್ 24 ರಂದು ಮಧ್ಯಾಹ್ನ ಊಟದ ಬಳಿಕ ಮನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ಒಂದೆರಡು ದಿನ ಸುತ್ತಮುತ್ತಲು ಹುಡುಕಾಟ ನಡೆಸಿದ ಕುಟುಂಬಿಕರು ಕೊನೆಗೆ ಜೂನ್ 26ರಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತಾಯಿ ನಾಪತ್ತೆಯಾಗುವ ಒಂದೆರಡು ದಿನಗಳ ಹಿಂದಷ್ಟೇ ಅಮೇರಿಕಾಗೆ ತೆರಳಿದ್ದ ಸತೀಶ್ ಶೆಟ್ಟಿ ತಾಯಿ ನಾಪತ್ತೆಯಾದ ಸುದ್ದಿ ಕೇಳಿ ಊರಿಗೆ ಬಂದವರು ಆಕಾಶ ಭೂಮಿ ಒಂದಾಗುವಂತೆ ಹುಡುಕಾಟ ನಡೆಸಿದ್ದರು. ಪೊಲೀಸ್ ಮೇಲಧಿಕಾರಿಗಳಿಗೂ ಮನವಿ ಸಲ್ಲಿಸಿದ ಅವರು ಬ್ಲಾಗ್ ಆರಂಭಿಸಿ ಅದರಲ್ಲಿ ತಾಯಿ ಮಾಲತಿ ಶೆಟ್ಟಿ ಪೋಟೋ ಸಹಿತ ಎಲ್ಲಾ ವಿವರಗಳು, ಪೊಲೀಸರ ತನಿಖೆ, ಮಾಧ್ಯಮಗಳ ವರದಿಯನ್ನು ಅಪ್-ಲೋಡ್ ಮಾಡಿದ್ದರು. ಅಲ್ಲದೇ ಭಿತ್ತಿಪತ್ರಗಳ ಮೂಲಕ ತಾಯಿ ಮಾಲತಿ ಶೆಟ್ಟಿ ಅವರನ್ನು ಹುಡುಕಿಕೊಟ್ಟಲ್ಲಿ 1 ಲಕ್ಷ ಬಹುಮಾನವನ್ನು ನೀಡುವುದಾಗಿ ಪ್ರಕಟಿಸಿದ್ದರು

    ಇತ್ತ ಪೊಲೀಸರು ಸಹಾ ವಿವಿಧ ಗುಮಾನಿಗಳನ್ನು ಗುಡ್ಡೆ ಹಾಕಿ ಮಾಲತಿ ಶೆಟ್ಟಿ ಅವರ ಪತ್ತೆಗೆ ಇಳಿದರೂ ಪ್ರಕರಣ ಭೇದಿಸಲಾಗಿರಲಿಲ್ಲ. ಉಡುಪಿ ಎಸ್ಪಿ ಅಣ್ಣಾಮಲೈ ಅವರು ಸ್ವಯಂ ಮಾಲತಿ ಶೆಟ್ಟಿ ನಿವಾಸಕ್ಕೆ ತೆರಳಿ ತನಿಖೆಯನ್ನು ಚುರುಕುಗೊಳಿಸಲು ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ದಿವಾಕರ್ ಪಿ.ಎಂ. ಅವರಿಗೆ ಸೂಚಿಸಿದ್ದರು. ಕುಂದಾಪುರ ಎಸ್ಸೈ ನಾಸೀರ್ ಸಹಿತ ಇಡೀ ಪೊಲೀಸ್ ಗಢಣವೇ ಮಾಲತಿ ಶೆಟ್ಟಿಯವರ ಪತ್ತೆಗಿಳಿದು, ಕೆಲವು ಅನುಮಾನಾಸ್ಪದ ವ್ಯಕ್ತಿಗಳನ್ನು ಸಹಿತ. ಮಾಲತಿ ಶೆಟ್ಟಿ ಜೊತೆಗೆ ಆತ್ಮೀಯತೆ ಹೊಂದಿದ್ದ ನೆರೆಹೊರೆಯವರು, ಮನೆ ಕೆಲಸದವರು, ಊರಿನವರ ವಿಚಾರಣೆಯನ್ನು ನಡೆಸಿದಾಗಲೂ ಪರಿಣಾಮ ಮಾತ್ರ ಶೂನ್ಯವಾಗಿತ್ತು. ಇನ್ನು ಮಾಲತಿ ಶೆಟ್ಟಿಯವರು ಕೆಲವೊಮ್ಮೆ ಹೇಳದೇ ಕೇಳದೇ ಮನೆಯಿಂದ ಹೊರಹೋಗುವ ಅಭ್ಯಾಸ ಹೊಂದಿದ್ದು, ಅವರು ಹೆಚ್ಚಾಗಿ ತೆರಳುತ್ತಿದ್ದ ದೇವಸ್ಥಾನಗಳು, ಇತರ ಸ್ಥಳಗಳಿಗೆ ಹಾಗೂ ಕಟ್ಟ ಕಡೆಗೆ ಅನುಮಾನದ ನೆಲೆಯಲ್ಲಿ ಸುತ್ತಮುತ್ತಲಿನ ಕೆರೆ ಹಾಗೂ ಬಾವಿಗಳನ್ನು ಹುಡುಕಾಟ ನಡೆಸಿದರೂ ಮಾಲತಿ ಶೆಟ್ಟಿಯವರು ನಿಗೂಢವಾಗಿಯೇ ಉಳಿದಿದ್ದರು. ಇಷ್ಟು ದಿನಗಳುರುಳಿ ಹೋದರೂ ತಾಯಿಯ ಕಿಂಚಿತ್ ಸುಳಿವನ್ನು ಪಡೆಯುವಲ್ಲಿಯೂ ಸಹ ವಿಫಲರಾದ ಸತೀಶ್ ಶೆಟ್ಟಿ ಅಂತಿಮವಾಗಿ ಹೇಬಿಯಸ್ ಅರ್ಜಿಯ ಮೊರೆ ಹೋಗಿದ್ದಾರೆ.

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಚ್. ಬಿಳ್ಳಪ್ಪ ಮತ್ತು ಕೆ.ಎನ್.ಫಣೀಂದ್ರ ಅವರಿದ್ದ ವಿಭಾಗೀಯ ಪೀಠ, ಮಾಲತಿ ಶೆಟ್ಟಿ ಅವರ ಹುಡುಕಾಟಕ್ಕೆ ಸಂಬಂಧಿಸಿದ ವರದಿ ಸಲ್ಲಿಸುವಂತೆ ರಾಜ್ಯ ಗೃಹ ಇಲಾಖೆ, ಕುಂದಾಪುರ ಪೊಲೀಸ್ ಠಾಣೆ ಮತ್ತು ಪಶ್ಚಿಮ ವಿಭಾಗದ ಐಜಿಪಿ ಅಮ್ರತಪಾಲ್ ಅವರಿಗೂ ನಿರ್ದೇಶನ ನೀಡಿದೆ.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.