Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಸ್ಪೀಕರ್ ಯು. ಟಿ‌. ಖಾದರ್ ಭೇಟಿ
    ಊರ್ಮನೆ ಸಮಾಚಾರ

    ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಸ್ಪೀಕರ್ ಯು. ಟಿ‌. ಖಾದರ್ ಭೇಟಿ

    Updated:28/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಜಮ್ಮು ಕಾಶ್ಮೀರದ ಪೂಂಛನಲ್ಲಿ ಡಿ.24 ರಂದು ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಯೋಧ ಬೀಜಾಡಿ ಕೆಳಮನೆಯ ಅನೂಪ್ ಪೂಜಾರಿ ಅವರ ಮನೆಗೆ ಶುಕ್ರವಾರ ಸಂಜೆ ವಿಧಾನಸಭೆ ಸ್ವೀಕರ್ ಯು.ಟಿ. ಖಾದರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

    Click Here

    Call us

    Click Here

    ಅನೂಪ್ ಪೂಜಾರಿ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವಂತೆ ಸ್ಥಳೀಯರು ಹಾಗೂ ಕುಟುಂಬದವರು ಮನವಿ ಮಾಡಿದ್ದು, ಮುಖ್ಯಮಂತ್ರಿ ಅವರೊಂದಿಗೆ ಈ ಕುರಿತು ಮಾತನಾಡುವುದಾಗಿ ಯು.ಟಿ.ಖಾದ‌ರ್ ಹೇಳಿದರು.

    ದೇಶ ಕಾಯುವ ನಮ್ಮೂರ ಯುವಕನ ಆಕಾಲಿಕ ನಿಧನ ತೀವ್ರ ನೋವನ್ನುಂಟು ಮಾಡಿದೆ. ದುರಂತದಲ್ಲಿ ಮೃತಪಟ್ಟ ರಾಜ್ಯದ ಸೈನಿಕರ ಕುಟುಂಬದವರಿಗೂನ ಸರಕಾರದಿಂದ ದೊರಕುವ ರಾಜ್ಯ ಸವಲತ್ತುಗಳನ್ನು ನೀಡುವ ಬಗ್ಗೆ ಮುಖ್ಯಮಂತ್ರಿಗಳು ಹೇಳಿದ್ದು ಇದನ್ನು ಶೀಘ್ರ ಅನೂಪ್ ಕುಟುಂಬದವರಿಗೂ ಒದಗಿಸಲು ಪ್ರಯತ್ನಿಸಲಾಗುತ್ತದೆ. ಹುತಾತ್ಮ ಯೋಧನ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಸೇರಿದಂತೆ ಯಾವುದೇ ಕಾರ್ಯಕ್ರಮ ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ. ಸರಕಾರದಿಂದ ಅಗತ್ಯ ಸಹಕಾರ ನೀಡಲು ಬದ್ದರಿದ್ದೇವೆ,’ ಎಂದರು.

    ಮಾಜಿ ಸಚಿವ ವಿನಯಕುಮಾರ ಸೊರಕೆ ಮಾತನಾಡಿ, ಅನೂಪ್ ಅವರ ಪತ್ನಿ ಮಂಜುಶ್ರೀ ಪದವೀಧರೆಯಾಗಿದ್ದು, ಸರಕಾರಿ ಉದ್ಯೋಗದ ಆಕಾಂಕ್ಷೆ ವ್ಯಕ್ತಪಡಿಸಿ ದ್ದಾರೆ. ಸ್ವೀಕ‌ರ್ ನೇತೃತ್ವದಲ್ಲಿ ನಾವೆಲ್ಲ ಒಟ್ಟಾಗಿ ಈ ಬಗ್ಗೆ ಪ್ರಯತ್ನಿಸುತ್ತೇವೆ. ಹುತಾತ್ಮರಾ ಗಿರುವ ಅವರ ಜೀವವನ್ನು ತರಲು ಖಂಡಿತಾ ಸಾಧ್ಯವಿಲ್ಲ ಆದರೆ ಅವರ ಕುಟುಂಬ ನೆಮ್ಮದಿಯಿಂದ ಜೀವನ ಸಾಗಿಸಲು ಅಗತ್ಯ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುವುದಾಗಿ ತಿಳಿಸಿದರು.

    ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಹುತಾತ್ಮ ಯೋಧ ಅನೂಪ್ ಪೂಜಾರಿ ಅವರ ಪತ್ನಿ ಹಾಗೂ ಕುಟುಂಬಿಕರನ್ನು ಭೇಟಿ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಅನೂಪ್ ಅವರ ನಿಧನ ಕರಾವಳಿಯ ಜನರಿಗೆ ಅತೀವ ದುಃಖ ತಂದಿದೆ. ಸೈನ್ಯಕ್ಕೆ ಸೇರುವ ಯುವಕರಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಅಕಾಡೆಮಿ ಹುಟ್ಟು ಹಾಕಬೇಕು ಎನ್ನುವ ಕನಸು ಅನೂಪ್ ಪೂಜಾರಿ ಅವರಿಗಿತ್ತು ಎನ್ನುವುದನ್ನು ಸ್ಥಳೀಯರು ತಿಳಿಸಿದ್ದಾರೆ. ಅವರ ಕನಸು ನನಸು ಮಾಡಲು ಯಾವುದೇ ಸಲಹೆ ಹಾಗೂ ಸಹಕಾರಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಪ್ರಯತ್ನಿಸುವುದಾಗಿ ತಿಳಿಸಿದರು. ಈ ಸಂದರ್ಭ ಸ್ಥಳದಲ್ಲಿಯೇ 1 ಲಕ್ಷ ರೂ. ಚೆಕ್ ನೀಡಿದ ಶಾಸಕ ಯಶಪಾಲ್ ಸುವರ್ಣ ಅವರು, ಅನೂಪ್ ಅವರ ಪುತ್ರಿ ಇಶಾನಿ ಅವರ ಹೆಸರಿನಲ್ಲಿ ನಿರಖು ಠೇವಣಿ ಇಡುವಂತೆ ಕುಟುಂಬಿಕರಿಗೆ ಹೇಳಿದರು.

    Click here

    Click here

    Click here

    Call us

    Call us

    ಸ್ಪೀಕರ್ ಭೇಟಿ ವೇಳೆ ವೇಳೆ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ. ಹಿರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ್ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಪ್ರಕಾಶ್ ಪೂಜಾರಿ ಬೀಜಾಡಿ, ఆవిನಾಶ್ ಉಳ್ಳೂರು, ಶೇಖರ ಚಾತ್ರಬೆಟ್ಟು, ಸದಾನಂದ ಶೆಟ್ಟಿ ಕೆದೂರು, ಹರಿಪ್ರಸಾದ್ ಶೆಟ್ಟಿ ಕಾನಕ್ಕಿ, ಸುರೇಂದ್ರ ಶೆಟ್ಟಿ ಸಹನಾ, ಯಾಸಿನ್ ಹೆಮ್ಮಾಡಿ, ಸುಮತಿ ನಾಗರಾಜ್, ಸುರೇಶ್ ಚಾತ್ರಬೆಟ್ಟು, ಅನಿಲ್ ಚಾತ್ರಬೆಟ್ಟು, ಜಸಿಂತಾ ಡಿಮೆಲ್ಲೋ ಇದ್ದರು

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.