Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಸ್ತಾನ ಟೋಲ್‌ನಲ್ಲಿ ಸ್ಥಳೀಯರಿಗೆ ಸುಂಕ ವಿನಾಯಿತಿ ನೀಡಿ: ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
    ಉಡುಪಿ ಜಿಲ್ಲೆ

    ಸಾಸ್ತಾನ ಟೋಲ್‌ನಲ್ಲಿ ಸ್ಥಳೀಯರಿಗೆ ಸುಂಕ ವಿನಾಯಿತಿ ನೀಡಿ: ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ,ಡಿ.30: 
    ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಜನರ ವಾಹನಗಳಿಗೆ ಈ ಹಿಂದೆ ನೀಡುತ್ತಿದ್ದ ಹಾಗೆ ರಿಯಾಯಿತಿಯಲ್ಲಿ ಕಲ್ಪಿಸಬೇಕೆಂದು  ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ  ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗೆದಾರರಿಗೆ ತಿಳಿಸಿದರು.

    Click Here

    Call us

    Click Here

    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ  ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿಗೆ ಸಂಬಂಧಿಸಿದದಂತೆ ಟೋಲ್ ಗಳಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯಿತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಸಾಸ್ತಾನ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಲಿಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇದ್ದು, ಸ್ಥಳೀಯ ಜನರ ಸುಂಕ ವಸೂಲಾತಿ ಕೇಂದ್ರದ ಸುತ್ತಮುತ್ತ ವಾಸವಿದ್ದು, ದೈನಂದಿನ ಪ್ರತಿಯೊಂದು ಕಾರ್ಯಕ್ಕೂ ಟೋಲ್ ಅನ್ನು ದಾಟುವ ಪ್ರಸಂಗ ಒದಗಿ ಬರಲಿದ್ದು, ಪ್ರತಿ ಬಾರಿಯೂ ಶುಲ್ಕ ಪಾವತಿ ಮಾಡಲು ಕಷ್ಟ ಸಾಧ್ಯವಾಗಿರುತ್ತದೆ.

    ಕೋಟ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸ್ಥಳೀಯ ಖಾಸಗಿ ಹಾಗೂ ಸಣ್ಣ ವಾಣಿಜ್ಯ ವಾಹನಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಬೇಕೆಂದು ತಿಳಿಸಿದರು.

    ಸಂತೆಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ರಸ್ತೆ ಕಾಮಗಾರಿಯನ್ನು ಜನವರಿ 7 ಒಳಗಾಗಿ ಸಂಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

    Click here

    Click here

    Click here

    Click Here

    Call us

    Call us

    ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವುದು ಕೇಳಿಬರುತ್ತಿವೆ. ಇವುಗಳಿಗೆ ಕಾರಣ ರಸ್ತೆಯಲ್ಲಿನ ಅವೈಜ್ಞಾನಿಕ ಕೆಲಸ ಕಾರ್ಯಗಳು ಸೇರಿದಂತೆ ಮತ್ತಿತರ ಸಮಸ್ಯೆಗಳಿಂದ ಉಂಟಾಗುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಅಗತ್ಯವಿರುವ ಕಡೆ ಸರ್ವೀಸ್ ರಸ್ತೆ, ದಾರಿದೀಪ ಅಳವಡಿಕೆ, ರಸ್ತೆಯಲ್ಲಿ ಹೊಂಡ ದುರಸ್ಥಿ, ಜಂಕ್ಷನ್‌ಗಳಲ್ಲಿ ಸರಿಯಾದ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ಅವರು ಮಾತನಾಡಿ ಕೋಟ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 1552ಸ್ಥಳೀಯ ವಾಹನಗಳು 53130ಕ್ಕೂ ಹೆಚ್ಚು ಬಾರಿ ಸಾಸ್ತಾನ ಟೋಲ್ ನಲ್ಲಿ ಸಂಚರಿಸುತ್ತವೆ ಇವೆಲ್ಲವಕ್ಕೂ ಟೋಲ್ ಸುಂಕ ವಿನಾಯಿತಿ ನೀಡಬೇಕೆಂದು ಸ್ಥಳೀಯ ಜನರ ಬೇಡಿಕೆ ಇದೆ. ಈ ವ್ಯಾಪ್ತಿಯ ಸ್ಥಳೀಯ ಸ್ವಂತ ಖಾಸಗಿ ವಾಹನಗಳಿಗೆ ಹಾಗೂ ಸಣ್ಣ ವಾಣಿಜ್ಯ ವಾಹನಗಳಿಗೆ ವಿನಾಯಿತಿ ಕೊಡಲಾಗುವುದು ಲಾರಿ, ಬಸ್ಸು, ಟಿಪ್ಪರ್ ಸೇರಿದಂತೆ ಮತ್ತಿತರ ಭಾರಿ ವಾಹನಗಳು ರಿಯಾಯಿತಿ ಪಾಸ್ ಪಡೆದು ಸಂಚರಿಸಬಹುದಾಗಿದೆ ಎಂದರು.

    ಸಭೆಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ,   ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ತಹಶೀಲ್ದಾರರುಗಳಾದ ಪ್ರತಿಭಾ ಹಾಗೂ ಶ್ರೀಕಾಂತ್, ಗುತ್ತಿಗೆದಾರರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    fifteen + ten =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.