Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಾರಂಭ
    ಊರ್ಮನೆ ಸಮಾಚಾರ

    ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    oplus_0
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಎಲ್ಲಾ ಜನ್ಮಗಳಲ್ಲಿ ಪುಣ್ಯವನ್ನು ಮಾಡಿದಾಗ ಪಾಪದಿಂದ ಮುಕ್ತನಾಗಿ ಪರಿಶುದ್ಧನಾದಾಗ ಮನುಷ್ಯ ಜನ್ಮ ಪಡೆಯುತ್ತಾನೆ. ಮನುಷ್ಯ ಜನ್ಮ ಪಡೆದಾಗ ಮತ್ತುಳಿದ ಎಲ್ಲಾ ಜೀವಿಗಳಂತೆ ಸುಮ್ಮನೆ ಜೀವನವನ್ನು ವ್ಯರ್ಥ ಮಾಡದೆ ಆ ಮನುಷ್ಯ ಜನ್ಮ ಸಾರ್ಥಕ ಆಗಬೇಕಾದರೆ ಭಗವಂತನ ಭಜನೆ ಮಾಡಬೇಕು, ಜನಹಿತ ಕಾರ್ಯಗಳನ್ನು ಉತ್ತಮ ಕಾರ್ಯ ಮಾಡುತ್ತಿರಬೇಕು ಎಂದು ತಾಳಗುಪ್ಪ ಪ್ರಣವ ಪೀಠ ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ವಿದ್ವಾನ್ ಸಿದ್ಧವೀರ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಕುಂದಾಪುರ ತಾಲೂಕಿನ ನಾಯಕವಾಡಿ-ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಾರಂಭ ’ಸುವರ್ಣ ಸಂಗಮ’ವನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

    ಸಂಘ ಸಂಸ್ಥೆಗಳು ತನ್ನ ನಿರಂತರತೆಯನ್ನು ಕಾಪಾಡಿಕೊಂಡು ಒಂದು ಹಂತಕ್ಕೆ ಬರಬೇಕಾದರೆ ತುಂಬಾ ಪ್ರಯತ್ನ, ತಾಳ್ಮೆ ಅವಶ್ಯಕ. ಇಂತಹ ತಾಳ್ಮೆ ಪ್ರಯತ್ನದ ಪ್ರತಿಫಲವಾಗಿ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ 50ರ ಸಂಭ್ರಮವನ್ನು ಸಂತೋಷದಿಂದ ಆಚರಿಸುತ್ತಿದೆ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಾಂಸ್ಕೃತಿಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಅವರು ಪ್ರಶಂಶಿಸಿದರು.

    ಮುಖ್ಯ ಅತಿಥಿಯಾಗಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಾತಿ, ಧರ್ಮಗಿಂತ ನನ್ನ ದೇಶ ಮುಖ್ಯ ಎನ್ನುವ ಹೃದಯ ತುಂಬಿರುವ ಸಮಾಜ ನಿರ್ಮಾಣವಾದರೆ ಆ ಸಮಾಜದಲ್ಲಿ ಜಾತಿ, ಧರ್ಮ, ವರ್ಗ, ಎಲ್ಲಕ್ಕಿಂತ ಹೆಚ್ಚಾಗಿ ಒಂದು ಕುಟುಂಬದಂತೆ ಬದುಕಲು ಸಾಧ್ಯವಿದೆ. ಎಲ್ಲಾ ಜನರು ಮುಖ್ಯವಾಹಿನಿಗೆ ಬಂದಾಗ ಮಾತ್ರ ಶಕ್ತಿಯಾಗಿ ಯುಕ್ತಿಯಾಗಿ ರೂಪುಗೊಳ್ಳಲು ಸಾಧ್ಯ. ಪ್ರತಿಭೆ ಎನ್ನುವುದು ಯಾರ ಒಬ್ಬ ವ್ಯಕ್ತಿಯ ಒಂದು ಭಾಗದ ಸ್ವತ್ತಲ್ಲ. ಸಮಾಜಕ್ಕೆ ಕೊಡುಗೆಯಾಗಿ ಬದುಕಬಲ್ಲ ಭಾವನಾತ್ಮಕ ಜೀವಗಳನ್ನು ಸೃಷ್ಟಿ ಮಾಡಿರುವ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಸಮಾಜಕ್ಕೆ ಒಂದು ಶಕ್ತಿಯಾಗಿ ಬೆಳೆಯಲಿದೆ ಎಂದು ಹಾರೈಸಿದರು.

    ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಿರಿಜಾ ರಾಮ ನಾಯ್ಕ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಶುಭ ಹಾರೈಸಿದರು. ಇದೇ ಸಂದರ್ಭ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

    Click here

    Click here

    Click here

    Call us

    Call us

    ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಮತ್ಸ್ಯೋದ್ಯಮಿ ಮಂಜುನಾಥ ಜಿ.ಟಿ., ತ್ರಾಸಿ ಗ್ರಾಪಂ ಅಧ್ಯಕ್ಷ ಮಿಥುನ್ ಎಂ.ಡಿ. ಬಿಜೂರು, ಶ್ರೀ ಸಂಗಮೇಶ್ವರ ದೇವಸ್ಥಾನದ ಅಧ್ಯಕ್ಷ ರಘುರಾಮ ಟಿ., ಮೊಕ್ತೇಸರ ಚಂದ್ರಕಾಂತ ಕೆ., ಅಂಗನವಾಡಿ ಶಿಕ್ಷಕಿ ನಿರೀಕ್ಷಾ, ಸಂಸ್ಥೆಯ ಗೌರವಾಧ್ಯಕ್ಷ ರವೀಂದ್ರ ಟಿ., ಪ್ರ.ಕಾರ್ಯದರ್ಶಿ ನಿತೇನ್ ಎನ್.ಡಿ. ಮತ್ತಿತರರು ಉಪಸ್ಥಿತರಿದ್ದರು.

    ಯುವಕ ಮಂಡಲದ ಅಧ್ಯಕ್ಷ ಶ್ರೀಧರ ಎನ್. ಸ್ವಾಗತಿಸಿದರು. ಗೌರವ ಸಲಹೆಗಾರ ರಾಜು ಎನ್.ಮಾಸ್ತರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸತ್ಯನಾ ಕೊಡೇರಿ ಸ್ಮರಣ ಸಂಚಿಕೆ ಕುರಿತು ಮಾತನಾಡಿದರು. ಆರ್.ಜೆ. ಪ್ರಸನ್ನ ಮಂಗಳೂರು ಕಾರ್ಯಕ್ರಮ ನಿರ್ವಹಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.