Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಕಲಚೇತನರು ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಉಡುಪಿ ಜಿಲ್ಲೆ

    ವಿಕಲಚೇತನರು ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.  
    ಉಡುಪಿ:
    ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಆತ್ಮಸ್ಥೈರ್ಯದಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಯ ಲಾಭ ಪಡೆಯಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಅಲಿಂಕೋ ಸಂಸ್ಥೆಯ ವತಿಯಿಂದ ಜಿಲ್ಲೆಯಲ್ಲಿ ಆಯ್ಕೆ ಮಾಡಲಾದ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಶಕ್ತಿ ತುಂಬುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುವುದರೊಂದಿಗೆ ಗುಣಮಟ್ಟದ ಸಲಕರಣೆಗಳನ್ನು ದೊರಕುವಂತೆ ಮಾಡಿದೆ. ಜಿಲ್ಲೆಯ ಪ್ರತಿಯೊಬ್ಬ ವಿಕಲಚೇತನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

    ಇಂದು ನಡೆಯಲಿರುವ ಸಲಕರಣೆ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 63 ಲಕ್ಷ ರೂ. ವೆಚ್ಚದಲ್ಲಿ 609 ಫಲಾನುಭವಿಗಳಿಗೆ 962 ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ದೇಶದಾದ್ಯಂತ ಈ ಯೋಜನೆಯಡಿ 51 ಕೋಟಿ ರೂ. ವೆಚ್ಚದಲ್ಲಿ ಸಲಕರಣೆಗಳನ್ನು ಹಂಚಲಾಗಿದೆ. ಸಲಕರಣೆಗಳ ದುರಸ್ಥಿಗೆ ಅನುಕೂಲವಾಗುವಂತೆ ಉಡುಪಿ ಜಿಲ್ಲಾ ಕೇಂದ್ರದಲ್ಲಿ ದುರಸ್ತಿ ಕೇಂದ್ರವನ್ನು ಹೊಸದಾಗಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

    ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ದೊರಬೇಕೆನ್ನುವ ಉದ್ದೇಶದಿಂದ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರನ್ನು ಮೌಲ್ಯಮಾಪನ ಮಾಡಿ, ಸಲಕರಣೆಯನ್ನು ವಿತರಿಸಿದ್ದು, ಇದರಿಂದ ಅವರುಗಳು ಘನತೆಯಿಂದ ಸ್ವತಂತ್ರವಾಗಿ ಸಮಾಜದಲ್ಲಿ ಜೀವಿಸಲು ಸಾಧ್ಯವಾಗುತ್ತದೆ. ಫಲಾನುಭವಿಗಳು ಸಲಕರಣೆಯನ್ನು ಪಡೆದು ಅದನ್ನು ಮೂಲೆಗುಂಪು ಮಾಡದೇ ಬಳಸಬೇಕು, ಸಲಕರಣೆಗಳ ಸಣ್ಣ-ಪುಟ್ಟ ದುರಸ್ಥಿಯನ್ನು ಅಲಿಂಕೋ ಸಂಸ್ಥೆಯ ವತಿಯಿಂದಲೇ ಮಾಡಲಾಗುವುದು ಎಂದ ಅವರು, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿಯೂ ಸಹ ದುರಸ್ತಿ ಕೇಂದ್ರವನ್ನು ತೆರೆಯಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

    Click here

    Click here

    Click here

    Click Here

    Call us

    Call us

    ಶಾಸಕ ಯಶ್‌ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಯನ್ನು ಆಲಿಸಿ, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಯಪ್ರವೃತ್ತವಾಗಿದೆ. ಜಿಲ್ಲೆಯಲ್ಲಿ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯವನ್ನು ತಲುಪಿಸುವ  ಕೆಲಸವನ್ನು ಅಲಿಂಕೋ ಸಂಸ್ಥೆಯು ಪರಿಣಾಮಕಾರಿಯಾಗಿ ಮಾಡಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಸೌಲಭ್ಯ ಪಡೆದ ಫಲಾನುಭವಿಗಳು ಉತ್ತಮ ಜೀವನವನ್ನು ನಡೆಸುವಂತಾಗಲಿ ಎಂದರು. 

     ಇದೇ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಶ್ರವಣ ಸಾಧನ, ವ್ಹೀಲ್ ಚೇರ್, ಸ್ಮಾರ್ಟ್ಫೋನ್, ಸೇರಿದಂತೆ ಸಾಧನ ಸಲಕರಣೆಯನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಎಸ್‌ಪಿ ಸಿದ್ದಲಿಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಸೀನಿಯರ್ ಮ್ಯಾನೆಜರ್ ಮತ್ತು ಅಲಿಂಕೋ ಸಂಸ್ಥೆಯ ಯೂನಿಕ್ ಹೆಡ್ ಎ.ವಿ ಅಶೋಕ್ ಕುಮಾರ್ ಸ್ವಾಗತಿಸಿ, ಗಣನಾಥ ಎಕ್ಕಾರು ಹಾಗೂ ದೀಪಾ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ. ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    six + 9 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.