ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಕುಂದಾಪುರದ ಓಕ್ವುಡ್ ಇಂಡಿಯನ್ ಸ್ಕೂಲ್ನ 4ನೇ ತರಗತಿಯ ವಿದ್ಯಾರ್ಥಿ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದಿದ್ದಾನೆ.
ಇತ್ತೀಚಿಗೆ ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯಮಟ್ಟದ ಐಡಿಯಲ್ ಪ್ಲೇ ಅಬಾಕಸ್ ಮೆಂಟಲ್ ಅರಿಥಮೆಟಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದನು.
ಈತನಿಗೆ ಕುಂದಾಪುರದ ಸೆಂಟರ್ ಮುಖ್ಯಸ್ಥರಾದ ಪ್ರಸನ್ನ ಕೆ. ಬಿ. ಮತ್ತು ಮಹಾಲಕ್ಷ್ಮಿ ಅವರು ತರಬೇತಿ ನೀಡಿರುತ್ತಾರೆ. ಈತ ಅರಾಟೆಯ ರೇಷ್ಮಾ ಮತ್ತು ರಾಜೇಶ್ ದಂಪತಿಯ ಪುತ್ರ.










