Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. 

    Click Here

    Call us

    Click Here

    ಶೆಪ್ಟಾಕ್ ಫುಡ್ ಮತ್ತು ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಗೋವಿಂದ ಬಾಬು ಪೂಜಾರಿ ಹಾಗೂ ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆರ್ಥೋಪೆಡಿಕ್ ಶಸ್ತ್ರ ಚಿಕಿತ್ಸಕರಾದ ಡಾ. ದಿನೇಶ್ ಕುಮಾರ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ಮಾಡಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

    ಈ ಸಂದರ್ಭದಲ್ಲಿ ಡಾ. ಗೋವಿಂದ ಬಾಬು ಪೂಜಾರಿ ಸಭೆಯನ್ನುದ್ದೇಶಿಸಿ ಮಾತನಾಡಿ, ಯಾವುದೇ ಕಾರ್ಯ ಸುಗಮವಾಗಿ ಸಾಗಬೇಕಾದರೆ ವ್ಯವಸ್ಥಿತ ಯೋಜನೆ ಅಗತ್ಯ. ಹಾಗೆಯೇ ದೇಶದ ಕಾರ್ಯ ಚಟುವಟಿಕೆಗಳು ವ್ಯವಸ್ಥಿತವಾಗಿ ಸಾಗುವಲ್ಲಿ ಸಂವಿಧಾನ ಅತ್ಯಗತ್ಯ. ವ್ಯವಸ್ಥಿತ ಸಂವಿಧಾನವನ್ನು ರೂಪಿಸುವಲ್ಲಿ ಈ ದೇಶದ ಹಲವಾರು ಮಹನೀಯರ ಕೊಡುಗೆಯಿದೆ. ಅವರೆಲ್ಲ ಕೊಡುಗೆಗಳನ್ನು ಸ್ಮರಿಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜೀವನದಲ್ಲಿ ಯಶಸ್ಸನ್ನು ಗಳಿಸುವುದರೊಂದಿಗೆ ದೇಶದ ಪ್ರಗತಿಯತ್ತಲೂ ನಾವೆಲ್ಲ ಚಿತ್ತ ಹರಿಸಬೇಕು. ದೇಶದಲ್ಲಿನ ಜನರ ಕಷ್ಟಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸವನ್ನು ಪಡೆದು, ತಂದೆ- ತಾಯಿಯ, ಕಲಿತ ಶಾಲೆಯ ಮತ್ತು ದೇಶದ ಕೀರ್ತಿಯನ್ನು ಎತ್ತರಕ್ಕೇರಿಸಲು ಶ್ರಮಿಸಬೇಕು ಎಂದು ಕರೆಕೊಟ್ಟರು.

    ಡಾ. ದಿನೇಶ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಇಂದು ನಾವೆಲ್ಲ ದೇಶಕ್ಕೆ ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಸಲ್ಲಿಸಬೇಕಾದ ದಿನ. ಈ ದಿನ ದೇಶಕ್ಕೊಂದು ನಿರ್ದಿಷ್ಟ ಕಾನೂನಿನ ಚೌಕಟ್ಟನ್ನು ಒದಗಿಸಿದ ದಿನ. ನಮ್ಮ ಸಂವಿಧಾನವು ವಿಶ್ವದ ಬೃಹತ್ ಸಂವಿಧಾನವಾಗಿದ್ದು, ಹಲವಾರು ದೇಶಗಳ ಸಂವಿಧಾನವನ್ನು ಅಭ್ಯಸಿಸಿ, ನಮ್ಮ ಸಂವಿಧಾನವನ್ನು ರಚಿಸಲಾಗಿದೆ. ನಮ್ಮ ಸಂವಿಧಾನವು ದೇಶದ ಜನತೆಗೆ ಹಲವಾರು ಹಕ್ಕುಗಳನ್ನು ನೀಡಿದ್ದು, ಆ ಸಂವಿಧಾನವನ್ನು ಕಾಪಾಡುವುದು, ಸಂವಿಧಾನದ ಧ್ಯೇಯೋದ್ದೇಶಗಳನ್ನು ಎತ್ತಿ ಹಿಡಿಯುವುದು ಭಾರತೀಯರ ಕರ್ತವ್ಯವಾಗಿರಬೇಕು. ದೇಶಕ್ಕಾಗಿ ಯಾವುದೇ ಬಗೆಯ ತ್ಯಾಗಕ್ಕೂ ನಾವು ಸಿದ್ಧರಾಗಿರಬೇಕು ಎಂದು ತಿಳಿಸಿಕೊಟ್ಟರು.

    ಇದೇ ಸಂದರ್ಭದಲ್ಲಿ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿರುವ ಡಾ. ಗೋವಿಂದ ಬಾಬು ಪೂಜಾರಿಯವರಿಗೆ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಸನ್ಮಾನ ಪತ್ರವನ್ನು ವಾಚಿಸಿದರು.

    Click here

    Click here

    Click here

    Click Here

    Call us

    Call us

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ವೀಣಾ ರಶ್ಮೀ ಎಂ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಜಾತ ಸದಾರಾಮ್, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ದೇಶಭಕ್ತಿಯನ್ನು ಮೂಡಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆಯಿತು. ಸಾನ್ವಿ ಎಸ್. ಜಿ. ಕಾರ್ಯಕ್ರಮಕ್ಕೆ ಸರ್ವರನ್ನು ಸ್ವಾಗತಿಸಿದರು. ದಿವ್ಯಾ ಎ. ಕೆ. ಕಾರ್ಯಕ್ರಮ ನಿರೂಪಿಸಿ, ತನುಶ್ರೀ ಎಸ್. ಡೆಂಗಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eleven + fourteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.