Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂವಿಧಾನ ಬದ್ಧ ಕರ್ತವ್ಯ ಹಾಗೂ ಹಕ್ಕುಗಳನ್ನು ಪಾಲಿಸುವ ಸಂಕಲ್ಪ ದಿನ: ಬಸವರಾಜ ಹೊರಟ್ಟಿ
    alvas nudisiri

    ಸಂವಿಧಾನ ಬದ್ಧ ಕರ್ತವ್ಯ ಹಾಗೂ ಹಕ್ಕುಗಳನ್ನು ಪಾಲಿಸುವ ಸಂಕಲ್ಪ ದಿನ: ಬಸವರಾಜ ಹೊರಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ವಿಶಾಲ ಬಯಲುರಂಗ ಮಂದಿರದಲ್ಲಿ ಕಂಗೊಳಿಸಿದ ದೇಶದ ಐಕ್ಯತೆಯ ಪ್ರತೀಕವಾದ  ʼಆಳ್ವಾಸ್‌ʼ ಸೇರಿದ್ದ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿ, ಸಿಬ್ಬಂದಿ, ಪೋಷಕರು, ಅತಿಥಿಗಳ ಕೈಯಲ್ಲಿ ಹಾರಾಡಿದ ರಾಷ್ಟ್ರ ಧ್ವಜ, ಆವರಣದ ಸುತ್ತಲೂ ತ್ರಿವರ್ಣ ಸ್ಥಂಭಗಳು, ದೇಶಪ್ರೇಮ ಮೂಡಿಸುವ ತ್ರಿವರ್ಣ ಚಿತ್ತಾರಗಳು, ತ್ರಿವರ್ಣದ ಪುರುಲಿಯೋ ಸಿಂಹಗಳು, ಜನ ಗಣ ಮನ, ವಂದೇ ಮಾತರಂ, ಕೋಟಿ ಕಂಠೋ ಸೇ… ರಾಷ್ಟ್ರ ಹಾಗೂ ದೇಶಭಕ್ತಿ ಗೀತೆಗಳು.

    Click Here

    Call us

    Click Here

    ಸಂವಿಧಾನ ಅನುಷ್ಠಾನದ ಭಕ್ತಿ, ಗೌರವ, ಪ್ರೀತಿಯ ದೇಶಭಕ್ತಿಯ ಕ್ಷಣಗಳು ಇಲ್ಲಿನ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ 76ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮೂಡಿಬಂತು.

    ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಕರ್ನಾಟಕ ವಿಧಾನ ಪರಿಷತ್ತಿನ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ, ’ನಾವೆಲ್ಲರೂ ಸಂವಿಧಾನ ಬದ್ಧವಾಗಿ ಕರ್ತವ್ಯ ಹಾಗೂ ಹಕ್ಕುಗಳನ್ನು ಪಾಲಿಸುವ ಸಂಕಲ್ಪವನ್ನು ಮಾಡುವ ದಿನ ಇದಾಗಿದೆ’ಎಂದರು.

    ಆಳ್ವಾಸ್ ಅಂಗಣದಲ್ಲಿ ಗಣರಾಜ್ಯೋತ್ಸವವು ಐತಿಹಾಸಿಕ ವಿರಾಟ ರಾಷ್ಟ್ರೀಯ ಹಬ್ಬವಾಗಿದೆ ಎಂದು ಅವರು ಸಂಭ್ರಮಿಸಿದರು.

    ಶಿಕ್ಷಣದ ಜೊತೆ ಸಂಸ್ಕಾರ ನೀಡುವ ಆಳ್ವಾಸ್, ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯ ತಾಣವಾಗಿದೆ’ಎಂದು ಶ್ಲಾಘಿಸಿದರು.

    Click here

    Click here

    Click here

    Call us

    Call us

    ಹುಟ್ಟಿದ ಊರು, ಪೋಷಿಸಿದ ತಂದೆ – ತಾಯಿ, ಕಲಿಸಿದ ಶಿಕ್ಷಕರು ಹಾಗೂ ಸಂಸ್ಥೆಯನ್ನು ಕಷ್ಟಕಾಲದಲ್ಲಿ ಮರೆಯಬೇಡಿ ಎಂದು ಹಿತವಚನ ಹೇಳಿದರು.

    ಡಾ. ಅಂಬೇಡ್ಕರ್ ನೇತೃತ್ವದಲ್ಲಿ ವಿಶ್ವದ ಶ್ರೇಷ್ಟವಾದ ನಮ್ಮ ಸಂವಿಧಾನ ರಚನೆಯಾಗಿ, ಜಾರಿಗೆ ಬಂದಿದೆ. ಇದು ನಮ್ಮ ದೇಶಕ್ಕೆ ಶಕ್ತಿ ತುಂಬಿದ ದಿನ ಎಂದು ಬಾಬಾಸಾಹೇಬರ ಗುಣಗಾನ ಮಾಡಿದರು.

    ಸಂವಿಧಾನವು ಪ್ರತಿಯೊಬ್ಬರಿಗೆ ಶಿಕ್ಷಣ, ಧಾರ್ಮಿಕ, ಅಭಿವ್ಯಕ್ತಿ, ಮೂಲ ಸೌಕರ್ಯಗಳನ್ನು ನೀಡಿದೆ. ಸಂವಿಧಾನವೇ ನೆಲದ ಸರ್ವೋಚ್ಛ ಕಾನೂನು. ನಾವೆಲ್ಲ ಶ್ರದ್ಧೆಯಿಂದ ಗೌರವಿಸಬೇಕು ಎಂದರು.

    ದೇಶವು ವಿಜ್ಞಾನ -ತಂತ್ರಜ್ಞಾನದಲ್ಲಿ ಮುಂದುವರಿದರೂ ನಮಗೆ ಎಲ್ಲ ಹಕ್ಕುಗಳನ್ನು ನೀಡಿದ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನ ದೇಶದ ಏಕತೆಯ ಪ್ರತೀಕ. ಅದರ ರಚನೆಯ ನೇತೃತ್ವ ವಹಿಸಿದ ಅಂಬೇಡ್ಕರ್,  ಗಾಂಧೀಜಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವೆಲ್ಲ ಕೃತಜ್ಞರಾಗಿರಬೇಕು ಎಂದು ಸ್ಮರಿಸಿದರು.

    ಹಕ್ಕು ಮತ್ತು ಕರ್ತವ್ಯ ನಿರ್ವಹಿಸುವ ಸಂಕಲ್ಪದ ಪ್ರಮುಖ ದಿನಾಚರಣೆ ಮೂಲಕ ದೇಶಭಕ್ತಿ ಜಾಗೃತವಾಗಲಿ ಎಂದು ಹಾರೈಸಿದರು.

    ಬೆಳಿಗ್ಗೆ 8.30ಕ್ಕೆ ಸರಿಯಾಗಿ ಆರಂಭವಾದ ಸಮಾರಂಭವು ಸಮಯ ಪರಿಪಾಲನೆಯನ್ನು ಸಾಕ್ಷೀಕರಿಸಿತು.  ತಿರಂಗ ಬಣ್ಣದಿಂದ 1920 ವಿದ್ಯಾರ್ಥಿಗಳು ಸುತ್ತಲೂ ಅಂಚನ್ನು ನಿರ್ಮಿಸಿದರೆ, 3188 ವಿದ್ಯಾರ್ಥಿಗಳು ತಿರಂಗದಲ್ಲಿ ಇಂಡಿಯಾ ರಚಿಸಿ ವಿವಿಧತೆಯಲ್ಲಿ ಏಕತೆಯ ಸಂದೇಶ ರವಾನಿಸಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಭಾರತ್ ನಿರ್ಮಾಣ ಸಂಸ್ಥೆಯ ಮುಸ್ತಾಫ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ ಮತ್ತು ಡಾ. ವಿನಯ್ ಅಳ್ವ, ಎನ್‌ಸಿಸಿ 19 ಕರ್ನಾಟಕ ಬೆಟಾಲಿಯನ್ ಕಮಾಂಡಿಂಗ್ ಅಧಿಕಾರಿ ಕರ್ನಲ್ ಮುಕುಂದನ್,  18 ಕರ್ನಾಟಕ ಬೆಟಾಲಿಯನ್ ಆಡಳಿತಾಧಿಕಾರಿ ಲೆ. ಕರ್ನಲ್ ರೋಹಿತ್ ರೈ, 300ಕ್ಕೂ ಅಧಿಕ ನಿವೃತ್ತ ಹಾಗೂ ಹಾಲಿ ಸೈನಿಕರು, 1395 ಕಬ್ಸ್- ಬುಲ್ ಬುಲ್,  ಸ್ಕೌಟ್ಸ್  -ಗೈಡ್ಸ್ , ರೋವರ್ಸ್- ರೇಂಜರ್ಸ್ 753 ಎನ್‌ಸಿಸಿ ಕೆಡೆಟ್‌ಗಳು ಹಾಗೂ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಇದ್ದರು.

    ರಾಹುಲ್ ಆರ್. ನೇತೃತ್ವದಲ್ಲಿ ಎನ್‌ಸಿಸಿ ಕೆಡೆಟ್ ಗಳು ಗೌರವ ರಕ್ಷೆ ಸಲ್ಲಿಸಿದರು. ವಂದೇ ಮಾತರಂ, ಜನಗಣಮನ ಹಾಗೂ ಕೋಟಿ ಕಂಟೋಸೇ ಗಾಯನ, ಬ್ಯಾಂಡ್ ನಿನಾದವು ಭಾವೈಕ್ಯತೆ ಮೂಡಿಸಿತು. ಸಿಡಿಮದ್ದಿನ ಪ್ರದರ್ಶನವು ಆಕಾಶದಲ್ಲಿ ತಿರಂಗ ಬಣ್ಣಗಳ ವಿಹಂಗಮ ನೋಟ ಮೂಡಿಸಿತು.

    ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಡೀನ್ ಕೆ.ವೇಣುಗೋಪಾಲ ಶೆಟ್ಟಿ,  ಇಂಗ್ಲಿಷ್‌ ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.