Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಯುರ್ವೇದ ವಿಜ್ಞಾನದಲ್ಲಿ ಸಂಶೋಧನೆ ಅಗತ್ಯ: ಡಾ. ಎಂ. ಮೋಹನ್ ಆಳ್ವ
    alvas nudisiri

    ಆಯುರ್ವೇದ ವಿಜ್ಞಾನದಲ್ಲಿ ಸಂಶೋಧನೆ ಅಗತ್ಯ: ಡಾ. ಎಂ. ಮೋಹನ್ ಆಳ್ವ

    Updated:28/01/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಭಾರತೀಯ  ವೈದ್ಯಕೀಯ ಪರಂಪರೆಯಲ್ಲಿ ಆಯುರ್ವೇದ ವೈದ್ಯ ಪದ್ದತಿಗೆ ಶ್ರೇಷ್ಠ ಸ್ಥಾನಮಾನವಿದೆ. ಆದರೆ ಅದನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಾಕ್ಷಾಧಾರದ ಕೊರತೆಯಿದ್ದು ಅದನ್ನು ನೀಗಿಸುವ ನಿಟ್ಟಿನಲ್ಲಿ ಆಯುರ್ವೇದ ವಿಜ್ಞಾನದಲ್ಲಿ ಇನ್ನಷ್ಟು ಸಂಶೋಧನೆಯನ್ನು ಕೈಗೊಳ್ಳಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದ್ದಾರೆ.

    Click Here

    Call us

    Click Here

    ಆಳ್ವಾಸ್‌ನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಆಯುರ್ವೇದ ಕಾಲೇಜಿನ ಆಳ್ವಾಸ್ ’ಧನ್ವಂತರಿ ಪೂಜಾ ಮಹೊತ್ಸವ, ಶಿಶ್ಯೋಪನಯನ ಸಂಸ್ಕಾರ ಹಾಗೂ ಆಳ್ವಾಸ್ ಧನ್ವಂತರಿ ಪ್ರಶಸ್ತಿ ವಿತರಣಾ  ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಯುವೇದದಲ್ಲಿ ಉಜ್ವಲ ಭವಿಷ್ಯವಿದ್ದು, ಅದನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹೆಚ್ಚು ಹೆಚ್ಚು ಸಂಶೋಧನೆಗೆ ಒತ್ತು ಕೊಡಬೇಕು. ಕಾಲೇಜಿನಲ್ಲಿ ಕಲಿತ ವಿದ್ಯೆ ಕೇವಲ ಮೆದುಳಿಗೆ ಜ್ಞಾನವನ್ನು ಕೊಡುತ್ತದೆ. ತರಗತಿಯ ಹೊರಗೆ ಕಲಿತ ಬಯಲು ಶಿಕ್ಷಣ ಪ್ರಾಯೋಗಿಕತೆಯಿಂದ ಕೂಡಿದ್ದು, ಅದು ಶ್ರೇಷ್ಠ ಜ್ಞಾವನ್ನಾಗಿಸುತ್ತದೆ. ಆಯುರ್ವೇದದಲ್ಲಿರುವ ವಿಫುಲ ಅವಕಾಶಗಳನ್ನು ಅರ್ಥಮಾಡಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ಆಳ್ವಾಸ್ ಧನ್ವಂತರಿ ಪ್ರಶಸ್ತಿ ಸ್ವೀಕರಿಸಿದ ಪಡುಬಿದಿರೆಯ ಅಂಚನ್ ಫಾರ್ಮಸಿಯ ಮುಖ್ಯಸ್ಥ ಡಾ. ನಾರಾಯಣ ಟಿ. ಅಂಚನ್ ಮಾತನಾಡಿ, ಆತ್ಮವಿಶ್ವಾಸ ಹಾಗೂ ಪರಿಶ್ರಮದಿಂದ ಆಯುರ್ವೇದ ವೃತ್ತಿಯಲ್ಲಿ ಪಾಲ್ಗೊಂಡು ಭಾರತೀಯ ವೈದ್ಯಕೀಯ ಪರಂಪರೆಯನ್ನು ಜಾಗತಿಕವಾಗಿ ಪ್ರಚುರ ಪಡಿಸುವ ಕೆಲಸವಾಗಬೇಕಿದೆ ಎಂದರು.

    ಆಳ್ವಾಸ್ ಧನ್ವಂತರಿ ಪ್ರಶಸ್ತಿ ಸ್ವೀಕರಿಸಿದ ಇನ್ನೋರ್ವ ಸಾಧಕ ಕೊಪ್ಪ ಎ.ಎಲ್.ಎನ್ ರಾವ್ ಮೆಮೋರಿಯಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಸಂಜಯ ಕೆ. ಎಸ್. ಮಾತನಾಡಿ, ಆಯುರ್ವೇದದಲ್ಲಿ ಉತ್ತಮ ಆಹಾರ ಪದ್ದತಿಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆ ಮೂಲಕ ನಿರಂತರ ಕಲಿಕೆ ಹಾಗೂ ಜೀವನೋತ್ಸಾಹ ರೂಡಿಸಿಕೊಳ್ಳಬಹುದು ಎಂದರು.

    ಆಳ್ವಾಸ್ ಧನ್ವಂತರಿ ಪ್ರಶಸ್ತಿ ಸ್ವೀಕರಿಸಿದ ಮತ್ತೋರ್ವ ಸಾಧಕಿ ಕೇರಳ ತಿರುವನಂತಪುರದ ಡಾ. ಸೀಮಾಸ್ ಆಯುರ್ವೇದಿಕ್ ವೆಲ್‌ನೆಸ್ ಸೆಂಟರ್‌ನ ಮುಖ್ಯಸ್ಥೆ ಡಾ. ಸೀಮಾ ರಂಜಿತ್ ಮಾತನಾಡಿ ಸ್ವಾಭಿಮಾನ ಹಾಗೂ ಸಕಾರಾತ್ಮಕ ಚಿಂತನೆಯಿಂದ ಮುನ್ನಡೆದರೆ ಯಶಸ್ಸು ಸಾಧ್ಯ ಎಂದರು.

    Click here

    Click here

    Click here

    Call us

    Call us

    ಅಂತಿಮ ಸ್ನಾತಕೋತ್ತರ ಆಯುರ್ವೇದ  ವಿಭಾಗದಲ್ಲಿ ಚಿನ್ನದ ಪದಕ ಪಡೆದ ಶಿಕ್ಷಣದಲ್ಲಿ  ಕಾಯಚಿಕಿತ್ಸಾ ವಿಭಾಗದ ಡಾ. ಪ್ರಥ್ವಿ ಭಟ್, ಡಾ. ರಚನಶಾರೀರ ವಿಭಾಗದ ಸೌಮ್ಯಾ ಎಸ್. ಹಾಗೂ ಕಿಯಾಶಾರೀರ ವಿಭಾಗದ ಶೆಟ್ಟಿ ಸುಪ್ರೀತಾ ಸುಂದರ್ ಅವರನ್ನು ಸನ್ಮಾನಿಸಲಾಯಿತು. ಹರ್ಷಿತಾ ಅವರಿಗೆ ಪ್ರಸೂತಿ ತಂತ್ರ ವಿಭಾಗದಲ್ಲಿ ಹೆಚ್ಚಿನ ಅಂಕ ಪಡೆದ ಹಿನ್ನಲೆಯಲ್ಲಿ ’ಸೀತಾಲಕ್ಷ್ಮಿ ಪ್ರಶಸ್ತಿ’ ನೀಡಲಾಯಿತು.

    ಅಲಂಗಾರು ಸುಭ್ರಮಣ್ಯ ಭಟ್ ಮುಂದಾಳತ್ವದಲ್ಲಿ ಧನ್ವಂತರಿ ಪೂಜಾ ಮಹೊತ್ಸವ,  ನಂತರ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಂಕಣವನ್ನು ಧಾರಣೆ ಮಾಡಲಾಯಿತು. ಧನ್ವಂತರಿ ಪೂಜಾ ಮಹೊತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ಬಹುಮಾನವನ್ನು ವಿತರಿಸಲಾಯಿತು. ’ಚಿರಂತನʼ ಕಾಲೇಜಿನ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಲಾಯಿತು.

    ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಸುಜಿತ್ ಎಮ್ ಸ್ವಾಗತಿಸಿದರು. ವೈದ್ಯಕೀಯ ಅಧೀಕ್ಷಕ ಡಾ. ಮಂಜುನಾಥ್ ಭಟ್ ವಂದಿಸಿದರು. ಕಾಲೇಜಿನ ಪ್ರೊಫೆಸರ್ ಡಾ. ಗೀತಾ ಬಿ.ಎಂ. ಕಾರ್ಯಕ್ರಮ ನಿರ್ವಹಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.