Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ಬೀಳ್ಕೊಡುಗೆ ಮತ್ತು ಮಾತೃವಂದನಾ ಕಾರ್ಯಕ್ರಮ ಸಂಪನ್ನ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ಬೀಳ್ಕೊಡುಗೆ ಮತ್ತು ಮಾತೃವಂದನಾ ಕಾರ್ಯಕ್ರಮ ಸಂಪನ್ನ

    Updated:10/02/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶ್ರೀ ವೇದಮೂರ್ತಿ ರಾಮಚಂದ್ರ ಭಟ್ಟರ ಸ್ಮರಣಾರ್ಥ ಆರಾಧನೆ ಕಾರ್ಯಕ್ರಮದ ಭಾಗವಾಗಿ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಮಾತೃವಂದನಾ ಕಾರ್ಯಕ್ರಮವು ಇತ್ತೀಚಿಗೆ ನೆರವೇರಲ್ಪಟ್ಟಿತು.

    Click Here

    Call us

    Click Here

    ಬಾರ್ಕೂರಿನ ಖ್ಯಾತ ವಾಗ್ಮಿಗಳಾದ ಎನ್. ಆರ್. ದಾಮೋದರ ಶರ್ಮ ಅವರು ಈ ಕಾರ್ಯಕ್ರಮವನ್ನು ಸಾಂಗವಾಗಿ ನೆರವೇರಿಸಿಕೊಟ್ಟರು. ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಗಳ ಪಾದ ತೊಳೆದು, ಆರತಿ ಬೆಳಗಿ, ಗೌರವಿಸಿದರು.

    ಈ ಸಂದರ್ಭದಲ್ಲಿ ಎನ್. ಆರ್. ದಾಮೋದರ ಶರ್ಮರು ಪೋಷಕರು ಮತ್ತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಭರತಭೂಮಿ ಕರ್ಮಭೂಮಿ, ಧರ್ಮಭೂಮಿ, ಸಾಧನಭೂಮಿಯೆಂದು ವೇದೇತಿಹಾಸಗಳು ಸಾರಿ ಸಾರಿ ಹೇಳುತ್ತಿವೆ. ಏಕೆಂದರೆ ಇಲ್ಲಿ ಜಾತರಾದವರು ಭಾವ ರಾಗ ತಾಳಗಳಿಂದ ಕೂಡಿದ ಜೀವನ ನಡೆಸುತ್ತಾರೆ. ಈಗಿನ ಭಾರತ ಮುಂದೆ ಹೀಗೇ ಮುಂದುವರಿಯಬೇಕಾದರೆ ಉತ್ತಮ ಗುಣಮಟ್ಟದ ಭಾವನೆಗಳನ್ನು ವಿದ್ಯಾರ್ಥಿಗಳಲ್ಲಿ ಹುಟ್ಟುಹಾಕುವುದು ಅತ್ಯಗತ್ಯ ಎಂದರು.

    ಮಕ್ಕಳಿಗೆ ಭಾರತೀಯ ಪರಂಪರೆಯ ಬಗ್ಗೆ ಸರಿಯಾದ ಜ್ಞಾನವನ್ನು ನೀಡಬೇಕು. ಇತಿಹಾಸದ ಪ್ರಜ್ಞೆ ಬೇಕು. ಯಾವಾತನು ಇತಿಹಾಸವನ್ನು ಚೆನ್ನಾಗಿ ಅರಿಯುತ್ತಾನೋ ಅವನು ಭದ್ರವಾದ ಭವಿಷ್ಯಕ್ಕೆ ನಾಂದಿಯನ್ನಿಡುತ್ತಾನೆ. ಮಕ್ಕಳು ಮಾತೃದೇವೋ ಭವ ಎಂಬ ವಾಕ್ಯದ ಅರ್ಥವನ್ನು ಅರಿತಿರಬೇಕು. ಯಾವುದೇ ಮಹತ್ಕಾರ್ಯ ಸಾಧಿಸಿದರೂ ಆತ ತಾಯಿಗೆ ಮಗನೇ. ಮಕ್ಕಳ ಸಾಧನೆಯಲ್ಲಿ ತಾಯಿಯ ಪಾತ್ರ, ಪ್ರೇರಣೆ, ಉತ್ತೇಜನ ಇದ್ದೇ ಇರುತ್ತದೆ. ಯುದ್ಧಕ್ಕೆ ಸಾಗಿದ ಸೈನಿಕ, ದೋಣಿ ಒಯ್ದ ನಾವಿಕ, ಹೆರಿಗೆಗೆ ಹೋದ ಹೆಣ್ಣುಮಗಳು ಮರಳಿ ಬಂದೇ ಬರುತ್ತಾರೆ ಎನ್ನುವುದರಲ್ಲಿ ಖಚಿತತೆ ಇರುವುದಿಲ್ಲ.

    ತನ್ನ ಪ್ರಾಣವನ್ನೇ ಪಣಕ್ಕಿಟ್ಟು ನಮ್ಮನ್ನು ಹಡೆದಳು ನಮ್ಮಮ್ಮ. ಅವಳು ನಮಗೆ ದೇವರಾಗದಿರುವಳೇ? ತಂದೆ ತಾಯಿಯರಲ್ಲಿ ದೇವರನ್ನು ಕಾಣುವ ಶ್ರವಣಕುಮಾರನ ಭಕ್ತಿ ನಮಗೆಲ್ಲ ಮಾದರಿಯಾಗಿದೆ. ಬೀಸುವ ಗಾಳಿ, ನಿಂತ ನೆಲ, ಉಣ್ಣುವ ಅನ್ನ ಪ್ರತಿಯೊಂದರಲ್ಲೂ ದೇವರನ್ನು ಕಾಣುವ ನೆಲ ನಮ್ಮದು. ಮಕ್ಕಳು ತಂದೆತಾಯಿಯಲ್ಲೂ ದೇವರನ್ನು ಕಾಣಬೇಕು. ಮಕ್ಕಳ ನಗುವಿನಲ್ಲೇ ಅಪ್ಪ ಅಮ್ಮನ ಸುಖ ಅಡಗಿದೆ. ಮಕ್ಕಳು ಅಪ್ಪ ಅಮ್ಮ ತಲೆ ತಗ್ಗಿಸುವ ಕೆಲಸಗಳನ್ನು ಎಂದಿಗೂ ಮಾಡಬಾರದು.

    Click here

    Click here

    Click here

    Click Here

    Call us

    Call us

    ಅಪ್ಪ ಅಮ್ಮ ಹಾಕಿದ ಗೆರೆ ಎಂದೂ ದಾಟಬಾರದು. ಬಾಹ್ಯ ಆಕರ್ಷಣೆಗಳಿಗೆ  ಒಳಗಾಗಿ ಬದುಕನ್ನು ಹಾಳುಗೆಡವಿಕೊಳ್ಳಬಾರದು. ಕ್ಷಣಿಕ ಸುಖಕ್ಕೆ ಬಲಿಯಾಗಿ ಸುಂದರ ಬದುಕನ್ನು ನರಕ ಮಾಡಿಕೊಳ್ಳಬಾರದು. ವಿದ್ಯೆಕೊಟ್ಟಗುರು, ಅನ್ನ-ಆಶ್ರಯ-ವಿದ್ಯೆ ನೀಡಿದ ಸಂಸ್ಥೆಯನ್ನು ಎಂದೂ ಮರೆಯಬಾರದು. ಎಂದು ಕಿವಿಮಾತು ನುಡಿದರು.

    ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಸ್ಥೆಯಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರ ಧರ್ಮಪತ್ನಿ ರಮಾದೇವಿ ಆರ್ ಭಟ್, ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್., ಶಾಲಾ ಉಪಪ್ರಾಂಶುಪಾಲ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ್ ಹಾಗೂ ಎಲ್ಲಾ ಶಿಕ್ಷಕ- ಶಿಕ್ಷಕೇತರ ವೃಂದದವರೂ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    sixteen − four =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.