Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೆ.12ರಿಂದ – 16ರ ತನಕ ಕೋಡಿಯಲ್ಲಿ ಕುಂದ ಉತ್ಸವ
    ಊರ್ಮನೆ ಸಮಾಚಾರ

    ಫೆ.12ರಿಂದ – 16ರ ತನಕ ಕೋಡಿಯಲ್ಲಿ ಕುಂದ ಉತ್ಸವ

    Updated:12/02/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಟೀಮ್ ಕುಂದಾಪುರದ ಪ್ರಸ್ತುತಿಯಲ್ಲಿ ಫೆಬ್ರವರಿ 12ರಿಂದ ಫೆಬ್ರವರಿ 16ರ ತನಕ ಕೋಡಿಯಲ್ಲಿ ಕುಂದ ಉತ್ಸವ-2025 ಐದು ದಿನಗಳ ಅದ್ದೂರಿಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಉದ್ಯಮಿ, ಕುಂದ ಉತ್ಸವದ ಸಾರಥ್ಯ ವಹಿಸಿರುವ ದಿನೇಶ ಹೆಗ್ಡೆ ಮೊಳಹಳ್ಳಿ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ.12 ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಯೋಗ, ಬೀಚ್ ಸ್ವಚ್ಛತಾ ಕಾರ್ಯಕ್ರಮ, ಸಂಜೆ 7 ಗಂಟೆಯಿಂದ ಸಾಂಸ್ಕಂತಿಕ ಕಾರ್ಯಕ್ರಮ, 8 ಗಂಟೆಗೆ ಕುಂದ ಉತ್ಸವ ಉದ್ಘಾಟನೆ ನಡೆಯಲಿದೆ. ಬಳಿಕ ಶಿವಾನಿ ಮ್ಯೂಸಿಕಲ್ಸ್ ಇವರ ಸಂಯೋಜನೆಯಲ್ಲಿ ಝಿ ಕನ್ನಡ ಸರಿಗಮಪ ಖ್ಯಾತಿಯ ಕಲಾವಿದರಿಂದ ಸಂಗೀತ ಸಂಜೆ ನಡೆಯಲಿದೆ. ಫೆ.13ರಂದು ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ, ರಾಜ್ಯ ಮಟ್ಟದ ಡಾನ್ಸ್ ಸ್ಪರ್ಧೆ ನಡೆಯಲಿದೆ. ಫೆ.14ರಂದು ಸಂಜೆ 7 ಗಂಟೆಗೆ ಝಿ ಕನ್ನಡ ಡಿ.ಕೆ.ಡಿ ಖ್ಯಾತಿಯ ಶಿಪಾಲಿ ಪೂಜಾರಿ ಹಾಗೂ ಶಿವಾನಿ ಪೂಜಾರಿ ಇವರ ಭಾಗವಹಿಸುವಿಕೆಯಲ್ಲಿ ಸುಧೀರ್ ಉಳ್ಳಾಲ ನೇತೃತ್ವದ ರಾಜ್ಯದ ಹೆಸರಾಂತ ಸಿಟಿ ಗೈಸ್-ಕುಡ್ಲ ಕ್ವೀನ್ಸ್ ಇವರಿಂದ ಡ್ಯಾನ್ಸ್ ಧಮಾಕಾ ನಡೆಯಲಿದೆ. ರಾತ್ರಿ 8 ಗಂಟೆಗೆ ಸಭಾ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಅಂತರಾಷ್ಟ್ರೀಯ ಮಟ್ಟದ ಬೀಟ್-ಗುರುಸ್ ಇವರಿಂದ ಬೀಟ್ ಶೋ (ಇಂಡೋ-ಅರೇಬಿಯನ್-ಆಫ್ರಿಕನ್ ಜುಗಲ್‍ಬಂದಿ) ನಡೆಯಲಿದೆ.

    ಫೆ.15ರಂದು ಸಂಜೆ 7 ಗಂಟೆಗೆ ಟೀಮ್ ಎಮ್.ಸಿ.ಎಸ್ ಇವರಿಂದ ಚಂಡೆ-ವಯೋಲಿನ್ ಫ್ಯೂಷನ್, ರಾತ್ರಿ 8 ಗಂಟೆಗೆ ಸಭಾ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಚಂದನ್ ಶೆಟ್ಟಿ ಮತ್ತು ತಂಡದವರಿಂದ ಮ್ಯೂಸಿಕಲ್ ನೈಟ್, ರಾತ್ರಿ 10 ಗಂಟೆಗೆ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ಫೆ.16ರಂದು ಸಂಜೆ 4 ಗಂಟೆಗೆ ಗಾಳಿಪಟ ಉತ್ಸವ, ಸಂಜೆ 7 ಗಂಟೆಗೆ ಫ್ಲೈ_ಬೋರ್ಡ್ ನೈಟ್ ಶೋ, ರಾತ್ರಿ 8 ಗಂಟೆಗೆ ಸಭಾ ಕಾರ್ಯಕ್ರಮ, ರಾತ್ರಿ 10 ಗಂಟೆಯಿಂದ ಅನನ್ಯ ಭಟ್ ಮತ್ತು ತಂಡದವರಿಂದ ಲೈವ್ ಆರ್ಕೆಸ್ಟ್ರಾ ನಡೆಯಲಿದೆ. ವಿಶೇಷ ಆಹ್ವಾನಿತರಾಗಿ ಖ್ಯಾತ ನಿರೂಪಕಿ ಅನುಶ್ರೀ ಭಾಗವಹಿಸಲಿದ್ದಾರೆ ಎಂದರು.

    ಫೆ. 15ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗಮಿಸಲಿದ್ದಾರೆ. ಫೆ.16ರಂದು ಕಾರ್ಯಕ್ರಮಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸುವ ಸಾಧ್ಯತೆ ಇದೆ. ಶಾಸಕರು, ಸಂಸದರು, ಬೇರೆ ಬೇರೆ ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿದ್ದೇವೆ. ಕೋಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದರು.

    ಕುಂದ ಉತ್ಸವದಲ್ಲಿ ಸುಮಾರು 150ಕ್ಕೂ ಹೆಚ್ಚು ವಿವಿಧ ಮಳಿಗೆಗಳು ಇರಲಿವೆ. ಸಂಗೀತ, ನೃತ್ಯದ ಜೊತೆಗೆ ಆಹಾರ ಮಳಿಗೆಗಳು, ಜಾಯ್ ರೈಡ್, ಮನೋರಂಜನಾ ಪಾರ್ಕ್ ಮೊದಲಾದವುಗಳು ಇರುತ್ತದೆ ಎಂದರು. ವಾಹನ ನಿಲುಗಡೆಗೆ ಚಕ್ರಮ ದೇವಸ್ಥಾನದ ಪರಿಸರ, ಬ್ಯಾರಿಸ್ ಕಾಲೇಜು ವಠಾರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

    Click here

    Click here

    Click here

    Call us

    Call us

    ಸುದ್ಧಿಗೋಷ್ಟಿಯಲ್ಲಿ ಮುನಾಫ್ ಕೋಡಿ, ಮನ್ಸೂರ್ ಕೋಡಿ, ಹನೀಫ್ ಗುಲ್ವಾಡಿ, ನವೀನ ಪೂಜಾರಿ, ಪ್ರದೀಪ್, ಜಮಾನ್ ಗುಲ್ವಾಡಿ ಮೊದಲಾದವರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.