Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ‘ಇನ್ಸ್‌ಫೀರಿಯಾ – 2025’ ರಾಷ್ಟ್ರೀಯ ವಿಚಾರ ಸಂಕಿರಣ
    alvas nudisiri

    ಆಳ್ವಾಸ್‌ನಲ್ಲಿ ‘ಇನ್ಸ್‌ಫೀರಿಯಾ – 2025’ ರಾಷ್ಟ್ರೀಯ ವಿಚಾರ ಸಂಕಿರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ವಿಭಾಗದ ವತಿಯಿಂದ ‘ಇನ್ಸ್‌ಪೀರಿಯಾ – 2025’ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.

    Click Here

    Call us

    Click Here

    ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಪಾನ್ ಮೂಲದ ಸಕ್ರಾ ವರ್ಲ್ಡ್ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಯುಚಿ ನಗಾನೊ ಮುಖ್ಯ ಅತಿಥಿಯಾಗಿ ಮಾತನಾಡಿ, ಕೃತಕ ಬುದ್ಧಿಮತ್ತೆ ಹಾಗೂ ಇನ್ನಿತರ ತಂತ್ರಜ್ಞಾನಗಳ ಪ್ರಗತಿಯೊಂದಿಗೆ ಆರೋಗ್ಯ ನಿರ್ವಹಣಾ ಕ್ಷೇತ್ರವು ಬಹಳಷ್ಟು ಮುಂದುವರಿದಿದೆ. ವೈದ್ಯಕೀಯ ಕ್ಷೇತ್ರವು ಸೋಂಕುಗಳನ್ನು ತಡೆಗಟ್ಟಿ ರೋಗಿಯ ಚೇತರಿಕೆಗೆ ಗಮನ ನೀಡುವುದರೊಂದಿಗೆ ಆಸ್ಪತ್ರೆಗಳು ಮನೆಯ ವಾತಾವರಣವನ್ನು ಕಲ್ಪಿಸಿಕೊಡುವಂತಿರಬೇಕು. ಆಸ್ಪತ್ರೆ ನಿರ್ವಹಣೆಯ ಕುರಿತು ಸೂಕ್ಷ್ಮದೃಷ್ಠಿ ಬೆಳೆಸಿಕೊಳ್ಳಲು ನಮ್ಮಲ್ಲಿರುವ ಜ್ಞಾನ, ಕನಸುಗಳು ಹಾಗೂ ಆಶಯಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕು ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹೆಚ್ಚಿನ ಆಸ್ಪತ್ರೆಗಳನ್ನು ಕಾರ್ಪೋರೇಟ್ ಸಂಸ್ಥೆಗಳು ನಿರ್ವಹಿಸುವುದರಿಂದ ಜನಸಾಮಾನ್ಯರಿಗೆ ವ್ಯವಸ್ಥೆಗಳು ಬಳಸಿಕೊಳ್ಳಲು ಅನುಕೂಲಕರವಾಗಿಲ್ಲ. ಆಸ್ಪತ್ರೆಯ ನಿರ್ವಾಹಕರು ರೋಗಿಗಳ ಮೇಲೆ ಸಹಾನುಭೂತಿಯ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಹಸಿವು ಹೆಚ್ಚಾಗಬೇಕು ಎಂದರು.

    ಆಸ್ಪತ್ರೆ ನಿರ್ವಹಣೆಯಲ್ಲಿ ನೈತಿಕ ನಾಯಕತ್ವ ವಿಷಯದ ಕುರಿತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ವ್ಯವಸ್ಥಾಪಕ ರೆವರೆಂಡ್ ಫಾದರ್ ಅಜಿತ್ ಎಂ ಮಿನೇಜಸ್, ಆರೋಗ್ಯ ನಿರ್ವಹಣಾ ಕ್ಷೇತ್ರದಲ್ಲಿ ಆಗುತ್ತಿರುವ ಕ್ರಿಯಾತ್ಮಕ ಬದಲಾವಣೆಯ ಕುರಿತು ಎ.ಜೆ ಹಾಸ್ಪಿಟಲ್‌ನ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲಾ ಕೆ., ನಾಯಕತ್ವದಲ್ಲಿ ನಾವಿನ್ಯತೆಯ ಕುರಿತು ಯೇನಪೋಯಾ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್‌ನ ಡೀನ್ ಡಾ. ಸುನಿತಾ ಸಲ್ದಾನ, ಆಸ್ಪತ್ರೆ ನಿರ್ವಹಣೆ ಹಾಗೂ ಮಂಡಳಿಯ ನಾಯಕತ್ವದ ಕುರಿತು ಬೆಂಗಳೂರಿನ ಸ್ಪರ್ಶ್ ಗ್ರೂಪ್ ಆಫ್ ಹಾಸ್ಪಿಟಲ್ಸ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಪಸಂಗ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

    ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಹೆಯ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ವಿಭಾಗದ ಮುಖ್ಯಸ್ಥೆ ಡಾ ಉಷಾರಾಣಿ, ಸಕ್ರಾ ವಲ್ಡ್ ಹಾಸ್ಪಿಟಲ್‌ನ ನಿರ್ದೇಶಕಿ ನೀತಾ ವೇಗಸ್ ಇದ್ದರು.

    Click here

    Click here

    Click here

    Call us

    Call us

    ರಾಷ್ಟ್ರದ ವಿವಿಧ ಭಾಗಗಳಿಂದ 300ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

    ಸಮಾರೋಪ ಕಾರ‍್ಯಕ್ರಮದಲ್ಲಿ ಆಳ್ವಾಸ್ ಹೆಲ್ತ್ ಸೆಂಟರ್‌ನ ಸ್ತ್ರೀರೋಗ ತಜ್ಞೆ ಡಾ. ಹನಾ ಶೆಟ್ಟಿ, ಉದ್ಯಮಿ ರಾಹುಲ್ ಇದ್ದರು.

    ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ಸ್ನಾತಕೋತ್ತರ ವಿಭಾಗದಲ್ಲಿ ಡಾ ಟೋಬಿ ಟಾಮ್ ಪ್ರಥಮ,  ಅಪರ್ಣ ವಿಕೆ ದ್ವಿತೀಯ,  ಸ್ನಾತಕ ವಿಭಾಗದಲ್ಲಿ ತುಳಸಿ ಪ್ರಥಮ, ಫಾತಿಮಾ ಸೈಮಾ ದ್ವಿತೀಯ ಸ್ಥಾನ ಪಡೆದರು. 

    ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥ ಪ್ರೋ. ಆದರ್ಶ ಹೆಗ್ಡೆ ಅವರ ’ಲೀಡ್ ಟು ಹೀಲ್’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಉಪನ್ಯಾಸಕಿ ನಿಧಿ ವಂದಿಸಿದರು, ವಿದ್ಯಾರ್ಥಿನಿ ವರ್ಷಿಣಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.