ಮೂಡುಬಿದಿರೆ: ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡುವುದಕ್ಕೂ ಮುನ್ನ ನಾಡಗೀತೆ, ರೈತಗೀತೆ, ಭಾವೈಕ್ಯ ಗೀತೆಗಳನ್ನು ಹಾಡುವಾಗ ನೆರೆದಿದ್ದ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸಾವಿರಾರು ಪ್ರೇಕ್ಷಕರು ಕನ್ನಡ ನಾಡಿನ ಭಾವುಟ, ರೈತ ಧ್ವಜ ಹಾಗೂ ರಾಷ್ಟ್ರ ಧ್ವಜವನ್ನು ಬೀಸಿ ಗೌರವ ಸಲ್ಲಿಸಿದರು. ಪುತ್ತಿಗೆ ನುಡಿಸಿರಿ ಮೈದಾನದಲ್ಲಿ ತುಂಬಿದ್ದ ಪ್ರೇಕ್ಷಕರು ಕೈಯಲ್ಲಿದ್ದ ಧ್ವಜದ ವಿಹಂಗಮ ನೋಟ ವಿಶೇಷ ರಂಗು ನೀಡಿತ್ತು.
ಸುನಿಲ್ ಹೆಚ್. ಜಿ. ಬೈಂದೂರು
ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.




















