Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ: ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭ
    ಊರ್ಮನೆ ಸಮಾಚಾರ

    ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ: ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭವು ಸಡಗರದಿಂದ ಸಂಪನ್ನಗೊಂಡಿತ್ತು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಶ್ರೀದೇವಿ ಕಟ್ಟೆ ಅವರು ಮಕ್ಕಳಿಗೆ ಪದವಿ ಪ್ರಮಾಣಪತ್ರ ವಿತರಿಸಿ, ಮಾತನಾಡಿ, “ಮಕ್ಕಳು ದೇವರ ಉಡುಗೊರೆ, ಅವರಿಗೆ ಚಿಕ್ಕಂದಿನಿಂದಲೇ ಸಣ್ಣ-ಪುಟ್ಟ ಜವಾಬ್ದಾರಿಗಳನ್ನು ನೀಡಬೇಕು, ಆಗ ಮಾತ್ರ ತಮ್ಮ ಮುಂದಿನ ಜೀವನದಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಎದೆಗುಂದದೆ ಎದುರಿಸಲು ಸಮರ್ಥರಾಗುತ್ತಾರೆ. ಮಕ್ಕಳಿಗೆ ಸ್ವನಿಯಂತ್ರಣದ ಮಹತ್ವವನ್ನು ಮನವರಿಕೆ ಮಾಡಿಕೊಡಬೇಕು. ಪರೀಕ್ಷೆಯ ಅಂಕಕ್ಕಿಂತ ಮೌಲ್ಯಯುತ ಜೀವನ ಬಹಳ ಮುಖ್ಯ, ಪೋಷಕರು ಮಕ್ಕಳಿಗೆ ಆಧ್ಯಾತ್ಮಿಕತೆಯ ಮಹತ್ವವನ್ನು ಸಾರುವ ಕಥೆಗಳನ್ನು ಹೇಳಿ, ಅವರಲ್ಲಿ ಆಧ್ಯಾತ್ಮಿಕತೆ ಬೆಳೆಸಬೇಕು” ಎಂದರು.

    ಅವರು ತಮ್ಮ ಮಾತನ್ನು ಮುಂದುವರಿಸುತ್ತಾ , “ಮಕ್ಕಳನ್ನು ಶಾಲೆಗೆ ಕಳುಹಿಸಿದ ಮೇಲೆ ಪೋಷಕರ ಜವಾಬ್ದಾರಿ ಮುಗಿಯುತ್ತದೆ ಎಂದು ಭಾವಿಸದೆ, ಆ ಕ್ಷಣದಿಂದಲೇ ಪೋಷಕರ ಜವಾಬ್ದಾರಿ ಇಮ್ಮಡಿಯಾಗುತ್ತದೆಂದು ತಿಳಿಯಬೇಕು. ಸೈಕಲ್‌ನ ಎರಡು ಚಕ್ರಗಳು ಚಲನೆಗೆ ಹೇಗೆ ಸಹಾಯ ಮಾಡುತ್ತವೆಯೋ, ಹಾಗೆಯೇ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರು ಇಬ್ಬರೂ ಮಹತ್ವದ ಪಾತ್ರ ವಹಿಸುತ್ತಾರೆ” ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಯುಕೆಜಿ ವಿದ್ಯಾರ್ಥಿಗಳು ತಮ್ಮ ಶಾಲೆ ಮತ್ತು ಶಿಕ್ಷಕರ ಬಗ್ಗೆ ಹಾಗೂ ಪೂರ್ವ ಪ್ರಾಥಮಿಕ ವಿದ್ಯಾಭ್ಯಾಸದ ಅನುಭವವನ್ನು ಭಾಷಣದ ಮೂಲಕ ಹಂಚಿಕೊಂಡರು. ಹೀಗೆ ತಮ್ಮ ಕಲಿಕೆಯ ಹಾದಿಯಲ್ಲಿನ ಅನುಭವಗಳನ್ನು ಹಂಚಿಕೊಂಡ ಪುಟಾಣಿಗಳು, ಶಿಕ್ಷಕರ ಪ್ರೇರಣೆಗೆ ಕೃತಜ್ಞತೆ ವ್ಯಕ್ತಪಡಿಸಿದರು, ಇದರೊಂದಿಗೆ ವಿದ್ಯಾರ್ಥಿಗಳ ಹಾಡು, ನೃತ್ಯ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭದ ಮೆರುಗನ್ನು ಹೆಚ್ಚಿಸಿತ್ತು.

    ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ನಕ್ಷ್, ಆನ್ಯಾ, ಶೈರವಿ ಹಾಗೂ ರಿಷಾ ಅವರು ನಿರ್ವಹಿಸಿ, ಸಮಾರಂಭಕ್ಕೆ ವಿಶೇಷ ಲವಲವಿಕೆಯ ನಿರೂಪಣೆ ನೀಡಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ವಹಿಸಿದ್ದರು.

    ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಂ., ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ್, ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    two × three =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.