Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೀರಿನ ಹಕ್ಕನ್ನು ಸಮರ್ಥಿಸಲು ರಾಜ್ಯ ಸರಕಾರ ವಿಫಲ: ವಿಕಾಸ್ ಸೊಪ್ಪಿನ್
    alvas nudisiri

    ನೀರಿನ ಹಕ್ಕನ್ನು ಸಮರ್ಥಿಸಲು ರಾಜ್ಯ ಸರಕಾರ ವಿಫಲ: ವಿಕಾಸ್ ಸೊಪ್ಪಿನ್

    Updated:29/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮೂಡುಬಿದಿರೆ: ಎಲ್ಲರೂ ಕಪ್ಪು ಎಂದು ಅಶುಭದ ಸಂಕೇತವೆಂದು ಭಾವಿಸುತ್ತಾರೆ ಆದರೆ ನಮ್ಮ ಜನ ಕಪ್ಪು ಮೋಡವಾಗಿ ಯಾವಾಗ ಆಗುತ್ತದೆ ಎಂದು ಕಾಯುತ್ತಾರೆ. ನೀರಿನ ಸಮಸ್ಯೆ ದಿನವೂ ನಮ್ಮನ್ನು ಕಾಡುತ್ತಿದೆ. ಕುಡಿಯಲು, ಸ್ನಾನಕ್ಕೆ ನೀರಿಲ್ಲ. ನಮ್ಮೂರಿನವರಿಗೆ ಹೆಣ್ಣು ಕೊಡಲ್ಲ. ಸರಕಾರಿ ನೌಕರರು ಇಲ್ಲಿ ಉಳಿಯೋಲ್ಲ. ಇಂತಹ ದುಸ್ಥರ ಬದುಕು ನಮ್ಮದು. ಮಹದಾಯಿಯ ಅಗತ್ಯತೆಯನ್ನು ವಿಕಾಸ್ ಸೊಪ್ಪಿನ್ ನರಗುಂದ ವಿವರಿಸಿದ್ದು ಹೀಗೆ.

    Click Here

    Call us

    Click Here

    ಆಳ್ವಾಸ್ ನುಡಿಸಿರಿಯ ರತ್ನಾಕರವರ್ಣಿ ವೇದಿಕೆಯ ನಾಡೋಜ ಕಯ್ಯಾರ ಕಿಂಞಣ್ಣ ರೈ ಸಭಾಂಗಣದಲ್ಲಿ ‘ನೀರಿನ ಬಳಕೆ ಮತ್ತು ಹಂಚಿಕೆ ಎಂಬ ವಿಚಾರಗೋಷ್ಠಿಯಲ್ಲಿ ಮಹದಾಯಿ ಯೋಜನೆಯ ಕುರಿತು ಮಾತನಾಡುತ್ತಾ ಕರ್ನಟದಲ್ಲಿ ಬಳಕೆಯಾಗದೇ ಉಳಿಯುತ್ತಿದ್ದ ನೀರನ್ನು ಡ್ಯಾಂ ಮುಖಾಂತರ ನಾಲ್ಕು ಜಿಲ್ಲೆಗಳಿಗೆ ತಲುಪಿಸಲು ಮಲಪ್ರಭಾ ಡ್ಯಾಂ ಕಟ್ಟಲಾಯಿತು. ಆದರೆ ಆ ಡ್ಯಾಂ ತುಂಬಿತ್ತಿಲ್ಲ ಎಂಬ ಕಾರಣಕ್ಕೆ ಹತ್ತಿರದಲ್ಲೇ ಇದ್ದ ಮಹದಾಯಿಯನ್ನು ಮಲಪ್ರಭೆಗೆ ಸೇರಿಸುವ ಪ್ರಯತ್ನ ನಡೆಯಿತು. ಆದರೆ ಗೋವಾ ಇದಕ್ಕೆ ತಗಾದೆ ತೆಗೆಯಿತು. ಅದು ಇಂದಿಗೂ ಮುಂದುವರಿದಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಎಲ್ಲಾ ಸರಕಾರಗಳೂ ನೀರಿನ ಮೇಲೆ ನಮ್ಮ ಹಕ್ಕಿದೆ ಎಂಬ ವಾದವನ್ನು ಮಂಡಿಸಲು ವಿಫಲವಾದವು. ಜನರಿಗೆ ಬೇಡದ ಯೋಜನೆ ಸರಕಾರಕ್ಕೆ ಮುಖ್ಯವಾದವು. ರೈತರ ಭೂಮಿ ಹೋದದ್ದಕ್ಕಿಂತ ರಾಜಕಾರಣಿಗಳಿಗೆ ಕಮಿಷನ್ ಸಿಕ್ಕದ್ದಕ್ಕೇ ಹೆಮ್ಮ ಪಡುವಂತಾಯಿತು ಎಂದು ಅವರು ತಮ್ಮ ವಿಷಾದ ವ್ಯಕ್ತಪಡಿಸಿದರು.

    ಎಲ್ಲಾ ಯೋಜನೆಗಳೂ ಕೆಟ್ಟ ರಾಜಕೀಯದಿಂದಾಗಿ ವಿಮುಖವಾಗುತ್ತಿದೆ. ಒಂದಿಷ್ಟು ನೀರಿನಿಂದ ಬದುಕು ಕಟ್ಟಿಕೊಳ್ಳಬೇಕಿದ್ದ ಜನ ಇಂದು ಬೀದಿಗಿಳಿಯುವಂತಾಗಿದೆ. ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸುವುದೇ ಮಹದಾಯಿ ಯೋಜನೆ ಉದ್ದೇಶ ಎಂದವರು ಹೇಳಿದರು.

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ
    • ಕಟಪಾಡಿ ಓವರ್ ಪಾಸ್ ಕಾಮಗಾರಿ ಹಿನ್ನೆಲೆ, ವಾಹನಗಳ ಸುಗಮ ಸಂಚಾರಕ್ಕೆ ಮಾರ್ಗ ಕಲ್ಪಿಸಿ: ಜಿಲ್ಲಾಧಿಕಾರಿ
    • ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.