Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿದ್ದಾಪುರದ ಕಾಡಂಚಿನ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ
    ಊರ್ಮನೆ ಸಮಾಚಾರ

    ಸಿದ್ದಾಪುರದ ಕಾಡಂಚಿನ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ

    Updated:06/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಿದ್ದಾಪುರ ಪೇಟೆಯೂ ಸೇರಿದಂತೆ ಮೂರು ದಿನಗಳಿಂದ ಸುತ್ತಾಡುತ್ತಾ ಭಯ ಹುಟ್ಟಿಸಿದ್ದ ಒಂಟಿ ಸಲಗ ಕೊನೆಗೂ ಸೆರೆ ಸಿಕ್ಕಿದೆ. ಆದರೆ ಮೂರು ದಿನಗಳಿಂದ ತಾಲೂಕು ಆಡಳಿತವನ್ನೇ ನಡುಗಿಸಿತ್ತು. ಮುಂಜಾಗ್ರತೆಯಿಂದ ಶಾಲೆಗಳಿಗೂ ರಜೆ ನೀಡಲಾಗಿತ್ತು. ಸಂಜೆ 6.30 ರ ಮುಚ್ಚಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

    Click Here

    Call us

    Click Here

    ಈ ಆನೆಯನ್ನು ಹಿಡಿಯಲು ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಪೋರ್ಸ್ (ಇಟಿಎಫ್)ನ ತಂಡದೊಂದಿಗೆ ಕುದುರೆಮುಖ ವನ್ಯಜೀವಿ ವಿಭಾಗ, ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಸಿದ್ದಾಪುರ, ಅಮಾಸೆಬೈಲು, ನಗರ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು, ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳ ತಂಡದ ಒಟ್ಟಾರೆ 150 ಮಂದಿ ಅಧಿಕಾರಿಗಳು, ಸಿಬಂದಿ ಹರಸಾಹಸ ಪಟ್ಟರು.

    ನಿರಂತರ ಕಾರ್ಯಾಚರಣೆ:
    ಆನೆಯ ಕತ್ತಿಗೆ ಅಳವಡಿಸಿರುವ ರೇಡಿಯೋ ಕಾಲರ್ ಐಡಿಯ ಮೂಲಕ ಚಲನವಲನದ ಬಗ್ಗೆ ನಿಗಾ ಇರಿಸಲಾಗಿದ್ದು, ಅದರಂತೆ ಗುರುವಾರ ಮಧ್ಯಾಹ್ನದಿಂದಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಸಂಜೆ 5.30ಕ್ಕೆ ಆನೆಗೆ ಪಶುವೈದ್ಯರಾದ ಸಕ್ರೆಬೈಲಿನ ಡಾ| ಕಲ್ಲಪ್ಪ, ಮಂಗಳೂರಿನ ಡಾ| ಯಶಸ್ವಿ ಹಾಗೂ ನಾಗರಹೊಳೆಯ ಡಾ| ರಮೇಶ್ ಆನೆಗೆ ಅರಿವಳಿಕೆ ನೀಡಿದರು. ಅದಾದ 1 ಗಂಟೆಯೊಳಗೆ ಆನೆಯನ್ನು ಸಕ್ರಬೈಲಿನಿಂದ ಆಗಮಿಸಿದ ಮೂರು ಸಾಕಾನೆಗಳ ನೆರವಿನಿಂದ ಹಿಡಿಯಲಾಯಿತು. ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ನಾಗರಹೊಳೆಯ ಮತ್ತಿಗೋಡಿ ನಿಂದಲೂ ಹೆಚ್ಚುವರಿಯಾಗಿ 3 ಆನೆಗಳನ್ನು ಕರೆಸಲಾಗಿತ್ತು.

    ಸಕ್ರೆಬೈಲಿಗೆ ರವಾನೆ:
    ಸಾಮಾನ್ಯವಾಗಿ ಮೊದಲ ಬಾರಿಗೆ ಸೆರೆ ಸಿಕ್ಕ ಕಾಡಾನೆಗಳನ್ನು ಮತ್ತೆ ಕಾಡಿಗೆ ರೇಡಿಯೋ ಕಾಲರ್ ಅಳವಡಿಸಿ ಬಿಡಲಾಗುತ್ತದೆ. ಅವು ಮತ್ತೊಮ್ಮೆ ನಾಡಿನ ಕಡೆಗೆ ಬಂದು ಅವಾಂತರ ಸೃಷ್ಟಿಸಿದರೆ ಸೆರೆಹಿಡಿದು ಕುಶಾಲನಗರದ ದುಬಾರೆ, ಸಕ್ರೆಬೈಲು, ನಾಗರಹೊಳೆ ಹಾಗೂ ಬಂಡೀಪುರದ ಶಿಬಿರಗಳ ಪೈಕಿ ಒಂದು ಕಡೆ ಬಿಡಲಾಗುತ್ತದೆ. ಈ ಆನೆಯನ್ನು ಹಿಂದೆ ಹಾಸನದಲ್ಲಿ ಹಿಡಿದು ಬಿಡಲಾಗಿದ್ದು, ಈಗ ಮತ್ತೆ ಸಿಕ್ಕಿರುವುದರಿಂದ ಸಕ್ರೆಬೈಲಿನ ಆನೆ ಶಿಬಿರಕ್ಕೆ ಕೊಂಡೊಯ್ಯಲಾಗಿದೆ

    ಶಾಲೆ, ಕಾಲೇಜು ಆರಂಭ:
    ಕಾಡಾನೆ ಸಂಚಾರದ ಹಿನ್ನೆಲೆಯಲ್ಲಿ ಬುಧವಾರ ಹಾಗೂ ಗುರುವಾರ ಸಿದ್ದಾಪುರ, ಹೊಸಂಗಡಿ, ಯಡಮೊಗೆ, ಕಮಲಶಿಲೆ ಗ್ರಾಮಗಳ ಶಾಲೆ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿತ್ತು. ಜೂ. 6 ರಿಂದ ಮತ್ತೆ ಶಾಲೆ, ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಕಾರ್ಯಾಚರಿಸಲಿವೆ.

    Click here

    Click here

    Click here

    Call us

    Call us

    ಎರಡು ಮೂರು ದಿನದಿಂದ ಸಿದ್ದಾಪುರ ಪರಿಸರದಲ್ಲಿ ಕಾಡು ಆನೆಯೊಂದು ಬೀಡು ಬಿಟ್ಟಿದ್ದು ನಾಗರಿಕರಿಗೆ ಯಾವುದೇ ಹಾನಿಯಾಗಿಲ್ಲ. ಈ ಪರಿಸರದಲ್ಲಿ ಭಯದ ವಾತಾವರಣ ಇದ್ದುದ್ದರಿಂದ ಮುಂಜಾಗ್ರತ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ಆನೆಯನ್ನು ಸೆರೆಹಿಡಿಯಲಾಗಿದೆ. ಹಾಗೆಯೇ ಮುಂದೆಯೂ ಅಗತ್ಯ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

    ಕಾಡಾನೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ. ಗುರುವಾರ ಮಧ್ಯಾಹ್ನದಿಂದ ಸಂಜೆಯವರೆಗೂ ನಿರಂತರ ಕಾರ್ಯಾಚರಣೆ ನಡೆಯಿತು. 150 ಇಲಾಖೆ ಸಿಬಂದಿ, ಮೂವರು ಪಶು ವೈದ್ಯರು, 6 ಕುಮ್ಮಿ ಆನೆಗಳನ್ನು ಕಾರ್ಯಾಚರಣೆಯಲ್ಲಿ ಬಳಸಲಾಗಿತ್ತು. ಮೇಲಾಧಿಕಾರಿಗಳ ಆದೇಶದಂತೆ ಸಕ್ರೆಬೈಲಿನ ಆನೆ ಶಿಬಿರಕ್ಕೆ ಕೊಂಡೊಯ್ದು ಬಿಡಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್

    23/12/2025

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    23/12/2025

    ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ
    • ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.