Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್: ಮೂರು ದಿನಗಳ ಯೂತ್ ಯೋಗ ಫೆಸ್ಟ್
    alvas nudisiri

    ಆಳ್ವಾಸ್: ಮೂರು ದಿನಗಳ ಯೂತ್ ಯೋಗ ಫೆಸ್ಟ್

    Updated:20/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಯೋಗದಲ್ಲಿ ಮುಖ್ಯವಾಗಿ ಎರಡು ಅಂಶಗಳು. ಒಂದು ತತ್ವಶಾಸ್ತ್ರ ಇನ್ನೊಂದು ಅಭ್ಯಾಸ. ಆದರೆ ಈ ಎರಡು ಅಂಶಗಳು ಒಟ್ಟಿಗೆ ಮೇಳೈಸಬೇಕಾದಾಗ, ಮೊದಲು ತತ್ತ್ವಶಾಸ್ತ್ರಕ್ಕೆ  ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಅಭ್ಯಾಸ ಮಾಡಲು ಮೊದಲು ಯೋಗವನ್ನು ಸರಿಯಾಗಿ ಅರ್ಥ ಮಾಡಿಕೊಂಡಿರಬೇಕು ಎಂದು ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಉಪಪ್ರಾಂಶುಪಾಲೆ ಹಾಗೂ ಡೀನ್ ಡಾ. ಸುಜಾತ ದಿನೇಶ್ ಹೇಳಿದರು.

    Click Here

    Call us

    Click Here

    ಅವರು ಆಳ್ವಾಸ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರ ಪರಿಷತ್ತು, ಭಾರತ ಸರ್ಕಾರದ ಆಯುಷ್ಯ ಸಚಿವಾಲಯ ಇವುಗಳ ಜಂಟಿ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 16 ರಿಂದ 19 ರವರೆಗೆ ‘ಯೂತ್ ಯೋಗ ಫೆಸ್ಟಿವಲ್’ನಡೆಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು,  ನ್ಯಾಚುರೋಪಥಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಬರುವ ಅಡೆತಡೆಗಳನ್ನು ಯೋಗತತ್ವಶಾಸ್ತ್ರ ಸಿದ್ಧಾಂತಗಳ ನೆಲೆಯಲ್ಲಿ ಪರಿಹರಿಸಿಕೊಳ್ಳಬೇಕು. ನಮ್ಮ ಭವಿಷ್ಯವನ್ನು ನಮ್ಮ ವರ್ತಮಾನ  ನಿರ್ಧರಿಸುತ್ತದೆ. ಆದುದರಿಂದ ನಾವು ತಿನ್ನುವ ಆಹಾರ ಹಾಗೂ ನಿದ್ರೆ ನಮ್ಮ ಭವಿ?ದ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಯೋಗ ಅಭ್ಯಾಸ ಮಾಡುವುದರಿಂದ ನಮ್ಮ ಆರೋಗ್ಯದಲ್ಲಿ ಧನಾತ್ಮಕ ಶಕ್ತಿ ಹೆಚ್ಚಳವಾಗುತ್ತದೆ ಎಂದರು.

    ಮುಖ್ಯ ಅತಿಥಿಯಾಗಿ ಮಾತನಾಡಿದ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಕೇಂದ್ರೀಯ ಸಂಶೋಧನಾ ಮಂಡಳಿ ನಾಗಮಂಡಲ ಇಲ್ಲಿನ ಸಂಶೋಧನಾ ಅಧಿಕಾರಿ ಡಾ. ನಿತೀಶ್ ಎಂ ಕೆ, ಈ ವರ್ಷ ಭಾರತ ಆಯುಷ್ಯ ಸಚಿವಾಲಯವು ಅಂತರರಾಷ್ಟ್ರೀಯ ಯೋಗ ದಿನದ 10 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. 2014 ರಲ್ಲಿ ಪ್ರಧಾನಿಯವರಿಂದ ಈ ಅಂತರರಾಷ್ಟ್ರೀಯ ಯೋಗ ದಿನವನ್ನು ಪ್ರಾರಂಭಿಸಲಾಯಿತು. ಇಂದು ಯೋಗವು 190 ಕ್ಕೂ ಹೆಚ್ಚಿನ ದೇಶಗಳಲ್ಲಿ ಜೀವನ ಪದ್ದತಿಯ ಭಾಗವಾಗಿ ಆಳವಡಿಸಿಕೊಳ್ಳಲಾಗಿದೆ ಮತ್ತು 144 ದೇಶಗಳು ಪ್ರಕೃತಿ ಚಿಕಿತ್ಸೆಯನ್ನು ಸ್ವೀಕರಿಸಿವೆ  ಎಂದರು.

    ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿ?ನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, 2022ರ ಯೋಗಸಮೀಕ್ಷೆಯ ಪ್ರಕಾರ ಯುಎಸ್‌ನಲ್ಲಿ 38.4 ಮಿಲಿಯನ್ ಜನರು ಯೋಗವನ್ನು ಅನುಸರಿಸುತ್ತಿದ್ದಾರೆ. ಸಾಮನ್ಯವಾಗಿ ಜನರು ಒತ್ತಡ ನಿವಾರಣೆ, ನಮ್ಯತೆ, ಮಾನಸಿಕ ಸ್ಪಷ್ಟತೆಗೆ ಯೋಗವನ್ನು ಅನುಸರಿಸುತ್ತಾರೆ. ಆದರೆ ಯೋಗದೊಂದಿಗೆ ನಾವು ತಿನ್ನುವ ಆಹಾರ ಕೂಡಾ ಪರಿಣಾಮ ಬೀರಬಲ್ಲದು. ?ಯೋಗವನ್ನು ಅನುಸರಿಸುವುದರ ಜೊತೆಯಲ್ಲಿ, ಆಹಾರಕ್ರಮವನ್ನು ಸರಿಯಾಗಿ ಪಾಲಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ಆರಂಭದಲ್ಲಿ ಪತಂಜಲಿ ಮಹರ್ಷಿಗೆ  ವಿಶೇಷ ಪೂಜೆ ಸಲ್ಲಿಸಲಾಯಿತು ಮೂರು ದಿನಗಳ ಕಾಲ ನಡೆದ ಯೂತ್ ಯೋಗ ಫೆಸ್ಟಿವಲ್‌ನಲ್ಲಿ ಯೋಗ ಒಲಿಂಪಿಯಾಡ್, ಯೋಗ ಸ್ಕಿಟ್, ಯೋಗ ಡ್ಯಾನ್ಸ್ ಫ್ಯೂಷನ್, ಯೋಗ ಡಿಬೇಟ್, ಯೋಗ ರೀಲ್ಸ್, ಯೋಗ ಗಿಬ್ಲಿ, ಯೋಗ ಪೋಸ್ಟರ್ ಸ್ಪರ್ಧೆಗಳು ನಡೆಯಲಿವೆ.

    ಎಸ್‌ಡಿಎಮ್ ಕಾಲೇಜ್ ಉಜಿರೆ, ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು,  ಶಾರದಾ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು, ಮುನಿಯಾಲ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಹಾಗೂ ಆಳ್ವಾಸ್ ಶಾಲೆ ಹಾಗೂ ಪದವಿ ಕಾಲೇಜುಗಳ ಸುಮಾರು ೨೦೦ ರ? ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಕಾರ್ಯಕ್ರಮದಲ್ಲಿ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ, ಹಾಗೂ ಉಪಪ್ರಾಂಶುಪಾಲೆ ಡಾ. ವಿದ್ಯಾರಾಣಿ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಸರೀನಾ ರೊಡ್ರಿಗಸ್ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    12 − two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.